ಇತ್ತೀಚಿನ ದಿನಗಳಲ್ಲಿ ಬೆಂ.ಮ.ಸಾ.ಸಂಸ್ಥೆಯ ಕರ್ತವ್ಯ ನಿರತ ಚಾಲಕ ನಿರ್ವಾಹಕರ ಮೇಲೆ ಹಲ್ಲೆಗಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಸಂಬಂಧ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಎಫ್.ಐ.ಆರ್ ಗಳನ್ನು ದಾಖಲಿಸಲಾಗಿರುತ್ತದೆ.

ದಿನಾಂಕ:28.10.2024 ರಂದು ಬೆಂ.ಮ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಮಚಂದ್ರನ್.ಆರ್, ಭಾ.ಆ.ಸೇ ರವರು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ ಬಿ.ದಯಾನಂದ, ಭಾ.ಪೋ.ಸೇ ರವರನ್ನು ಖುದ್ದಾಗಿ ಭೇಟಿ ಮಾಡಿ, ನಡೆದಿರುವ ಮೂರು ಘಟನೆಗಳನ್ನು ಸಂಕ್ಷಿಪ್ತವಾಗಿ ತಿಳಿಸಿರುತ್ತಾರೆ. ಅದರಂತೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ, ಆರೋಪಿಗಳ ವಿರುದ್ದ ಎಫ್.ಐ.ಆರ್ ದಾಖಲಿಸಿ, ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಮತ್ತು ಈ ಹಿಂದೆ ನಡೆದಿರುವ ಪ್ರಕರಣಗಳನ್ನು ತನಿಖಾಧಿಕಾರಿಗಳಿಗೆ ಶೀಘ್ರ ಗತಿಯಲ್ಲಿ ತನಿಖೆ ನಡೆಸಿ, ತಪ್ಪತಸ್ಥರ ವಿರುದ್ದ ಸೂಕ್ತ ರೀತಿಯ ಕಾನೂನು ಕ್ರಮವನ್ನು ಜರುಗಿಸುವಂತೆ ಪೊಲೀಸ್ ಆಯುಕ್ತರಾದ ಶ್ರೀ ಬಿ.ದಯಾನಂದ ರವರು ಆಶ್ವಾಸನೆ ನೀಡಿರುತ್ತಾರೆ

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ

Public power

R Hanumanthu

Kogilu layout 

Yelahanka

9845085793

7349337989

9035282296

Leave a Reply

Your email address will not be published. Required fields are marked *