ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜನೆ :

ಯಲಹಂಕ : ‘ಜಾಗೃತಿ ತಿಳುವಳಿಕೆ ಸಪ್ತಾಹ’ದ ಪ್ರಯುಕ್ತ ಯಲಹಂಕದ ಸಿಂಗನಾಯಕನಹಳ್ಳಿ ಯಲ್ಲಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ‘ರಾಷ್ಟ್ರದ ಅಭ್ಯುದಯಕ್ಕಾಗಿ ಸಮಗ್ರತೆಯ ಸಂಸ್ಕೃತಿ’ ಜನಜಾಗೃತಿ ಜಾಥಾವನ್ನು ಸಂಸ್ಥೆಯ ಹಿರಿಯ ಕಾರ್ಯ ನಿರ್ವಾಹಕ ನಿರ್ದೇಶಕ ಟಿ.ಆರ್.ಕೃಷ್ಣಕುಮಾರ್ ಉದ್ಘಾಟಿಸಿದರು.

ನಂತರ ಅವರು ಮಾತನಾಡಿ ‘ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ವತಿಯಿಂದ ಇಂದು ‘ರಾಷ್ಟ್ರದ ಅಭ್ಯುದಯಕ್ಕಾಗಿ ಸಮಗ್ರತೆಯ ಸಂಸ್ಕೃತಿ’ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಪವರ್ ಗ್ರಿಡ್ ಕಾರ್ಪೊರೇಷನ್ ನ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಪಾಂಡಿಚೆರಿ ಸೇರಿದಂತೆ ದಕ್ಷಿಣದ ರಾಜ್ಯಗಳ ಎಲ್ಲಾ ಶಾಖೆಗಳಲ್ಲೂ ಈ ಜಾಗೃತಿ ಜಾಥಾ ನಡೆಸಲಾಗುತ್ತಿದೆ. ‘ಜಾಗೃತಿ ತಿಳುವಳಿಕೆ ಸಪ್ತಾಹ’ದ ಪ್ರಯುಕ್ತ ಈ ಜಾಗೃತಿ ಜಾಥಾ ನಡೆಸಲಾಗುತ್ತಿದ್ದು, ರಾಷ್ಟ್ರದ ಅಭ್ಯುದಯಕ್ಕಾಗಿ ಸಮಗ್ರತೆಯ ಸಂಸ್ಕೃತಿಯನ್ನು ದೇಶದ ಜನತೆ ಅಳವಡಿಸಿಕೊಂಡಿದ್ದೇ ಆದರೆ ಭ್ರಷ್ಟಾಚಾರ ನಿರ್ಮೂಲನೆಗೆ ಕೊಡುಗೆ ನೀಡಿದಂತಾಗುತ್ತದೆ. ಈ ದಿಸೆಯಲ್ಲಿ ಜನಜಾಗೃತಿ ಮೂಡಿಸುವುದು ಈ ಜಾಥಾ ದ ಮುಖ್ಯ ಉದ್ದೇಶವಾಗಿದೆ ಎಂದರು.

ಸಿಂಗನಾಯಕನಹಳ್ಳಿಯ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಕಚೇರಿಯಿಂದ ಆರಂಭವಾದ ಜನಜಾಗೃತಿ ಜಾಥಾ ಸಿಂಗನಾಯಕನಹಳ್ಳಿ ಗ್ರಾಮದ ಮುಖ್ಯರಸ್ತೆಯ ಮೂಲಕ ಸಾಗಿ, ವಿಶ್ವವಿದ್ಯಾಪೀಠ ಶಾಲೆಯ ಬಳಿ ಅಂತ್ಯಗೊಂಡಿತು. ಜಾಥಾದಲ್ಲಿ ಪಾಲ್ಗೊಂಡಿದ್ದ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದ ನೂರಾರು ಸಿಬ್ಬಂದಿಗಳು ಭ್ರಷ್ಟಾಚಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಜನಜಾಗೃತಿ ಮೂಡಿಸಿದರು.

ಜಾಗೃತಿ ಜಾಥಾದಲ್ಲಿ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಯ ಹಿರಿಯ ಅಧಿಕಾರಿಗಳಾದ ಕುಮಾರ್, ಆಡಳಿತ ನಿರ್ವಹಣಾ ವಿಭಾಗದ ಮುಖ್ಯ ವ್ಯವಸ್ಥಾಪಕ ಜಿ.ಎಸ್.ರಾವ್, ಯೋಜನಾ ವಿಭಾಗದ ಮುಖ್ಯ ವ್ಯವಸ್ಥಾಪಕ ನಾಗರಾಜ್ ಭಟ್ ಸೇರಿದಂತೆ ಇನ್ನಿತರರ ಅಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಸಿಬ್ಬಂದಿಗಳಿದ್ದರು.

Public power

9845085793

8050671579

Leave a Reply

Your email address will not be published. Required fields are marked *