
ಕೆಜಿಎಫ್ ಪೊಲೀಸ್ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸರು ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯೊಬ್ಬನನ್ನು ಬಂಧಿಸಿ, ಆತನಿಂದ ಸುಮಾರು ೨,೨೦,೦೦೦/- ರೂಪಾಯಿ ಮೌಲ್ಯದ ೨ ಕೆ.ಜಿ ೭೨೦ ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಅ.೨೪ ರಂದು ಬೇತಮಂಗಲ ಪೊಲೀಸ್ ಠಾಣಾ ಸರಹದ್ದು, ಬೇತಮಂಗಲ-ಕೋಲಾರ ಮುಖ್ಯ ರಸ್ತೆಯ ಬಡಮಾಕನಹಳ್ಳಿ ಅರಣ್ಯ ಪ್ರದೇಶ ಬಳಿ ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ಆಧರಿಸಿ, ಸೈಬರ್ ಕ್ರೈಂ ಅಪರಾಧ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮೀನಾರಾಯಣ ಮತ್ತು ಸಿಬ್ಬಂದಿಗಳು ಕೂಡಲೇ ದಾಳಿ ನಡೆಸಿ, ಬಡಮಾಕನಹಳ್ಳಿ ನಿವಾಸಿ ನಾಗರಾಜ್ ಎಂಬಾತನನ್ನು ಬಂಧಿಸಿ, ಆತನಿಂದ ಸುಮಾರು ೨,೨೦,೦೦೦/- ರೂಪಾಯಿ ಮೌಲ್ಯದ ೨ ಕೆ.ಜಿ ೭೨೦ ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ.
ಆರೋಪಿಯನ್ನು ಬಂಧಿಸಿ, ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಪಿಐ ಲಕ್ಷ್ಮೀನಾರಾಯಣ ಮತ್ತು ಸಿಬ್ಬಂದಿಗಳಾದ ರಮೇಶ್, ಶೇಷಾದ್ರಿ, ರಘುನಾಥ್, ಚೇತನ್ಯಾದವ್, ಚೇತನ್ಕುಮಾರ್ ಮತ್ತು ಜೀಪ್ ಚಾಲಕ ಶರಣಕುಮಾರ್ ರವರುಗಳನ್ನೊಳಗೊಂಡ ತಂಡವು ಯಶಸ್ವಿಯಾಗಿದ್ದು, ತಂಡವನ್ನು ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.