ಬೆಂಗಳೂರು

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮುಚ್ಚುವಂತೆ ಆಗ್ರಹಿಸಿ ಕರ್ನಾಟಕ ನವನಿರ್ಮಾಣ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ ಬಳಿ ರಾಜ್ಯಸರ್ಕಾರ ಹಾಗೂ ವಕ್ಫ್ ಬೋರ್ಡ್ ವಿರುದ್ದ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಲಾಯಿತು. ಬಳಿಕ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಕರ್ನಾಟಕದಲ್ಲಿ ವಕ್ಫ್ ಮಂಡಳಿ ಹಗಲು ದರೋಡೆ ನಡೆಸುತ್ತಿದೆ. ನಾಡಿನ ರೈತರ ಜಮೀನನ್ನು ಸರ್ಕಾರ ಶೀಘ್ರವಾಗಿ ಮರಳಿ ವಶಪಡಿಸಿಕೊಳ್ಳಬೇಕು, ಒಂದು ವೇಳೆ ವಕ್ಫ್ ಬೋರ್ಡ್ ಮುಚ್ಚದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ನವನಿರ್ಮಾಣ ಸೇನೆ ವಕ್ಫ್ ಬೋರ್ಡ್ ಗೆ ಮುತ್ತಿಗೆ ಹಾಕುವ ಬಗ್ಗೆ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಲಾಯಿತು ಈ ಪ್ರತಿಭಟನೆಯಲ್ಲಿ ರಾಜ್ಯಧ್ಯಕ್ಷರು ಉಪಾಧ್ಯಕ್ಷರು ಎಲ್ಲಾ ಕಾರ್ಯಕರ್ತರು ಭಾಗವಹಿಸಿದರು

Leave a Reply

Your email address will not be published. Required fields are marked *