Category: Blog

Your blog category

ನಿಫಾ ವೈರಸ್: ಆತಂಕ ಬೇಡ, ಮುನ್ನೆಚ್ಚರಿಕೆ ಅನುಸರಿಸಿ

ಬಳ್ಳಾರಿ,ಸೆ.16ನಿಫಾ ವೈರಸ್‍ಗೆ ಸಂಬಂಧಿಸಿದಂತೆ, ಜನರು ಆತಂಕ ಪಡಬಾರದು. ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು ಹೇಳಿದ್ದಾರೆ.ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ನಿಫಾ ವೈರಸ್‍ವು ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯಲ್ಲಿ…

ವಿಎಸ್‍ಕೆ ವಿವಿಯಲ್ಲಿ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಸಂವಿಧಾನ ಓದು’ ಕಾರ್ಯಕ್ರಮ
ಸಂವಿಧಾನ ನಮ್ಮ ಧರ್ಮಗ್ರಂಥ: ರುದ್ರೇಶ.ಎಸ್.ಎನ್

ಬಳ್ಳಾರಿ,ಸೆ.1ಭಾರತ ಸಂವಿಧಾನವು ನಮ್ಮ ಧರ್ಮಗ್ರಂಥವಿದ್ದಂತೆ, ಅದನ್ನು ಪವಿತ್ರವಾಗಿ ಕಾಣಬೇಕು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾದ ರುದ್ರೇಶ ಎಸ್.ಎನ್ ಹೇಳಿದರು.ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಸಂವಿಧಾನ ಓದು’…

‘ಡೆಂಗ್ಯೂ ಜಾಗೃತಿ ರಥ’ಕ್ಕೆ ಚಾಲನೆ
ಡೆಂಗ್ಯೂ ನಿಯಂತ್ರಿಸಲು ಸಮುದಾಯದ ಸಹಭಾಗಿತ್ವ ಅಗತ್ಯ: ಡಿಹೆಚ್‍ಒ ಡಾ.ವೈ ರಮೇಶ್‍ಬಾಬು

ಬಳ್ಳಾರಿ,ಸೆ.16ಡೆಂಗ್ಯೂ ನಿಯಂತ್ರಿಸಲು ಸಮುದಾಯ ಮಟ್ಟದಲ್ಲಿ ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯ ಇಲಾಖೆಯ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಭಾರತ ಆರ್ಥಿಕವಾಗಿ ಬಲಿಷ್ಟವಾಗಲು ಇಂಜಿನಿಯರ್ಸ್ ಶ್ರಮ ಬಹಳಷ್ಟಿದೆ: ರಹಿಮ್ ಖಾನ್

ಬೀದರ್: ಭಾರತ ವಿಶ್ವದಲ್ಲಿ ಆರ್ಥಿಕವಾಗಿ ಬಲಿಷ್ಟ ರಾಷ್ಟ್ರವಾಗಿ ಹೊರಹೊಮ್ಮಲು ಇಲ್ಲಿಯ ಇಂಜಿನಿರ‍್ಸ್ಗಳ ಪರಿಶ್ರಮ ಬಹಳಷ್ಟಿದೆ ಎಂದು ರಾಜ್ಯದ ಪೌರಾಡಳಿತ ಸಚಿವರು ಹಾಗೂ ಸ್ಥಳಿಯ ಶಾಸಕ ರಹಿಮ್ ಖಾನ್ ಅಭಿಪ್ರಾಯ ಪಟ್ಟರು.ಶುಕ್ರವಾರ ರಾತ್ರಿ ಗುರುದ್ವಾರ ಹತ್ತಿರದ ಲಾವಣ್ಯ ಕನ್ವೆನಶನ್ ಹಾಲ್‌ನಲ್ಲಿ ಸರ್ ಮೋಕ್ಷಗುಂಡಮ್…

ರೋಟರಿ ಸೆಂಟ್ರಲ್ ವತಿಯಿಂದ ಶಾಲಾ ಮಕ್ಕಳಿಗೆ ತಟ್ಟೆ ಹಾಗೂ ಮಾಸ್ಕ್ ವಿತರಣೆ

ಕೋಲಾರ :- ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಉತ್ತಮ ಶಿಕ್ಷಣ ನೀಡುತ್ತಿದ್ದು ಮಕ್ಕಳು ಚೆನ್ನಾಗಿ ಓದಿ ಉತ್ತಮ ಅಂಕಗಳನ್ನು ಪಡೆದರೆ ಅದೇ ನಿಮ್ಮ ತಂದೆ ತಾಯಿಗಳಿಗೆ ನೀವೂ ನೀಡುವ ಕೊಡುಗೆ ಎಂದು ಕೋಲಾರ ರೋಟರಿ ಸೆಂಟ್ರಲ್ ಅಧ್ಯಕ್ಷ ಕೆ.ಎನ್.ಪ್ರಕಾಶ್ ಹೇಳಿದರು. ನಗರದ ಹೃದಯ…

ಹೊಸಕೋಟೆ ಕಳವಾಗಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಿ ಅವುಗಳನ್ನು ಮೂಲ ವಾರಸುದಾರರಿಗೆ ಹೊಸಕೋಟೆ ಸರ್ಕಲ್‌ ಇನ್ಸ್‌ಪೆಕ್ಟರ್ ಅಶೋಕ್ ಹಿಂದಿರುಗಿಸಿದ್ದಾರೆ. ಇದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸಕೋಟೆ ನಗರ ಐಬಿ ಸರ್ಕಲ್, ಬಸ್ ನಿಲ್ದಾಣದಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಬಸ್ ಹತ್ತುವ, ಇಳಿಯುವ ವೇಳೆ ಮೊಬೈಲ್ ಕಳ್ಳತನ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿ ಆತನಿಂದ ವಶಪಡಿಸಿಕೊಂಡಿದ್ದರು.

Dr G V ಶ್ರೀನಿವಾಸ್ ಮೂರ್ತಿ,(ಕೋಗಿಲು) ಸಹ ಪ್ರಾಧ್ಯಾಪಕರು ಮತ್ತು ಪಿಜಿ (Mcom) ಕೋ ಆರ್ಡಿನೇಟರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಿಕ್ಕಬಳ್ಳಾಪುರ ಇಲ್ಲಿ ದಿನಾಂಕ 16- 9 – 2023 ರಂದು ನಡೆದ ಪುಸ್ತಕ ಬಿಡುಗಡೆಗೊಳಿಸುವ ಕಾರ್ಯಕ್ರಮದಲ್ಲಿ ಡಾ. ಜಿ ವಿ ಶ್ರೀನಿವಾಸಮೂರ್ತಿ ಅವರು ಬರೆದಿರುವ ಮೂರು ಪುಸ್ತಕಗಳನ್ನು(1.ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ 2.ಫೈನಾನ್ಸಿಯಲ್ ಮ್ಯಾನೇಜ್ಮೆಂಟ್’ 3.ಬಿಸಿನೆಸ್ ಮ್ಯಾನೇಜ್ಮೆಂಟ್ ಮತ್ತು ಸ್ಟಾರ್ಟಪ್ಸ್) ಕೋಲಾರ ಜಿಲ್ಲಾಧಿಕಾರಿಯದಂತಹ ಶ್ರೀ ಅಕ್ರಂ ಪಾಷರವರು ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯದಂತಹ ಶ್ರೀ ರವೀಂದ್ರರವರು ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದಂತಹ ಡಾ. ಮುನಿರಾಜುರವರು ಮತ್ತು ಡಾ. ಸುನಿತ ಮತ್ತು ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ? – ಈ ಕುರಿತು ಓದಿರಿ, ಸನಾತನ ಸಂಸ್ಥೆಯ ವಿಶೇಷ ಲೇಖನ !

ಗಣೇಶ ಚತುರ್ಥಿಯನ್ನು ಕುಟುಂಬದಲ್ಲಿ ಯಾರು ಆಚರಿಸಬೇಕು, ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಯಂದು ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ. ಕುಟುಂಬದಲ್ಲಿ ಯಾರು ಆಚರಿಸಬೇಕು ?ಗಣೇಶ…

ಚಿಕ್ಕಬಳ್ಳಾಪುರ: ಅಖಿಲ ಭಾರತ ಮಹಿಳಾ ಕಾಂಗ್ರೆಸ್ 40 ನೇ ಸಂಸ್ಥಾಪನಾ ದಿನವನ್ನು ಚಿಕ್ಕಬಳ್ಳಾಪುರದಲ್ಲಿ  ಆಚರಿಸಲಾಯಿತು.ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಯಾಸ್ಮಿನ್ ತಾಜ್,ರಾಜ್ಯ ಮಹಿಳಾ ಉಪಾಧ್ಯಕ್ಷೆ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಮಹಿಳಾ ವಿಂಗ್ ಮಮತಾ ಮೂರ್ತಿ ಉಪಸ್ಥಿತಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಕಾಂಗ್ರೆಸ್ ಧ್ವಜಾರೋಹಣ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಪರಸ್ಪರನೆ ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆ
ಹಾಜರಿದ್ದ ಮಹಿಳಾ ಕಾಂಗ್ರೆಸ್ನವರು ಕಾಂಗ್ರೆಸ್ ಪಕ್ಷವನ್ನ ಪ್ರತಿ ಹಂತದಲ್ಲೂ ಬೆಂಬಲಿ ಸುವುದಾಗಿ ಪ್ರತಿಜ್ಞೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಮಹಿಳಾ ಉಪಾಧ್ಯಕ್ಷ  ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಮಹಿಳಾ ವಿಂಗ್ ಮಮತಾ ಮೂರ್ತಿ ಇಂದು ಮಹಿಳಾ ಕಾಂಗ್ರೆಸ್ನ 40ನೇ ವರ್ಷದ ಸಂಸ್ಥಾಪನ ದಿನದಂದು ಪಕ್ಷದ ಧ್ವಜಾರೋಹಣ ಮಾಡಿದ್ದು ಇಂದು ನಮಗೆ ಒಂದು ದೂಡ್ಡ ಹಬ್ಬ,ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುವ ಪಕ್ಷ ಎಂದರೆ ಅದು ಕೇವಲ ಕಾಂಗ್ರೆಸ್ ಪಕ್ಷಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ಶಕ್ತಿಯಾಗಿ ನಿಂತಿದೆ ಮಹಿಳೆಯರಿಗೆ ಹಲವು ಅವಕಾಶಗಳನ್ನು ಕಲ್ಪಿಸಿಕೊಡುವ ಮೂಲಕ ಅವರನ್ನು ಸದೃಢಗೊಳಿಸುತ್ತಿದೆ.ರಾಜ್ಯ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಕಾರ್ಯಕ್ರಮಗಳುಯಶಸ್ವಿಯಾಗುತ್ತಿದೆ.ರಾಜ್ಯದ ನಂತರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ತರಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಯಾಸ್ಮಿನ್ ತಾಜ್ ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ ಪಕ್ಷದಲ್ಲಿ ಮಹಿಳೆಯರಿಗೆ ಎಲ್ಲ ಅವಕಾಶ ಕಲ್ಪಿಸಲಾಗಿದೆ ಸ್ಥಾನ ಮಾನ ಸ್ವಾತಂತ್ರ್ಯ ನೀಡಲಾಗಿದೆ ಇಂದು ಮಹಿಳೆಯರು,ಆರ್ಥಿಕವಾಗಿ ಶೈಕ್ಷಣಿಕವಾಗಿ,ಸಾಮಾಜಿಕವಾಗಿ,ರಾಜಕೀಯವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ ಹೆಣ್ಣಿನ ಸ್ಥಾನ ಮಾನ ಶಕ್ತಿಯನ್ನು ಹೆಚ್ಚಿಸುತ್ತಿರುವುದು ಕಾಂಗ್ರೆಸ್ ಪಕ್ಷ,ಮಹಿಳೆಯರನ್ನು ಹೆಚ್ಚು ಶಕ್ತಿಶಾಲಿಯಾಗಲು ಪಕ್ಷ ಗಂಭೀರವಾಗಿದೆ ಎಂದ ಅವರು ಅನ್ಯಯಾಯಕ್ಕೆ ಒಳಗಾದ ಮಹಿಳೆಯರಿಗೆ ನ್ಯಾಯದೊರಕಿಸಲು ರಾಜ್ಯಧಕ್ಷೆ ಹಾಗೂ ರಾಷ್ಟ್ರೀಯ ಅಧ್ಯಕ್ಷೆ ಸದಾ ಮುಂದೆ ಇದ್ದಾರೆ ಎಂದ ಅವರು ರಾಜ್ಯ ಸರ್ಕಾರ ಮಹಿಳೆಯರಿಗೆ ನಾನ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ ನುಡಿದಂತೆ ನಡೆಯುತ್ತಿದೆ ಎಂದ ಅವರು ಕೇವಲ ನಮ್ಮ ರಾಜ್ಯದ ಮಹಿಳೆಯರು ಶಕ್ತಿಶಾಲಿಯಾದರೆ ಸಾಲದು ಇಡೀ ದೇಶದ ಮಹಿಳೆಯರು ಶಕ್ತಿಶಾಲಿ ಆಗಬೇಕು ಅದಕ್ಕಾಗಿ ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ನಾವೆಲ್ಲರೂ ಪಕ್ಷಕ್ಕಾಗಿ ದುಡಿಯುತ್ತೇವೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷೆ ವೆಂಕಟ್ ರತ್ನಮ್ಮ,ಚಿಕ್ಕಬಳ್ಳಾಪುರ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವೆಂಕಟ್ ಲಕ್ಷ್ಮೀ,ಸರೋಜಮ್ಮ,
ಬಾಗೇಪಲ್ಲಿಬ್ಲಾಕ್ ಅಧ್ಯಕ್ಷೆ ನಜೀರಾ ಬೇಗಂ ಹಾಗೂ ಪದಾಧಿಕಾರಿಗಳು ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಇದ್ದರು.