

ಬಯಲು ಸಿಂಹ ಸುದ್ದಿ:
ಬಂಗಾರಪೇಟೆ : ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಗ್ರೇಡ್- 2 ತಹಶೀಲ್ದಾರ್ ಗಾಯತ್ರಿ ರವರು ಮಾತನಾಡಿ,ಓಬವ್ವ ಅವರ ಸಮಯಪ್ರಜ್ಞೆ, ಕಾರ್ಯದಕ್ಷತೆ, ಧೈರ್ಯದ ಮನೋಭಾವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಸಮಯ ಪ್ರಜ್ಞೆ ಮತ್ತು ಪರಾಕ್ರಮದಿಂದ ವೈರಿ ಸೈನಿಕರನ್ನು ಸದೆಬಡಿದ ಒನಕೆ ಓಬವ್ವ ಇಂದಿನ ಪೀಳಿಗೆಗೆ ಪ್ರೇರಣೆ ಆಗಿದ್ದಾರೆ.ಸರ್ಕಾರ ಪ್ರತಿ ವರ್ಷ ವೀರ ಮಹಿಳೆ ಓಬವ್ವ ಜಯಂತಿಯನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು.
ಸರ್ಕಾರವು ಯಾವುದೇ ಜಾತಿ, ಧರ್ಮಕ್ಕೆ ಸೀಮಿತಗೊಳಿಸಿ ಜಯಂತಿ ಹಾಗೂ ದಿನಾಚರಣೆ ಆಚರಿಸುವುದಿಲ್ಲ. ರಾಷ್ಟ್ರಕ್ಕೆ ಹಾಗೂ ಸಮಾಜಕ್ಕೆ ಮಹನೀಯರು ನೀಡಿರುವ ಕೊಡುಗೆ, ತ್ಯಾಗ, ಬಲಿದಾನ, ಸಾಧನೆಗಳು ಹಾಗೂ ನಿಸ್ವಾರ್ಥ ಸೇವೆ ಗುರುತಿಸಿ ಸರ್ಕಾರದ ನಿಯಮಗಳಡಿ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷರಾದ ಶಶಿಕಲಾ ರವರು ಮಾತನಾಡಿ ಒನಕೆ ಓಬವ್ವ ಜಯಂತಿಯನ್ನು ದೊಡ್ಡ ಮಟ್ಟದಲ್ಲಿ ಆಚರಣೆ ಮಾಡಬೇಕೆಂಬ ತುಂಬಾ ಆಸೆ ಇತ್ತು ಈ ಆಸೆ ಈ ವರ್ಷ ಈಡೇರಲಿಲ್ಲ ಮುಂದಿನ ವರ್ಷವಾದರೂ ಜಯಂತಿಯನ್ನು ದೊಡ್ಡಮಟ್ಟದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲು ಪ್ರಯತ್ನಿಸಲಾಗುವುದು, ಒನಕೆ ಓಬವ್ವ ಅವರ ಜೀವನ ಚರಿತ್ರೆ ಬಲ್ಲವರು ಅವರ ಆದರ್ಶ, ಕೀರ್ತಿ, ಸೈನಿಕನಂತೆ ಹೋರಾಡಿದ ವೀರ ವೇಷ, ವೀರ ವನತೆಯ ಗುಣಗಳನ್ನು ಪ್ರತಿಯೊಬ್ಬ ಹೆಣ್ಣು ಮಗು ತಮ್ಮ ಜೀವನದಲ್ಲಿ ಅಡವಡಿಸಿಕೊಳ್ಳಬೇಕು ಓಬವ್ವ ಪ್ರತಿಯೊಬ್ಬರ ಸ್ಪೂರ್ತಿಯ ಮಹಿಳೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಅಂಜಲಿದೇವಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಯುವರಾಜ್, ರಾಜ್ಯ ಸರ್ಕಾರಿ ಮಹಿಳಾ ನೌಕರ ಸಂಘದ ಕಾರ್ಯದರ್ಶಿ ಸುಜಾತ, ಉರ್ದು ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಹಮ್ಮದ್ ಜಹೀತಾ, ಆರೋಗ್ಯ ಇಲಾಖೆ ಅನಿತ, ಎನ್.ಟಿ.ಜಿ.ಎಂ.ಎಸ್. ಮುಖ್ಯ ಶಿಕ್ಷಕರಾದ ಮುನಿನಾರಾಯಣ, ಹಾಗೂ ತಾಲ್ಲೂಕು ಆಡಳಿತ ಸಿಬ್ಬಂದಿ ಮೊದಲಾದವರು ಉಪಸ್ಥಿತರಿದ್ದರು.