ಬಯಲು ಸಿಂಹ ಸುದ್ದಿ:

ಕೋಲಾರ : ಸ್ವಾಭಿಮಾನಿ ಚಳುವಳಿಯ
ಮುನ್ನಡೆಗಾಗಿ ಸ್ವಯಂ ರಕ್ಷಣೆಯ ಕಾರ್ಯಪಡೆಯ ಸಿದ್ದತೆಯೇ ಸಮಾತಾ ಸೈನಿಕ ದಳದ ಸ್ಥಾಪನೆಗೆ ಮೂಲ ಕಾರಣವಾಗಿದ್ದು, ಸಾಮಾಜಿಕ ನ್ಯಾಯ ಪ್ರತಿಪಾದಿಸುವವರೊಂದಿಗೆ ಎಸ್‌ಎಸ್‌ಡಿ ಸದಾ ಹೆಗಲುಕೊಟ್ಟು ನಿಲ್ಲುತ್ತದೆ, ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ನೌಕರರ ಸಂಘದ ಅಧ್ಯಕ್ಷ ಸುರೇಶ್‌ಬಾಬು ಅವರನ್ನು ಮರು ಆಯ್ಕೆ ಮಾಡುವಂತೆ ನೌಕರರಿಗೆ ಸಮತಾಸೈನಿಕ ದಳದ ರಾಷ್ಟ್ರೀಯ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಕರೆ ನೀಡಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಸಮತಾಸೈನಿಕ ದಳದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು, ಸಮಾಜ ಕಲ್ಯಾಣ ಇಲಾಖೆಜಂಟಿ ನಿರ್ದೇಶಕ ಶ್ರೀನಿವಾಸ್, ದಲಿತ ಮುಖಂಡರಾದ ಕೆ.ಟಿ.ನಾಗರಾಜ್, ಬೆಳಮಾರನಹಳ್ಳಿ ಆನಂದ್,ಸೂರಿ ಅವರನ್ನು ಸನ್ಮಾನಿಸಿ ಮಾತನಾಡಿದರು.

ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಸ್ಥಾಪಿತ ಸಮತಾ ಸೈನಿಕದಳಕ್ಕೆ 100 ವರ್ಷ ತುಂಬಿರುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ,ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಸಾಮಾಜಿಕ ನ್ಯಾಯದ ಪರವಾಗಿರುವ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ ಬಾಬು ಅವರನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಬೆಂಬಲಿಸಬೇಕು ಎಂದು ಕರೆ ನೀಡಿದರು
ನೌಕರರ ಸಂಘವನ್ನು ಸಮರ್ಥವಾಗಿ ಮುನ್ನಡೆಸಲು ಹಾಗೂ ಸಾಮಾಜಿಕ ನ್ಯಾಯ ಪ್ರತಿಪಾದಿಸುವ ಮನಸ್ಥಿತಿ ಇರುವ ಸುರೇಶ್ ಬಾಬು ಅಂತಹವರೇ ನೌಕರರ ಸಂಘದ ಅಧ್ಯಕ್ಷರಾಗಬೇಕು ಈ ನಿಟ್ಟಿನಲ್ಲಿ ಅವರೊಂದಿಗೆ ಎಸ್‌ಎಸ್‌ಡಿ ಸದಾ ಇರುತ್ತದೆ ಎಂದು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಅಧಿಕೃತವಾಗಿ ಪ್ರಾರಂಭ ವಾದ ಸಂಘಟನೆ ಕಳೆದ ನೂರು ವರ್ಷಗಳಲ್ಲಿ ದೇಶದಾದ್ಯಂತ ತನ್ನ ಶಾಖೆಗಳನ್ನು ಹೊಂದಿದೆ ಎಂದು ತಿಳಿಸಿ, ಶೋಷಿತರ ರಕ್ಷಣೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಸಿಕೊಂಡು ಬರಲಾಗಿದೆ ಎಂದು ತಿಳಿಸಿದರು.
ಅಂಬೇಡ್ಕ‌ರ್ ರಚಿಸಿರುವ ಸಂವಿಧಾನವೇ ಪವಿತ್ರ ಗ್ರಂಥವಾಗಿದ್ದು, ಈ ದೇಶದಲ್ಲಿ ಸಮಾನತೆ ನೆಲಸಲು ಕಾರಣವಾಗಿದೆ, ಶೋಷಿತರು, ಮಹಿಳೆಯರು, ದೀನದಲಿತರ ರಕ್ಷಣೆ ಇದರಿಂದಲೇ ಆಗುತ್ತಿದೆ ಎಂದು ತಿಳಿಸಿದರು.
ಎಲ್ಲಾ ತುಳಿತಕ್ಕೆ ಒಳಗಾದವರ ಹಕ್ಕುಗಲನ್ನು ಕಾಪಾಡುವ ಉದ್ದೇಶದಿಂದ ಸಂವಿಧಾನ ಶಿಲ್ಪಿ ಸಂಘಟನೆ ಅಂಬೇಡ್ಕರ್ ಅವರು ಸ್ಥಾಪಿಸಿದ ಸಂಘಟನೆ ಇದಾಗಿದೆ ಎಂದ ಅವರು, ಅವರ ಸಿದ್ದಾಂತ ಗಳನ್ನು ಅನುಸರಿಸುವ ಮೂಲಕ ನಮ್ಮ ಹೋರಾಟ ಮುಂದುವರೆದಿದೆ ಎಂದರು.
ಶತಮಾನೋತ್ಸವದ ಅಂಗವಾಗಿ ಪ್ರಥಮವಾಗಿ ಕೋಲಾರ ನಗರದಲ್ಲಿ ಎಸ್‌.ಎಸ್.ಡಿಯ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ನೇತೃತ್ವದಲ್ಲಿ ಕಲಾತಂಡಗಳೊಂದಿಗೆ ಅಂಬೇಡ್ಕ‌ರ್ ಭಾವ ಚಿತ್ರ ಇರುವ ಬೆಳ್ಳಿ ರಥದ ಮೆರವಣಿಗೆ ಕೋಲಾರ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಬಂತು.
ಬಂಗಾರ ಪೇಟೆ ವೃತ್ತದ ಬಳಿ ಇರುವ ಅಂಬೇಡ್ಕರ್ ಪುತ್ಥಳಿಗೆ ಬೆಳಗ್ಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಮಾತನಾಡಿ, ಶೋಷಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯ, ಕರ್ಮಚಾರಿ ಮಳಿಗೆಗಳ ನಿರ್ಮಾಣದಂತಹ ಸಾಮಾಜಿಕ ಕಾರ್ಯಗಳಿಗೆ ಸರ್ಕಾರದ ಮೇಲೆ ಒತ್ತಡ ತಂದು ಶೋಷಿತರ ಹಿತ ಕಾಯಲು ವೆಂಕಟಸ್ವಾಮಿ ಶ್ರಮಿಸುತ್ತಿದ್ದಾರೆ ಎಂದರು.

ಇಂದು ಶೋಷಿತ ವ್ಯಕ್ತಿಗಳು ನೆಮ್ಮದಿಯಿಂದ
ಸ್ವಾಭಿಮಾನದಿಂದ ಜೀವನ ನಡೆಸಲು ವೆಂಕಟಸ್ವಾಮಿ ತಮ್ಮ ಸಂಘಟನೆಯ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ, ಸಮ ಸಮಾಜ ನಿರ್ಮಾಣ ಅಸಮಾನತೆ ವಿರುದ್ಧ ಧ್ವನಿಯಾಗಿಯೂ ಕೆಲಸ ಮಾಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು, ಸಮಾಜಕಲ್ಯಾಣ ಇಲಾಖೆಜಂಟಿ ನಿರ್ದೇಶಕ ಶ್ರೀನಿವಾಸ್, ದಲಿತ ಮುಖ೦ಡರಾದ ಕೆ.ಟಿ.ನಾಗರಾಜ್, ಬೆಳಮಾರನಹಳ್ಳಿ ಆನಂದ್, ಸೂರಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ರಾಜ್ಯ ಕಾರ್ಯದರ್ಶಿ ಜಿ.ಸಿ.ವೆಂಕಟರಮಣಪ್ಪ, ಜಿಲ್ಲಾಧ್ಯಕ್ಷ ಗುಟ್ಟಹಳ್ಳಿ ಶ್ರೀನಿವಾಸ್, ಸಮತಾ ಸೈನಿಕ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ಬೇಟಪ್ಪ, ಮುಖಂಡ ಶೆಟ್ಟಹಳ್ಳಿ ನಾಗರಾಜ್‌,ಶ್ರೀನಿವಾಸಪುರ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಅರವಿಂದ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *