ಶಾಸಕ ಎಸ್.ಆರ್.ವಿಶ್ವನಾಥ್, ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಬಿ.ವೈ.ವಿಜಯೇಂದ್ರ :

ಯಲಹಂಕ : ಭಾರತೀಯ ಜನತಾ ಪಕ್ಷ ದೇಶಾದ್ಯಂತ ಕೈಗೊಂಡಿರುವ ಸದಸ್ಯತ್ವ ಅಭಿಯಾನದಲ್ಲಿ ನಗರದ ಯಲಹಂಕ ವಿಧಾನಸಭಾ ಕ್ಷೇತ್ರ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ.

ಕ್ಷೇತ್ರದಲ್ಲಿ 2 ಲಕ್ಷದ 13 ಸಾವಿರಕ್ಕೂ ಅಧಿಕ ನೂತನ ಸದಸ್ಯರನ್ನು ಬಿಜೆಪಿಗೆ ನೋಂದಣಿ ಮಾಡಿಕೊಳ್ಳುವ ಮೂಲಕ ಯಲಹಂಕ ಕ್ಷೇತ್ರ ಈ ಸಾಧನೆಗೆ ಭಾಜನವಾಗಿದೆ.

ಕಳೆದ ಹಲವಾರು ದಿನಗಳಿಂದ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಅವರ ನೇತೃತ್ವದಲ್ಲಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು 2 ಲಕ್ಷಕ್ಕೂ ಅಧಿಕ ನೂತನ ಸದಸ್ಯರನ್ನು ನೋಂದಣಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ವಿಶ್ವನಾಥ್ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ವೇಳೆ ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ ‘ಪ್ರಧಾನಿ ನರೇಂದ್ರ ಮೋದಿಯವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮಾರ್ಗದರ್ಶನದಲ್ಲಿ ಕೈಗೊಂಡ ಅಭಿಯಾನ ಅಭೂತಪೂರ್ವವಾಗಿ ನಡೆದಿದೆ. 2 ಲಕ್ಷದ 13 ಸಾವಿರಕ್ಕೂ ಅಧಿಕ ಜನರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು ನನಗೆ ಅತೀವ ಸಂತೋಷ ತಂದಿದೆ. ಅಲ್ಲದೇ, ದೇಶದಲ್ಲಿ ಇಷ್ಟೊಂದು ಸಂಖ್ಯೆಯ ಸದಸ್ಯತ್ವವನ್ನು ಮಾಡಿರುವ ಮೊದಲ ವಿಧಾನಸಭಾ ಕ್ಷೇತ್ರ ಯಲಹಂಕ ಆಗಿರುವುದು ನಮ್ಮ ಸಂತಸವನ್ನು ಇಮ್ಮಡಿ ಗೊಳಿಸಿರುವುದರ ಜೊತೆಗೆ ಜವಾಬ್ದಾರಿಯನ್ನೂ ಹೆಚ್ಚಿಸಿದೆ.

ಪಕ್ಷ ಅಧಿಕಾರದಲ್ಲಿರಲಿ, ಬಿಡಲಿ ನಮ್ಮ ಪಕ್ಷಕ್ಕೆ ಹೊಸದಾಗಿ ಸದಸ್ಯರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಯಲಹಂಕ ಕ್ಷೇತ್ರದಲ್ಲಿ ಯುವಕರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯುವ ಮೂಲಕ ಬಿಜೆಪಿ ಪರವಾದ ಅಲೆ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಸದಸ್ಯತ್ವ ಅಭಿಯಾನದ ಆರಂಭ ದಲ್ಲಿ ಕನಿಷ್ಠ 2 ಲಕ್ಷ ನೂತನ ಸದಸ್ಯರನ್ನು ನೋಂದಾಯಿಸಿ ಕೊಳ್ಳಬೇಕೆಂಬ ಗುರಿಯನ್ನು ಹೊಂದಲಾಗಿತ್ತು. ಆದರೆ, ಈ ಗುರಿಯನ್ನೂ ಮೀರಿ ನಮ್ಮ ಕ್ಷೇತ್ರದಲ್ಲಿ ನೋಂದಣಿ ಆಗಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಇನ್ನೂ 10 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಾಯಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ ವಿಶ್ವನಾಥ್ ಈ ಸಾಧನೆಗೆ ಕಾರಣಕರ್ತರಾದ ಕ್ಷೇತ್ರದ ಎಲ್ಲಾ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಗೆ ಧನ್ಯವಾದ ತಿಳಿಸಲಿಚ್ಛಿಸುತ್ತೇನೆ ಎಂದರು.

ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ

Public power

R Hanumanthu

Kogilu layout

Yelahanka

9845085793

7349337989

8050671579

9035282296

Leave a Reply

Your email address will not be published. Required fields are marked *