Month: June 2023

ಮಳೆಗಾಗಿ ಕತ್ತೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು!

ಕತ್ತೆಗಳ ಮದುವೆ ಕಾರ್ಯ ನೆರವೇರಿಸಿದರೆ ಮಳೆ ಬರುತ್ತದೆ ಎಂಬ ನಂಬಿಕೆಯಿಂದ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಕ್ರಸ್ ಗ್ರಾಮಸ್ಥರು ಒಂದು ಗಂಡು ಮತ್ತು ಹೆಣ್ಣು ಕತ್ತೆಗಳನ್ನು ಗ್ರಾಮಕ್ಕೆ ಬರಮಾಡಿಕೊಂಡು ಗ್ರಾಮದ ಬಸವೇಶ್ವರ ನಗರ ದಲ್ಲಿ ಮದುವೆ ಮಂಟಪ್ಪ ನಿರ್ಮಿಸಿ ಮನುಷ್ಯರ ಮದುವೆ ಸಮಾರಂಭಗಳಲ್ಲಿ…

ಪ್ರೊ.ಎನ್.ಆರ್.ಶೆಟ್ಟಿಯವರಿಗೆ ಜೀವಮಾನದ ಸಾಧನೆ ಪ್ರಶಸ್ತಿ

ವಿಶ್ವ ಸಂವಿಧಾನ ಮತ್ತು ಸಂಸತ್ತು ಸಂಘ ದಿಂದ ವಿಶ್ವ ಶೈಕ್ಷಣಿಕ ರುವಾರಿ ವಿಭಾಗದ ಪ್ರಶಸ್ತಿ: ಯಲಹಂಕ: ಮನುಜಕುಲ ಒಂದೇ’ ಎಂಬ ಧ್ಯೇಯದಿಂದ ಸ್ಥಾಪಿತವಾದ ‘ವಿಶ್ವ ಸಂವಿಧಾನ ಮತ್ತು ಸಂಸತ್ತು ಸಂಘ’ದ ವಿಶ್ವದ ಶೈಕ್ಷಣಿಕ ರೂವಾರಿ ವಿಭಾಗದ ಜೀವಮಾನದ ಸಾಧನೆಯ ಪ್ರಶಸ್ತಿಗೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ, ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಹಿರಿಯ ಸಲಹೆಗಾರ ಪ್ರೊ. ಎನ್.ಆರ್. ಶೆಟ್ಟಿ ಭಾಜನರಾಗಿದ್ದಾರೆ. ಅಮೆರಿಕಾದ ವರ್ಜೀನಿಯಾ ರಾಜ್ಯದ ಪೀಸ್ ಪೆಂಟಗಾನ್‌ನಲ್ಲಿರುವ ‘ವಿಶ್ವ ಸಂವಿಧಾನ ಮತ್ತು ಸಂಸತ್ತು ಸಂಘ’ದ ಪ್ರಧಾನ ಕಛೇರಿಯು, 47ನೇ ಪೃಥ್ವಿ ಸಂವಿಧಾನ ದಿನಾಚರಣೆಯ ಅಂಗವಾಗಿ ವಿಶ್ವದೆಲ್ಲೆಡೆ ಆಯ್ದ ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದು, ಈ ಸಾಧಕರಲ್ಲಿ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಹಿರಿಯ ಸಲಹೆಗಾರ ಪ್ರೊ.ಎನ್.ಆರ್.ಶೆಟ್ಟಿಯವರಿಗೆ ಜೀವಮಾನದ ಸಾಧನೆ ಪ್ರಶಸ್ತಿ ಮತ್ತು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಹೆಚ್.ಸಿ.ನಾಗರಾಜ್‌ರವರಿಗೆ ‘ಶಿಕ್ಷಕ-ಬದಲಾವಣೆಯ ರುವಾರಿ’ ಪ್ರಶಸ್ತಿ ದೊರೆತಿದೆ.ಜೂನ್ 27ರಂದು ರಂದು 47ನೇ ಪೃಥ್ವಿ ಸಂವಿಧಾನ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವ ಸಂವಿಧಾನ ಮತ್ತು ಸಂಸತ್ತು ಸಂಘ ದ ಜಾಗತಿಕ ಉಪಾಧ್ಯಕ್ಷ ಪ್ರೊ.ಇ.ಪಿ.ಮೆನನ್ ಪ್ರೊ.ಎನ್.ಆರ್.ಶೆಟ್ಟಿ ಮತ್ತು ಡಾ.ಹೆಚ್.ಸಿ.ನಾಗರಾಜ್‌ರವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು. ‘ವಾಷಿಂಗ್‌ಟನ್‌ನಲ್ಲಿರುವ ವಿಶ್ವ ತಾಂತ್ರಿಕ ಶಿಕ್ಷಣ ಮಂಡಳಿಯ ಉಪಾಧ್ಯಕ್ಷರಾಗಿ, ಭಾರತದ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿ, ನಿಟ್ಟೆ ವಿಶ್ವ ವಿದ್ಯಾಲಯದ ಕುಲಪತಿಯಾಗಿ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾಗಿ ಪ್ರೊ. ಎನ್.ಆರ್. ಶೆಟ್ಟಿ ಅವರು ಸಲ್ಲಿಸಿರುವ ಅನುಪಮ ಸೇವೆಗಾಗಿ ಈ ಪ್ರಶಸ್ತಿ ಪ್ರದಾನ ಮಾಡಲು ನಮ್ಮ ಕಛೇರಿ ನಿರ್ಧರಿಸಿದೆ, ಎಂದು ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಪ್ರೊ. ಇ.ಪಿ. ಮೆನನ್ ಮೆಚ್ಚಿಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ‘ವಿಶ್ವಸಂವಿಧಾನ ಮತ್ತು ಸಂಸತ್ತು ಸಂಘ’, ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಹೆಚ್.ಸಿ. ನಾಗರಾಜ್ ಅವರಿಗೆ, ‘ಟೀಚರ್-ಚೇಂಜ್ ಮೇಕರ್’ (ಶಿಕ್ಷಕ-ಬದಲಾವಣೆಯ ರೂವಾರಿ) ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿಶ್ವಾದ್ಯಂತ ವಿದ್ಯಾರ್ಥಿ ಬಳಗವನ್ನು ಹೊಂದಿರುವ ಡಾ. ಹೆಚ್.ಸಿ. ನಾಗರಾಜ್ ಅವರ ಹೆಸರನ್ನು ಹತ್ತಾರು ದೇಶಗಳಲ್ಲಿ ನೆಲೆನಿಂತಿರುವ ಅವರ ಶಿಷ್ಯರು ಸೂಜಿಸಿದ್ದರು. ಇದನ್ನು ಪೀಸ್ ಪೆಂಟಗಾನ್‌ನಲ್ಲಿರುವ ನಮ್ಮ ಮಾತೃ ಸಂಸ್ಥೆ ಪರಿಗಣಿಸಿದೆ ಎಂದು ವಿಶ್ವ ಸಂವಿಧಾನ ಮತ್ತು ಸಂಸತ್ತು ಸಂಘ ದ ಕರ್ನಾಟಕದ ಪ್ರತಿನಿಧಿ ಪಿ.ನರಸಿಂಹಮೂರ್ತಿ ಅವರು ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ತಿಳಿಸಿದರು. 27 ಜೂನ್ 1977ರಲ್ಲಿ ಅಸ್ತಿತ್ವಕ್ಕೆ ಬಂದ ‘ವಿಶ್ವಸಂವಿಧಾನ ಮತ್ತು ಸಂಸತ್ತು ಸಂಘ’ದ ಪೃಥ್ವಿ ಸಂವಿಧಾನದ ಅನುಮೋದನೆಗೆ ಜಗತ್ತಿನ 25 ರಾಷ್ಟ್ರಗಳ 138 ಹಿರಿಯ ಮಾನವತಾವಾದಿಗಳು ಸಹಿಹಾಕಿದ್ದಾರೆ. ಮಾನವೀಯತೆಯನ್ನು ಎತ್ತಿ ಹಿಡಿಯುವ ಹಾಗೂ ರಾಜಕೀಯ ಕಾರಣಕ್ಕಾಗಿ ನಡೆಯುವ ಪರಸ್ಪರ ಯುದ್ಧಗಳನ್ನು ಕೊನೆಗೊಳಿಸುವ ಮಹದೋದ್ದೇಶ ಪೃಥ್ವಿ ಸಂವಿಧಾನದ ಧ್ಯೇಯವಾಗಿದೆ.

ತಾಲ್ಲೂಕಿನಾದ್ಯಂತ ಕೆಂಪೇಗೌಡರ 514ನೇ ಜಯಂತಿ ಆಚರಣೆ

ಶಿಡ್ಲಘಟ್ಟ: ರಾಜ್ಯಾದ್ಯಂತ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಎಲ್ಲಾ ಕಡೆ ಕೆಂಪೇಗೌಡರ ಪ್ರತಿಮೆಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುವ ಮೂಲಕ ಹಮ್ಮಿಕೊಳ್ಳಲಾಗಿದ್ದು ಅದರಂತೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿಯು ಸಹ ಬಹಳ ವಿಜೃಂಭಣೆಯಿಂದ ನೆರವೇರಿಸಲಾಯಿತು ಇದಕ್ಕೆ ಎಲ್ಲಾ ಸಮುದಾಯದವರು ಸಾಕ್ಷಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ/ ಧನುಂಜಯರೆಡ್ಡಿಯವರು…

ಮಾದಕ ವಸ್ತುಗಳಿಗೆ ಬಲಿಯಾಗದಂತೆ ಯುವ ಸಮುದಾಯವು ಎಚ್ಚರ ವಹಿಸಬೇಕು: ಡಾ.ವೀರೇಂದ್ರ ಕುಮಾರ್

ಬಳ್ಳಾರಿ,ಜೂ.28: ಯುವ ಸಮುದಾಯವು ಮಾದಕ ವಸ್ತುಗಳ ಬಗ್ಗೆ ಅರಿವು ಹೊಂದಬೇಕು ಹಾಗೂ ಅವುಗಳಿಂದ ದೂರವಿರಬೇಕು. ಮಾದಕ ವಸ್ತುಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಟಾನ ಅಧಿಕಾರಿ ಹಾಗೂ ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ.ವೀರೇಂದ್ರ ಅವರು…

ಮಾದಕ ವಸ್ತುಗಳಿಂದ ಯುವಕರು ದೂರ ಇರಿ: ಹೊಸಕೋಟೆ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗುರುರಾಜ್ ಕಿವಿಮಾತು

ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023ರ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ ವನ್ನು ಆಚರಿಸಲಾಯಿತು.2023ರ ಘೋಷವಾಕ್ಯ-“ಜನರು ಮೊದಲು, ಕಳಂಕ ಮತ್ತು ತಾರತಮ್ಯ ನಿಲ್ಲಿಸಿ,…

ನಿಶ್ಚಿತ ಗುರಿ ಇಟ್ಟುಕೊಂಡು ಶೈಕ್ಷಣಿಕ ಸಾಧನೆ ಮಾಡಿ ದುಶ್ಚಟಗಳಿಗೆ ದಾಸರಾಗಬೇಡಿ : ವಿದ್ಯಾರ್ಥಿಗಳಿಗೆ ಎಸ್ ಆರ್ ವಿಶ್ವನಾಥ್ ಕಿವಿಮಾತು

ಯಲಹಂಕ : ವಿದ್ಯಾರ್ಥಿ ಜೀವನ ಅತ್ಯಂತ ಪವಿತ್ರವಾದ ಕಾಲಘಟ್ಟವಾಗಿದ್ದು, ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ, ನಿಶ್ಚಿತ ಗುರಿ ಇಟ್ಟುಕೊಂಡು ಶೈಕ್ಷಣಿಕ ಸಾಧನೆಯ ಕಡೆಗೆ ಹೆಚ್ಚು ಗಮನ ಹರಿಸಬೇಕೆಂದು ಯಲಹಂಕ ಶಾಸಕ, ಟಿಟಿಡಿ ಆಡಳಿತ ಮಂಡಳಿ ನಿರ್ದೇಶಕ ಎಸ್ ಆರ್ ವಿಶ್ವನಾಥ್ ವಿದ್ಯಾರ್ಥಿಗಳಿಗೆ ಕಿವಿಮಾತು…

ಕೆಂಪೇಗೌಡರ ಕೊಡುಗೆ ಸ್ಮರಣೀಯ:  ಎಸ್ ಆರ್ ವಿಶ್ವನಾಥ್

ಬೃಹತ್ ಮೆರವಣಿಯ ಮೂಲಕ 514ನೇ ಕೆಂಪೇಗೌಡ ಜಯಂತಿ ಆಚರಣೆ : ಯಲಹಂಕ : ಬೆಂಗಳುರು ನಗರದ ಜನತೆಗೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಸ್ಮರಣೀಯ, ವಿವಿಧ ಸಮುದಾಯಗಳ ಜನತೆಯ ಜೀವನೋಪಾಯಕ್ಕಾಗಿ 500 ವರ್ಷಗಳ ಹಿಂದೆಯೇ ವ್ಯವಸ್ಥಿತ ನಗರವನ್ನು ನಿರ್ಮಿಸಿರುವ ಕೆಂಪೇಗೌಡರ  ದೂರದೃಷ್ಟಿ ನಿಜಕ್ಕೂ…

ಸಹಕಾರನಗರದ ವಿವಿಧ ಸಂಘಸಂಸ್ಥೆಗಳಿಂದ ಸಚಿವ ಕೃಷ್ಣಬೈರೇಗೌಡರಿಗೆ ಅಭಿನಂದನಾ ಸಮಾರಂಭ

ಬ್ಯಾಟರಾಯನಪುರ : ಕ್ಷೇತ್ರದ ಕೊಡಿಗೇಹಳ್ಳಿಯಲ್ಲಿರುವ ಶಾಸಕರ ಗೃಹ ಕಚೇರಿಯ ಜತೆಗೆ ಕ್ಷೇತ್ರದ ಜನತೆಯ ಕಂದಾಯ ಇಲಾಖೆಯ ಕುಂದುಕೊರತೆಗಳನ್ನು ಆಲಿಸಲು, ಇಲಾಖೆಯ ಅಗತ್ಯ ಸೇವೆಗಳನ್ನು ನಿರ್ವಹಿಸಲು ಇನ್ನೊಂದು ಹೆಚ್ಚುವರಿ ಕಚೇರಿ ಆರಂಭಿಸುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಸಹಕಾರನಗರದ ಶ್ರೀ. ವಿನಾಯಕ ದೇವಸ್ಥಾನದ …

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ

ಪಬ್ಲಿಕ್ ಪವರ್ ಸುದ್ದಿವರದಿ -ಸದಾನಂದ, ಶಿಡ್ಲಘಟ್ಟ,ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಣಿಮರದಹಳ್ಳಿಯ ಮುನೇಂದ್ರ ಬಿನ್ ಮುನಿಕೃಷ್ಣಪ್ಪ ರವರು ಫಾರಂ ಕೋಳಿಯ ಅಂಗಡಿಯನ್ನು ಗೋಣಿಮರದಹಳ್ಳಿಯ ಬಸ್ಟಾಂಡ್ ನಲ್ಲಿ ಹಾಕಿ ಕೊಂಡಿದ್ದು ಉಳಿಕೆ ಫಾರಂ ಕೋಳಿಗಳನ್ನು ಗ್ರಾಮದ ವೆಂಕಟರವಣಪ್ಪ ಬಿನ್ ವೆಂಕಟೇಶಪ್ಪರವರುಗಳ ಮನೆಗಳ ಹತ್ತಿರ…

ಜವರಾಯನಂತೆ ಬಾಯ್ತೆರೆದು ನಿಂತ ರಾಜ್ಯ ಹೆದ್ದಾರಿ ಕಾಮಗಾರಿ!

ಇಂಡಿ : ತಾಲೂಕಿನ ಝಳಕಿ ಇಂದ ಚಡಚಣಕ್ಕೆ ತೆರಳುವ ಮಧ್ಯ ರಾಜ್ಯ ಹೆದ್ದಾರಿ ಕಾಮಗಾರಿ ನಡೆದು ೬ ತಿಂಗಳು ಗತಿಸಿದರು ಇಲ್ಲಿಯವರೆಗು ಪೂರ್ಣಗೋಳಿಸದೆ, ಅರ್ಧಮರ್ಧ ಕಾಮಗಾರಿ ನಿಲ್ಲಿಸಿ ನಾಪತ್ತೆಯಾದ ಗುತ್ತಿಗಾರನೇಂದು ಝಳಕಿ ಗ್ರಾಮಸ್ಥರಾದ ರಮೇಶ ಬಗಲಿರವರ ಆರೋಪ.ಝಳಕಿ ಹದ್ದೆಯಿಂದ ಕೇವಲ ಒಂದು…