
ಪುನೀತ್ ಹೆಸರಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.
ಕೆ.ಆರ್.ಪುರ: ನಟ ಪುನೀತ್ ರಾಜ್ಕುಮಾರ್ ಅವರ ಹೆಸರಿನಲ್ಲಿ ಆರೋಗ್ಯ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯ ಕಾರ್ಯ ಎಂದು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು.
ಕೆಆರ್ ಪುರ ಸಮೀಪದ ದೇವಸಂದ್ರದ ಭಾರತೀಯ ವಿದ್ಯಾನಿಕೇತನ್ ಕಾಲೇಜು ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ನಟ ಪುನೀತ್ ರಾಜ್ಕುಮಾರ್ ಸವಿ ನೆನಪಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ರಮೇಶ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲಾ ವಯೋಮಾನದವರು ಇಷ್ಟಪಡುವ ಅಚ್ಚುಮೆಚ್ಚಿನ ನಟ ದಿವಂಗತ ಪುನೀತ್ ರಾಜ್ಕುಮಾರ್ ನಮ್ಮನ್ನು ಅಗಲಿ ಮೂರು ವರ್ಷ ಆಗಿದೆ,ಅವರ ಅಗಲಿಕೆ ವೈಯಕ್ತಿಕವಾಗಿ ಅತ್ಯಂತ ನೋವು ತರಿಸಿತ್ತು, ನಟನೆ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದ ಕಲಾವಿದ ಪುನೀತ್ ರಾಜ್ ಕುಮಾರ್ ಅವರು ಯಾರಿಗೂ ಗೊತ್ತಾಗದಂತೆ ತೆರೆಮರೆಯಲ್ಲಿ ಸಾಕಷ್ಟು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು,ಅವರ ನಿಜ ಜೀವನದಲ್ಲಿ ಸರಳ ವ್ಯಕ್ತಿತ್ವ, ಹಾಗೂ ಸಾಮಾಜಿಕ ಕಾರ್ಯಗಳು ಸಾವಿನ ನಂತರವೂ ಜೀವಂತವಾಗಿಸಿದೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಬಡವರ ಆರೋಗ್ಯ ದೃಷ್ಟಿಯಿಂದ ಕಣ್ಣಿನ ತಪಾಸಣೆ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಕೆಆರ್ ಪುರ ಕ್ಷೇತ್ರದಲ್ಲಿ ಹನ್ನೊಂದು ಕಡೆ ಕಣ್ಣಿನ ತಪಾಸಣೆ ಶಿಬಿರ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.
ದೇವಸಂದ್ರ ಭಾಗದ ಮುಖಂಡರಾದ ಡಿಕೆ ರಮೇಶ್ ಅವರು ಕಳೆದ ಮೂರು ವರ್ಷಗಳಿಂದ ಬಡ ಜನನರ ಆರೋಗ್ಯ ದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರಗಳನ್ನು ಮಾಡುತ್ತಿದ್ದಾರೆ.ಇದನ್ನ ಎಲ್ಲಾರೂ
ಉಪಯೋಗಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಆರೋಗ್ಯದಲ್ಲಿ ಏರುಪೇರು ಆದರೆ ಹತ್ತಿರ ಆಸ್ಪತ್ರೆ ತೆರಳಿ ಚಿಕಿತ್ಸೆ ಪಡೆಯಬಹುದು, ಆದರೆ ಕಣ್ಣಿನ ಚಿಕಿತ್ಸೆ ಪಡೆಯಲು ಹತ್ತಿರದಲ್ಲೇ ಯಾವುದೇ ಆಸ್ಪತ್ರೆಗಳು ಸಿಗುವುದು ಬಹಳ ವಿರಳ ಇದರಿಂದ ಬಡವರ ಅನುಕೂಲವಾಗಲಿ ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ,ಪ್ರತಿಯೊಬ್ಬರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಮಾಜಿ ಸದಸ್ಯ ರಾಜೀವ್ ಗೌಡ, ಆಯೋಜಕ ಡಿ.ಕೆ.ರಮೇಶ್, ಸಿವಿ.ರಾಮನ್ ಆಸ್ಪತ್ರೆ ಅಧೀಕ್ಷಕ ರಾಜೇಶ್, ಮುಖಂಡರಾದ ಡಿ.ಕೆ.ದೇವೇಂದ್ರ, ಮೇಡಹಳ್ಳಿ ರಾಖಿ, ವೆಂಕಟೇಶ್, ಚೆನ್ನಕೃಷ್ಣ, ಆನಂದ ಪ್ರಸಾದ್, ಜಬೀರ್,ಜನಾರ್ದನ್
ಮತ್ತಿತರರು ಇದ್ದರು.