ಬೆಂಗಳೂರು ಸುದ್ದಿ
: ದಿನಾಂಕ 1-11-2024 ರ ಶುಕ್ರವಾರದಂದು ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯ ರಾಜಾಜಿನಗರದ ಬಸವ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶ್ರೀಪರಮೇಶ ವೀರಯೋಧರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಕನ್ನಡನಾಡು ನುಡಿಯ ಬಗ್ಗೆ ಅಭಿಮಾನ ಮೂಡುವಂತೆ ಪ್ರೇರೇಪಿಸಿ ಕನ್ನಡ ಗೀತೆಗಳ ಮೂಲಕ ಕನ್ನಡದ ಅಭಿಮಾನವನ್ನು ಪ್ರೇರೇಪಿಸಿದರು. ಶ್ರೀ ಪುಟ್ಟರಾಜು ಮುಖ್ಯ ಅತಿಥಿಗಳಾಗಿ ಆಗಮಿಸಿ ಬಹುಮಾನ ವಿತರಣೆ ಮಾಡಿದರು.. ಅಧ್ಯಕ್ಷತೆ ವಹಿಸಿದ್ದ ಶ್ರೀಎಸ್ಎಸ ದೊಡ್ಡಣ್ಣವರ ಅವರು ವಿದ್ಯಾರ್ಥಿಗಳಿಗೆ ಕನ್ನಡ ರಾಜ್ಯೋತ್ಸವ ಹಾಗೂ ವಿದ್ಯಾಸಂಸ್ಥೆಯ ಸ್ವರೂಪವನ್ನು ಪರಿಚಯಿಸಿದರು.. ಪ್ರಾಂಶುಪಾಲರಾದ ಡಾ. ಶೀಲಾದೇವಿ ಎಸ್ ಮಳೀಮಠ ರವರು ವಿದ್ಯಾರ್ಥಿಗಳ ಪ್ರತಿಭೆಗೆ ಪುರಸ್ಕಾರ ನೀಡಿ ಗೌರವಿಸಿದರು… ಶ್ರೀರವಿಶಂಕರ ದೊಡ್ಡಮನಿ ನಿರ್ದೇಶಕರು ಸಾಂಸ್ಕೃತಿಕ ಹಾಗೂ ಕನ್ನಡ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಿದರು. ಭಾಗವಹಿಸಿದವರೆಲ್ಲರಿಗೂ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯ್ತು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಧ್ವಜಾರೋಹಣ ನೆರವೇರಿಸಿ ಆಚರಿಸಲಾಯ್ತು.. ಶ್ರೀರಾಜಗೋಪಾಲ ಹಾಗೂ ಶ್ರೀಮತಿ ಭವ್ಯ ಸಂಚಾಲಕರಾಗಿ ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಭಾಜನರಾದರು.

Leave a Reply

Your email address will not be published. Required fields are marked *