




ಯಲಹಂಕ
ಕನ್ನಡ ಭಾಷೆಯನ್ನು ಉಳಿಸುವಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಕೈಜೋಡಿಸಬೇಕಾಗಿದೆ ಎಂದು ಕೋಗಿಲಿನ ಆಕ್ಸ್ಫರ್ಡ್ ಆಂಗ್ಲ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪ್ರಮೀಳಾ ರಾಜೇಶ್ ರವರು ಮನವಿ ಮಾಡಿದರು.
ನವಂಬರ್ ಒಂದರಂದು ಕೋಗಿಲಿನ ಆಕ್ಸ್ಫರ್ಡ್ ಆಂಗ್ಲ ಶಾಲೆಯಲ್ಲಿ ಆಚರಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ನಮ್ಮ ನಾಡು ನುಡಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸಬೇಕಾಗಿದೆ. ಸರ್ಕಾರದೊಂದಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕೈಜೋಡಿಸಬೇಕಾಗಿದೆ ಎಂದರು.
ಕನ್ನಡದ ದೀಪವನ್ನು ಹಚ್ಚುವ ಮೂಲಕ ಆರಂಭವಾದ ಈ ಕಾರ್ಯಕ್ರಮದ
ನಿರೂಪಣೆಯನ್ನು ಶ್ರೀಮತಿ ಚಂದ್ರಕಲಾ ಮಾಡಿದರೆ, ಪ್ರಾರ್ಥನೆಯನ್ನು 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಸಿಕ ಢ್ಯಾ ನಿಯಲ್ , ಸ್ವಾಗತ ಹತ್ತನೇ ತರಗತಿ ವಿದ್ಯಾರ್ಥಿನಿ ವೈಭವಿ.ವಿ. ಕನ್ನಡ ನಾಡಿನ ಕಿರು ಪರಿಚಯವನ್ನು ಹತ್ತನೇ ತರಗತಿ ವಿದ್ಯಾರ್ಥಿ ಮನೀಶ್ ಗೌಡ ಹಾಗೂ ಜೋನಾಥನ್ ಹಾಗೂ ಕಾರ್ಯಕ್ರಮದ ವಂದನಾರ್ಪಣೆಯನ್ನು 10ನೇ ತರಗತಿ ವಿದ್ಯಾರ್ಥಿ ಲಾವಣ್ಯ ಮಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ. ಡಾಕ್ಟರ್ ರಾಜು. ಶ್ರೀಮತಿ ಪ್ರಮೀಳಾ ರಾಜೇಶ್, ಹಾಗೂ ಶ್ರೀಮತಿ ಶೋಭರಾಜ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅನೇಕ ಮನೋರಂಜನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.