Category: ರಾಜಕೀಯ

ರೇಣುಮಾಕಲಹಳ್ಳಿ ವಸತಿ ಶಾಲೆಗೆ ಸಂದೀಪ್ ರೆಡ್ಡಿ ಯಿಂದ ವಾಟರ್ ಫಿಲ್ಟರ್ ಕೊಡುಗೆ

ರೇಣುಮಾಕಲಹಳ್ಳಿ ವಸತಿ ಶಾಲೆಗೆ ಸಂದೀಪ್ ರೆಡ್ಡಿ ಯಿಂದ ವಾಟರ್ ಫಿಲ್ಟರ್ ಕೊಡುಗೆ ಚಿಕ್ಕಬಳ್ಳಾಪುರ: ತಾಲ್ಲೂಕಿನ ರೇಣುಮಾಕಲಹಳ್ಳಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ ಭೇಟಿ ನೀಡಿದ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ…

ಚಿಕ್ಕಬಳ್ಳಾಪುರ.ಜು 11- ರಾಜ್ಯದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾಗಿ ಮುಸ್ಲಿಂ ಸಮುದಾಯದವರಿಗೆ 2ಸಾವಿರ ಕೋಟಿ ರೂ ಮೀಸಲಿಟ್ಟಿರುವ ಮುಖ್ಯಮಂತ್ರಿಗಳಿಗೆ ಹಾಗೂ ಸಚಿವ ಸಂಪುಟ ಸಚಿವರಿಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಬಿ.ಎಸ್.ರಫೀ ಉಲ್ಲಾ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ ಈ ಹಿಂದಿನ ಬಿಜೆಪಿ ಸರ್ಕಾರ ಕಳೆದ ಮೂರುವರೆ ವರ್ಷಗಳಲ್ಲಿ ನಮ್ಮ ಸಮುದಾಯಕ್ಕೆ ಯಾವುದೇ ರೀತಿಯ ಅನುಕೂಲಗಳನ್ನು ಮಾಡದೆ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಸಹ ನಿಲ್ಲಿಸಲಾಗಿತ್ತು ಇದರಿಂದಾಗಿ ಸಮುದಾಯದ ಅನೇಕ ಬಡ ವಿದ್ಯಾರ್ಥಿಗಳಿಗೆ ತೀರ ತೊಂದರೆ ಉಂಟಾಗಿತ್ತು.ಇವೆಲ್ಲವನ್ನ ಪರಿಗಣಿಸಿರುವ ರಾಜ್ಯದ ಮುಖ್ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಆದೇಶ,10 ಹೊಸ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗಳು ಆರಂಭ,65 ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಗಳ ಉನ್ನತಿಕರಣ, ಬೆಂಗಳೂರಿನ ಹಜ್ ಭವನದಲ್ಲೇ ಐಎಎಸ್ ಮತ್ತು ಕನ್ನಡ ಕೆಎಎಸ್ ವಸತಿ ಸಹಿತ ತರಬೇತ.. ವಿದೇಶದಲ್ಲಿ ಅಧ್ಯಯನ ಮಾಡಲು ಶೂನ್ಯ ಬಡ್ಡಿಯಲ್ಲಿ ಸಾಲ… ಅಲ್ಪಸಂಖ್ಯಾತರು ನಾಲ್ಕು ಚಕ್ರದ ವಾಹನ ಖರೀದಿಗೆ 3 ಲಕ್ಷಗಳ ನೆರವು… ಜೈನರ ಪುಣ್ಯಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ಮೀಸಲು ರಾಜ್ಯದಲ್ಲಿ 49,000 ವಖ್ಫ್ ಆಸ್ತಿ ಸಂರಕ್ಷಣೆಗೆ 50 ಕೋಟಿ… ಗುರುದ್ವಾರ ಅಭಿವೃದ್ಧಿಗೆ 25 ಕೋಟಿ ಮೀಸಲು… ಕೌಶಲ್ಯಭಿವೃದ್ಧಿ ತರಬೇತಿಗೆ ನಾಲ್ಕು ಕೋಟಿ ಮೀಸಲು…ಅರ್ಧಕ್ಕೆ ನಿಂತ ಶಾದಿ ಮಹಲ್ ಮರು ನಿರ್ಮಾಣಕ್ಕೆ 54 ಕೋಟಿ ರೂ ಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿ ಉದಾರತೆ ಮೆರೆದಿದೆ ಎಂದು ಬಿ.ಎಸ್.ರಫೀ ಉಲ್ಲಾ ಪ್ರಕಟಣೆಯಲ್ಲಿ ವಿವರಿಸಿ ಈ ಹಿಂದಿನ ಬಿಜೆಪಿ ಸರ್ಕಾರ ರದ್ದುಗೊಳಿಸಿದ್ದ 2B ಮೀಸಲಾತಿಯನ್ನು ಪುನಃ ನೀಡಲು ಮನವಿ ಮಾಡಿದ್ದಾರೆ.

ಹಿಂದುಳಿದ ಜನಾಂಗದ ಶೈಕ್ಷಣಿಕ ಸಾಮಾಜಿಕ ಅಭಿವೃದ್ಧಿಗೆ ಎಲ್ ಜಿ ಹಾವನೂರವರ ಕೊಡುಗೆ ಅಪಾರ :

ಹಿಂದುಳಿದ ಜನಾಂಗದ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ದಿವಂಗತ ಎಲ್ ಜಿ ಹಾವನೂರವರ ಕೊಡುಗೆ ಅಪಾರವಾದದ್ದು, ಎಲ್ ಜಿ ಹಾವನೂರುರವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ, ಕಾನೂನು ಮಂತ್ರಿಯಾಗಿ, ತುಳಿತಕ್ಕೊಳಗಾದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕೊಡಿಸುವ ಕೆಲಸ ಮಾಡಿದವರಲ್ಲಿ ಕರ್ನಾಟಕಕ್ಕೆ ಮೊದಲನೆಯ…

ಮಾಧ್ಯಮ ಮಾಹಿತಿ:

ವಿವಿ ಪುರಂ ನ ತಿಂಡಿ ಬೀದಿ(ಫುಡ್ ಸ್ಟ್ರೀಟ್) ಅಭಿವೃದ್ಧಿ ಕಾಮಗಾರಿ ಪರಿಶೀಲನೆ: ನಗರದ ವಿ.ವಿ ಪುರಂನಲ್ಲಿರುವ ತಿಂಡಿ ಬೀದಿಯನ್ನು ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ವಿನೂತನ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, 2023ರ ಆಗಸ್ಟ್ ತಿಂಗಳಲ್ಲಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದೆಂದು ದಕ್ಷಿಣ ವಲಯ…

ನೂತನ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಅಧಿಕಾರ ಸ್ವೀಕಾರ

ಧಾರವಾಡ :- ಜು.10 ರಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಗೀತಾ ಸಿ.ಡಿ., ಅವರು ಇಂದು ಮುಂಜಾನೆ ಅಧಿಕಾರ ಸ್ವೀಕರಿಸಿದರು.ಶ್ರೀಮತಿ ಗೀತಾ ಸಿ.ಡಿ., ಅವರು ಈ ಮೊದಲು ಹಾವೇರಿ ಜಿಲ್ಲೆಯ ಜಿಲ್ಲಾನಗರಾಭಿವೃದ್ಧಿಕೋಶದ ಯೋಜನಾ…

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಪ್ರತ್ಯೇಕ ವೆಬ್ ಸೈಟ್ ಲಾಂಚ್‌

ಎಲ್ಲ ಸಮಸ್ಯೆಗಳಿಗೂ ಪರಿಹಾರಕ್ಕೆ ವೇದಿಕೆಯಾಗಲಿದೆ: ಪ್ರದೀಪ್ ಚಿಕ್ಕಬಳ್ಳಾಪುರ :- ನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮದ ಮೂಲಕ ಕ್ಷೇತ್ರದ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳಿಗೆ ಸ್ಪಂದಿಸುವ ವಿನೂತನ ಕಾರ್ಯಕ್ರಮ ಮಾಡಿ ಮಾದರಿಯಾಗಿದ್ದ ಶಾಸಕ ಪ್ರದೀಪ್ ಈಶ್ವರ್ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.ಚಿಕ್ಕಬಳ್ಳಾಪುರ…

ಕಸ್ತೂರಿ ಬಾ ಬಾಲಕಿಯರ ವಸತಿ ನಿಲಯಕ್ಕೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಲೀಂ ಅಹಮದ್ ಭೇಟಿ

ಪಾವಗಡ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಲೀಂ ಅಹಮದ್ ಹಾಗೂ ತಂಡದವರು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಆಸ್ಪತ್ರೆ ಪಕ್ಕದಲ್ಲಿರುವ ಕಸ್ತೂರಿ ಬಾ ಬಾಲಕಿಯರ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿರುವ…

ಕರ್ನಾಟಕ ಉಚ್ಚ ನ್ಯಾಯಾಲಯ, ಧಾರವಾಡ ಪೀಠದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣಗಳ ಇತ್ಯರ್ಥ
*** ಧಾರವಾಡ :- ಉಚ್ಚ ನ್ಯಾಯಾಲಯ, ಧಾರವಾಡ ಪೀಠದಲ್ಲಿ ಇಂದಿನ ಜು. 8 ರಂದು ಲೋಕ್ ಅದಾಲತ್‌ದಲ್ಲಿ ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್, ಹಿರಿಯ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ ಧಾರವಾಡ ಪೀಠ, ಧಾರವಾಡ, ಇವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಏರ್ಪಡಿಸಲಾಗಿತ್ತು. ಸದರಿ ಅದಾಲತ್ ನಲ್ಲಿ ಹಿರಿಯ ನ್ಯಾಯಮೂರ್ತಿಗಳೊಂದಿಗೆ ನ್ಯಾಯಮೂರ್ತಿಗಳಾದ ಎಸ್. ವಿಶ್ವಜಿತ್ ಶೆಟ್ಟಿ, ವಿ. ಶ್ರೀಶಾನಂದ, ಅನಿಲ ಬಿ ಕಟ್ಟೆ, ಮತ್ತು ವೆಂಕಟೇಶ ನಾಯ್ಕ ಟಿ. ಹಾಗೂ ಇವರೊಂದಿಗೆ ಲೋಕ ಅದಾಲತ್‌ನ ಸದಸ್ಯರುಗಳಾದ ಎಮ್. ಸಿ ಹುಕ್ಕೇರಿ, ಪ್ರಶಾಂತ ವಿ. ಮೊಗಳಿ, ವಿ. ಜಿ. ದಳವಾಯಿ, ಬಿ. ಎ. ಪಾಟೀಲ ಮತ್ತು ರಾಘವೇಂದ್ರ ಎ. ಪುರೋಹಿತ ಈ ರೀತಿಯಾಗಿ ಒಟ್ಟು ಪೀಠಗಳನ್ನು ಆಯೋಜಿಸಲಾಗಿತ್ತು. ಸದರಿ ಅದಾಲತನಲ್ಲಿ ಒಟ್ಟು 858 ಪ್ರಕರಣಗಳನ್ನು ವಿಚಾರಣೆಗೆಂದು ಗುರುತಿಸಿಕೊಳ್ಳಲಾಗಿತ್ತು. ಆ ಪೈಕಿ ಒಟ್ಟು 375 ಪ್ರಕರಣಗಳನ್ನು 8,78,05,569/- ಮೊತ್ತಕ್ಕೆ ಇತ್ಯರ್ಥ ಪಡಿಸಲಾಯಿತು.

ಈ ಅದಾಲತ್ ನಲ್ಲಿ ಹಿರಿಯ ನ್ಯಾಯಮೂರ್ತಿಗಳಾದ ಎಸ್‌. ಜೆ. ಪಂಡಿತ್ ಹಾಗೂ ಸದಸ್ಯರಾದ ಎಮ್. ಸಿ. ಹುಕ್ಕೇರಿ ಇವರನ್ನು ಒಳಗೊಂಡ ಅದಲಾತ್ ಪೀಠವು ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 37 ವರ್ಷಗಳ ಹಳೆಯದಾದ ದಿವಾಣಿ ಪ್ರಕರಣವನ್ನು ವಕೀಲರುಗಳಾದ ಸಂಜಯ ಎಸ್. ಕಟಗೇರಿ ಮತ್ತು…

ಚಿಕ್ಕಬಳ್ಳಾಪುರದಲ್ಲಿ‌ ಮಾಜಿ/ಹಾಲಿ ಶಾಸಕರ ನಡುವೆ ದೀಪ ಹಚ್ಚುವ ಟಾಕ್ ವಾರ್ ಜೋರು, ಮಾಜಿ ಸಚಿವ ಡಾ.ಕೆ.ಸುಧಾಕರ್ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿಲ್ಲ 
ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್ ಈಶ್ವರ್ ಭೋಗನಂದೀಶ್ವರ ದೇವಸ್ಥಾನದಲ್ಲಿ ಬಂದು ದೀಪ ಹಚ್ಚಲಿ ಎಂದು ಮಾಜಿ ಸಚಿವ ಸುಧಾಕರ್ ಪ್ರದೀಪ್ ಈಶ್ವರ್ ವಿರುದ್ದ ಸವಾಲ್ ಹಾಕಿದ್ದ ವಿಚಾರಕ್ಕೆ ಶಾಸಕ ಈಶ್ವರ್ ಪ್ರತಿಕ್ರಿಯೆ ನೀಡಿದ್ದು ನಿವೇಶನ ವಿಚಾರದಲ್ಲಿ ನಾನು ಸುಳ್ಳು ಆರೋಪ ಮಾಡುತಿದ್ದೇನೆ ಅನ್ನೋದಾದ್ರೆ ಡಾ.ಕೆ.ಸುಧಾಕರ್ ಕೋವಿಡ್ ಟೈಮ್ನಲ್ಲಿ ಅವ್ಯವಹಾರ ಮಾಡಿಲ್ಲ ಅಂತ ದೀಪ ಹಚ್ಚಲಿ ನೋಡೋಣ ಎಂದು ಪ್ರತಿ ಸವಾಲು ಹಾಕಿದ್ದಾರೆ.ಚಿಕ್ಕಬಳ್ಳಾಪುರ ನಗರದ ಖಾಸಗಿ ಹೊಟೇಲೊಂದರಲ್ಲಿ ಎಂ ಎಲ್ ಎ ಹೆಸರಲ್ಲಿ ವೆಬ್ ಸೈಟ್ ಲಾಂಚ್ ಮಾಡಿದ ಮೇಲೆ ಮಾದ್ಯಮಗಳೊಂದಿಗೆ ಮಾತನಾಡಿ 
ಅವರು ನನ್ನ ಮೇಲೆ ಮಾಡಿರುವ ಆರೋಪ ಸಾಭೀತುಪಡಿಸಿ ದೀಪ ಹಚ್ವಲಿ ಅದರ ಜತೆಗೆ ಕೋವಿಡ್ ವೇಳೆ ಸಾವಿರಾರು ಕೋಟಿ ಅವ್ಯವಹಾರ ನಡೆಸಿಲ್ಲ ಅಂತ ದೀಪ ಹಚ್ಚಲಿ ನೋಡೋಣ ನಾನು 
ಎಲ್ಲಾ ದಾಖಲೆ ಸಮೇತ ಬಂದು ನಂದಿ ದೇವಸ್ಥಾನದ ಮುಂದೆ ಬಿಡುಗಡೆ ಮಾಡ್ತೇನೆ ಎಂದು ಸವಾಲು ಹಾಕಿದ್ದಾರೆ.ಸಾದ್ಯವಾದರೆ ಎಸ್.ಐ.ಟಿ.ತನಿಖೆಗೂ ನಮ್ಮ ಸರ್ಕಾರ ಚಿಂತನೆ ನಡೆಸಿದೆ ಕೊರೋನಾ ವೇಳೆ ಭ್ರಷ್ಟಾಚಾರ ಮಾಡಿಲ್ಲ ಅಂತ ದೀಪ ಹಚ್ಚಲಿ ನೊಡೋಣ ದೀಪದಿಂದ ದೀಪವ ಹಚ್ಚಬೇಕು ಮಾನವ ಎಂಬ ಹಾಡು ಹಾಕ್ಕೊಂಡು ದೀಪ ಹಚ್ಚೋಣ ಎಂದು ಶಾಸಕ ಪ್ರದೀಪ್ ಈಶ್ವರ್ ಮಾಜಿ ಸಚಿವ ಡಾ.ಕೆ.ಸುಧಾಕರ್ ಗೆ ವ್ಯಂಗವಾಗಿ ಟಾಂಗ್ ನೀಡಿದರು.

ಬ್ರಹ್ಮಾಕುಮಾರಿ ಕೇಂದ್ರದಲ್ಲಿ ಸಕಾರಾತ್ಮಕ ಪರಿವರ್ತನೆ ವರ್ಷ-2023 ಪ್ರಾರಂಭೋತ್ಸವ
ನಮ್ಮನ್ನು ನಾವು ಪ್ರೀತಿಸುವುದರ ಮೂಲಕ ಸಕಾರಾತ್ಮಕ ಪರಿವರ್ತನೆ ಮಾಡೋಣ – ಡಾ. ಪ್ರೇಮ್

ಬೀದರ: ಪ್ರತಿದಿನ ಬೆಳಿಗ್ಗೆ ಎದ್ದು ನಮ್ಮನ್ನು ನಾವು ಪ್ರೀತಿಸುವುದನ್ನು ಕಲಿಯುವುದರ ಮುಖಾಂತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಪ್ರಯತ್ನಿಸಬೇಕೆಂದು ರಾಜಸ್ಥಾನದ ಕ್ಯಾನ್ಸರ್ ತಜ್ಞರಾದ ಡಾ. ಪ್ರೇಮ್ ಮಸಂದ್ ಭಾಯಿ ತಿಳಿಸಿದರು.ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ಪಾವನಧಾಮ ಕೇಂದ್ರದಲ್ಲಿ ಆಯೋಜಿಸಿದ “2023ರ ಸಕಾರಾತ್ಮಕ…