




ಸರಣಿ ಸಭೆ ನಡೆಸಿ ನಿಖಿಲ್ ಕುಮಾರಸ್ವಾಮಿ ಪರ ಮತಯಾಚಿಸಿದ ಬಿಜೆಪಿ-ಜೆಡಿಎಸ್ ಮುಖಂಡರು :
ಚನ್ನಪಟ್ಟಣ : ರಾಜ್ಯದಲ್ಲಿ ಉಪ ಚುನಾವಣೆಯ ಕದನ ಕಾವೇರುತ್ತಿದ್ದು, ದೇಶದಲ್ಲೇ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನ ಸಭಾಕ್ಷೇತ್ರದಲ್ಲಿ, ಚುನಾವಣಾ ಪ್ರಚಾರ ಕಾರ್ಯದ ಅಂಗವಾಗಿ ಸೋಮವಾರ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ರುದ್ರೇಶ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಯವರ ನೇತೃತ್ವದ ತಂಡ ಸಿ.ಪಿ.ಯೋಗೀಶ್ವರ್ ರವರ ಸ್ವಗ್ರಾಮ ಚಕ್ಕೆರೆ ಗ್ರಾಮದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಸಿ, ಗ್ರಾಮದ ಹಲವು ಕಾಂಗ್ರೆಸ್ ಮುಖಂಡರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಧರ್ಮೇಶ್ ಗೌಡ ಮತ್ತು ಅವರ ಹಲವು ಬೆಂಬಲಿಗರು ಕಾಂಗ್ರೆಸ್ ಪಕ್ಷ ತೊರೆದು, ಬಿಜೆಪಿ ಪಕ್ಷದ ತತ್ವಸಿದ್ಧಾಂತ ಒಪ್ಪಿ ಬಿಜೆಪಿ ಸೇರ್ಪಡೆಯಾದರು.
ನಂತರ ಚನ್ನಪಟ್ಟಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸರಣಿ ಸಭೆ ನಡೆಸಿದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿ, ಮತಯಾಚಿಸಿದರು.
ಈ ವೇಳೆ ಮಾಜಿ ಸಚಿವ ಗೋಪಾಲಯ್ಯ, ರಾಮನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ದೇವರಾಜ್, ಚಿಕ್ಕನಾಯಕನಹಳ್ಳಿ ಮಾಜಿ ಶಾಸಕ ಬಾಬು, ರಾಮನಗರ ಮಾಜಿ ಶಾಸಕ ಮಂಜುನಾಥ್, ಬೆಂ.ಉತ್ತರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ಜೆ.ಮೂರ್ತಿ ಉಪಸ್ಥಿತರಿದ್ದು, ಪ್ರಚಾರ ಕಾರ್ಯಕ್ಕೆ ಸಾಥ್ ನೀಡಿದರು.
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ
Public power
R Hanumanthu
Kogilu layout Yelahanka
9845085793
8050671579