Month: September 2023

ಅನುಗೊಂಡನಹಳ್ಳಿ ಯಲ್ಲಿ ಸಪ್ಟೆಂಬರ್ ಮಾಹೆಯ ಪೋಶಣ್ ಮಾಸಾಚರಣೆ ಪೌಷ್ಟಿಕ ಸಪ್ತಾಹ ಕಾರ್ಯಕ್ರಮ ಹೊಸಕೋಟೆ : ಅನುಗೊಂಡನಹಳ್ಳಿಯ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಅನುಗೊಂಡನಹಳ್ಳಿ ಸರ್ಕಲ್ ಅಂಗನವಾಡಿ ಕಾರ್ಯಕರ್ತೆಯರು ಸಪ್ಟೆಂಬರ್ ಮಾಹೆಯ ಪೋಶಣ್ ಮಾಸಾಚರಣೆ ಪೌಷ್ಟಿಕ ಸಪ್ತಾಹ ಕಾರ್ಯಕ್ರಮವನ್ನು ಮಾಡಲಾಯಿತು. ಮೇಲ್ವಿಚಾರಕರಾದ ಶ್ರೀಮತಿ ಕಲ್ಪನಾ ರವರು ಮಾತನಾಡಿ ಮಹಿಳೆಯರಲ್ಲಿ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಬೇಕು ಹೆಚ್ಚಿನ ರೀತಿಯಲ್ಲಿ ಸೊಪ್ಪು ತರಕಾರಿಗಳನ್ನು ತಿನ್ನಬೇಕು ಅವುಗಳಲ್ಲಿರುವ ಅಂತಹ ಪೋಷಕಾಂಶಗಳು ನಮ್ಮ ದೇಹಕ್ಕೆ ಆರೋಗ್ಯಕರವಾಗಿರುತ್ತದೆ ಗರ್ಭಿಣಿಯರು ಮತ್ತು ಬಾಣಂತಿಯರು ಮತ್ತು ಮಕ್ಕಳು ಪೌಷ್ಟಿಕಾಂಶ ಇರುವಂತಹ ಆಹಾರ ಪದಾರ್ಥಗಳನ್ನು ತಿನ್ನಬೇಕು ನಮ್ಮಲ್ಲಿ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲಾ ಮುಖ್ಯೋಪಾಧ್ಯಯರಾದ ಲಲಿತ ಮತ್ತು ಸಿಬ್ಬಂದಿಯವರು, ಸಿಆರ್‌ಪಿ ಸುಕುಮಾರ್ ,ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತರು, ಹಾಗೂ ಪೋಷಕರು ,ಗ್ರಾಮದ ಮಹಿಳೆಯರು ಗರ್ಭಿಣಿ ಬಾಣಂತಿಯರು ಹಾಜರಿದ್ದರು.

ಸರ್ಕಾರಿ ಸವಲತ್ತು, ಎಲ್ಲರಿಗೂ ಸರಿ ಸಮಾನವಾದಂತ ನ್ಯಾಯ, ಸಂವಿಧಾನ ಪೀಠಿಕೆ ಮುಖ್ಯ ಪಾತ್ರ ವಹಿಸುತ್ತದೆ : ತಾಹಶೀಲ್ದಾರ್ ವಿಜಯ್ ಕುಮಾರ್ ಹೊಸಕೋಟೆ : ಒಂದು ರಾಷ್ಟ್ರವು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸದೃಢವಾಗಲು, ಸರ್ಕಾರಿ ಸವಲತ್ತು, ಎಲ್ಲರಿಗೂ ಸರಿ ಸಮಾನವಾದಂತಹ ನ್ಯಾಯ ಸಿಗಲು ಆ ದೇಶದ ಸಂವಿಧಾನ ಪೀಠಿಕೆಯ ಅಂಶಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ತಾಹಶೀಲ್ದಾರ್ ವಿಜಯ್ ಕುಮಾರ್ ಅವರು ಹೇಳಿದರು. ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ “ಅಂತರರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಅರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಂವಿಧಾನದ ಪೀಠಿಕೆ ಬೋಧಿಸಿ ಅವರು ಮಾತನಾಡಿದರು. ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಅಳವಡಿಸಿಕೊಂಡಿರುವ ವಿಶ್ವದ ಪ್ರಜಾಪ್ರಭುತ್ವ ದೇಶಗಳಲ್ಲಿ ಆಚರಿಸಲಾಗುತ್ತಿದೆ. ಭಾರತ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ಹೊಂದಿರುವ ದೇಶ. ನಮ್ಮ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಸಿದ್ದರಾಜು ಮ್ಯಾನೇಜರ್ ಮೂರ್ತಿ ಎಫ್ ಡಿ ಸಿ ವಿಕ್ರಂ ಲೋಕೇಶ್ ರಾಮೇಗೌಡ ವಾರ್ಡನ್ ಪುಟ್ಟಸ್ವಾಮಿ ಸುಬ್ರಮಣಿ ಹಾಗೂ ವನಿತಾ ಶೋಭಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಶಿಕ್ಷಕ ವೃಂದದವರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಶೈಕ್ಷಣಿಕ ಬೆಂಗಳೂರು ವಿಷಯದ ಬಗ್ಗೆ ವಿಚಾರ. ಸಂಕಿರಣ

ಶೈಕ್ಷಣಿಕ ಬೆಂಗಳೂರು ವಿಷಯದ ಬಗ್ಗೆ ವಿಚಾರ ಸಂಕಿರಣ: ನಗರದಲ್ಲಿ ಬಡ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಸಲುವಾಗಿ ನಾವೆಲ್ಲರೂ ಸೇರಿ ಹೊಸ ಮಾದರಿಯ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಬ್ರ‍್ಯಾಂಡ್…

ಪ್ರಥಮ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಧಾರವಾಡ:- ಭಾರತೀಯರಿಗೆ ಸಂವಿಧಾನ ಧರ್ಮಗ್ರಂಥವಾಗಿದ್ದು, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಸಂವಿಧಾನದ ಮುಖ್ಯ ಪಾತ್ರ ವಹಿಸಿದ್ದು,ಇಂದಿನ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರ್ಥೈಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯ ಡಾ.ಡಿ.ಬಿ.ಕರಡೋಣ ತಿಳಿಸಿದರು . ಧಾರವಾಡ ಕರ್ನಾಟಕ ಕಲಾ ಕಾಲೇಜಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಪ್ರಥಮ ಅಂತರರಾಷ್ಟ್ರೀಯ…

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಗೊಂದಲಗಳಿಗೆ ತೆರೆ ಎಳೆದ ನ್ಯಾಯಾಲಯ.
::::****
ಹುಬ್ಬಳ್ಳಿ :- ವಿವಾದ ಸೃಷ್ಠಿಯಾಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನ ಗಣೇಶ ಪ್ರತಿಷ್ಠಾಪನೆಗೆ ಸುಖಾಂತ್ಯ ಕಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ನಗರದ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಷಯದ ಎಲ್ಲ ಗೊಂದಲಗಳಿಗೆ ನ್ಯಾಯಾಲಯ ಇಂದು ತೆರೆ ಎಳೆದಿದೆ.

ಕಳೆದ ಬಾರಿ ಗಣೇಶ ಪ್ರತಿಷ್ಠಾಪನೆ ಅನುಮತಿ ಕೋರಿ ಮಹಾನಗರ ಪಾಲಿಕೆ ಮಾಡಿದ್ದ ಠರಾವಿಗೆ ತಡೆಯಾಜ್ಞೆ ಕೋರಿ ಹುಬ್ಬಳ್ಳಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹುಬ್ಬಳ್ಳಿ ಮಹಾನಗರ ಪಾಲಿಕೆ ಜಾಗದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲು ಅನುಮತಿಸಬೇಕೋ, ಬೇಡವೋ ಎಂಬುದನ್ನು ಮಹಾನಗರ…

ಎಲ್ಲರೂ ಶಾಂತಿಯುತವಾಗಿ ವರ್ತಿಸಿ: ಆಯುಕ್ತರು ರೇಣುಕಾ ಸುಕುಮಾರ

ಹುಬ್ಬಳ್ಳಿ :- ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಿದ್ದು, ಪ್ರತಿಭಟನಾಕಾರರನ್ನು ತಕ್ಷಣವೇ ಕಳುಹಿಸಿ, ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದೇವೆ ಎಂದು ಪೊಲೀಸ್ ಆಯುಕ್ತರು ರೇಣುಕಾ ಸುಕುಮಾರ ಹೇಳಿದರು. ಹುಬ್ಬಳ್ಳಿ ಮಹಾನಗರ ಪಾಲಿಕೆಯ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,ನ್ಯಾಯಾಲಯದ ತೀರ್ಪಿನ ಅನ್ವಯ ಮುಂದಿನ…

ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಟೊಯೊಟಾ ಕೌಶಲ್ಯ ಕಾರ್ಯಕ್ರಮ-2023ರ ಅಡಿಯಲ್ಲಿ ಯುವತಿಯರು ಪ್ರವೇಶ ಪಡೆಯಲು ಅವಕಾಶ

ಬೆಂಗಳೂರು / ರಾಮನಗರ , 15 ಸೆಪ್ಟೆಂಬರ್ 2023: ‘ಸ್ಕಿಲ್ ಇಂಡಿಯಾ ಅಭಿಯಾನವನ್ನು ನಿರಂತರವಾಗಿ ಬೆಂಬಲಿಸುತ್ತಿರುವ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಮಹಿಳೆಯರಿಗಾಗಿ 2023 ನೇ ಸಾಲಿನ “ಟೊಯೊಟಾ ಕೌಶಲ್ಯ ಕಾರ್ಯಕ್ರಮ” ಪ್ರವೇಶವನ್ನು ಪ್ರಾರಂಭಿಸುವುದಾಗಿ ಘೋಷಿಸಲು ಹೆಮ್ಮೆಪಡುತ್ತದೆ. ತರಬೇತಿ ಮಹಾನಿರ್ದೇಶಕರ…

ಚುನಾವಣೆಯ ನಂತರವೂ ಪ್ರದೀಪ್ ಈಶ್ವರ್ ರವರ ನಿಸ್ವಾರ್ಥ ಸೇವೆ ಅಮೂಲ್ಯವಾದದ್ದು: ಯುವ ಮುಖಂಡ ಎಸ್.ಪಿ.ಶ್ರೀನಿವಾಸ್.

ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಹೋಬಳಿ ಪೆರೇಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರವರು ಶಾಲಾ ಮಕ್ಕಳಿಗೆ ಉಚಿತವಾಗಿ ಗಣೇಶ ಹಬ್ಬಕ್ಕೆ ಬಣ್ಣದ ಬಟ್ಟೆಗಳನ್ನು ನೀಡುತ್ತಿರುವ ಕಾರ್ಯಕ್ರಮದಲ್ಲಿ ಮಾತನಾಡಿದ ಯುವ ಮುಖಂಡ ಎಸ್.ಪಿ. ಶ್ರೀನಿವಾಸ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ…

ಶ್ರೀ ಸೀತಾ ರಾಮಾಂಜಿನೇಯ ಸ್ವಾಮಿ ದೇವಾಲಯ ಹುಂಡಿ ಎಣಿಕೆ ಕಾರ್ಯ: 2.72 ಲಕ್ಷ ರೂ.ಸಂಗ್ರಹ

ಶಿಡ್ಲಘಟ್ಟ: ತಾಲ್ಲೂಕಿನ ಕುಂಭಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಚ್.ಕ್ರಾಸ್ ಬಳಿ ಇರುವ ಪುರಾಣ ಪ್ರಸಿದ್ಧ ಶ್ರೀ ಸೀತಾ ರಾಮಾಂಜಿನೇಯ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯವನ್ನು ಬುಧವಾರದಂದು ನಡೆಸಲಾಯಿತು. 2.72 ಲಕ್ಷ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ…