ಯಲಹಂಕ ಕ್ಷೇತ್ರದಲ್ಲಿ ಸಂಘಟನಾ ಪರ್ವ ಕಾರ್ಯಕ್ರಮ :

ಯಲಹಂಕ ನಗರ ಮಂಡಲದ ವಿವಿಧ ಮೋರ್ಚಾ, ಪ್ರಕೋಷ್ಠ, ಶಕ್ತಿ ಕೇಂದ್ರಗಳ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ :

ಯಲಹಂಕ : ಯಲಹಂಕ ಕ್ಷೇತ್ರದ ರಾಜಾನುಕುಂಟೆ ಸಮೀಪದ ಖಾಸಗಿ ಹೋಟೆಲ್ ನಲ್ಲಿ ಶನಿವಾರ ಏರ್ಪಡಿಸಿದ್ದ ಸಂಘಟನಾ ಪರ್ವ ಕಾರ್ಯಕ್ರಮದಲ್ಲಿ ಬಿಜೆಪಿ ಯಲಹಂಕ ನಗರ ಮಂಡಲದ ವಿವಿಧ ಮೋರ್ಚಾ, ಪ್ರಕೋಷ್ಠ ಮತ್ತು ಶಕ್ತಿ ಕೇಂದ್ರಗಳ ನೂತನ ಪದಾಧಿಕಾರಿಗಳಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಹುದ್ದೆಯ ಪ್ರಮಾಣಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಹರೀಶ್ ಪಾಲ್ಗೊಂಡು ಯಲಹಂಕ ಕ್ಷೇತ್ರದಲ್ಲಿ ಕೈಗೂಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಯಲಹಂಕ ಕ್ಷೇತ್ರ 2.25 ಲಕ್ಷ ಸದಸ್ಯರ ನೋಂದಣಿ ಮೂಲಕ ರಾಷ್ಟಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿರುವ ಹೆಗ್ಗಳಿಕೆ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಶಾಸಕ ಎಸ್ ಆರ್ ವಿಶ್ವನಾಥ್ ಮಾತನಾಡಿ ‘ಯಲಹಂಕ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಸಂಘಟನಾ ಶಕ್ತಿ ಉಜ್ವಲವಾದ ರೀತಿಯಲ್ಲಿದೆ. ಇಂದು ಯಲಹಂಕ ಗ್ರಾಮಾಂತರ ಮಂಡಲದ ವಿವಿಧ ಮೋರ್ಚಾ, ಪ್ರಕೋಷ್ಠ ಮತ್ತು ಶಕ್ತಿಕೇಂದ್ರಗಳ ನೂತನ ಪದಾಧಿಕಾರಿಗಳಿಗೆ ಅವರಿಗೆ ನೀಡಿರುವ ಹುದ್ದೆಯ ಪ್ರಮಾಣಪತ್ರಗಳನ್ನು ವಿತರಿಸಲಾಗಿದ್ದು, ಬಿಜೆಪಿ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸಲು ನೂತನ ಪದಾಧಿಕಾರಿಗಳು ಸಜ್ಜಾಗಿದ್ದಾರೆ.

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಯಲಹಂಕ ಕ್ಷೇತ್ರ ರಾಷ್ಟ್ರದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅತ್ಯಂತ ಸಂತೋಷಕರ ಸಂಗತಿಯಾಗಿದ್ದು, ಈ ಸಾಧನೆಯ ಕೀರ್ತಿ ಕ್ಷೇತ್ರದ ನನ್ನ ಕಾರ್ಯಕರ್ತ ಬಂಧುಗಳಿಗೆ ಸಲ್ಲುತ್ತದೆ.ಯಲಹಂಕ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ಅತ್ಯಂತ ಸದೃಢವಾದ ರೀತಿಯಲ್ಲಿ ಬಲಗೊಳ್ಳಲಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ 5,555 ಸದಸ್ಯರನ್ನು ನೊಂದಾಯಿಸುವ ಮೂಲಕ ಯಲಹಂಕ ಕ್ಷೇತ್ರದಲ್ಲೇ ಪ್ರಥಮ ಸ್ಥಾನ ಗಳಿಸಿದ ಸಿಂಗನಾಯಕನಹಳ್ಳಿ ಗ್ರಾ.ಪಂ‌.ಮಾಜಿ ಉಪಾಧ್ಯಕ್ಷ ಎಸ್.ಜಿ.ಪ್ರಶಾಂತ್ ರೆಡ್ಡಿ, ಎರಡನೇ ಸ್ಥಾನ ಗಳಿಸಿದ ಕೊಂಡಪ್ಪ ಬಡಾವಣೆಯ ದಾಮೋದರ್(4100 ಸದಸ್ಯರ ನೋಂದಣಿ), ಮೂರನೇ ಸ್ಥಾನ ಗಳಿಸಿದ ಎ.ಸಿ.ಮುನಿಕೃಷ್ಣಪ್ಪ (3800 ಸದಸ್ಯರ ನೋಂದಣಿ) ಇವರಿಗೆ ವಿಶೇಷ ಸನ್ಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ಹಿರಿಯ ಬಿಜೆಪಿ ಮುಖಂಡರಾದ ಎಸ್ ಎನ್ ರಾಜಣ್ಣ, ದಿಬ್ಬೂರು ಜಯಣ್ಣ, ಎಚ್.ಬಿ.ಹನುಮಯ್ಯ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಯಲಹಂಕ ನಗರ ಮಂಡಲ ಬಿಜೆಪಿ ಉಪಾಧ್ಯಕ್ಷ ಮುರಾರಿರಾಮು, ಪ್ರಧಾನ ಕಾರ್ಯದರ್ಶಿಗಳಾದ ವಿ.ಪವನ್ ಕುಮಾರ್, ಈಶ್ವರ್, ಯಲಹಂಕ ಗ್ರಾ.ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಯಲಹಂಕ-ಹೆಸರಘಟ್ಟ ಹೋಬಳಿ ಅಧ್ಯಕ್ಷ ವಸಂತ್ ಅರಕೆರೆ, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ಜೆ.ಮೂರ್ತಿ, ಯಲಹಂಕ ಗ್ರಾ.ಮಂಡಲ ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್, ನಗರ ಮಂಡಲ ಖಜಾಂಚಿ ಎ.ಸಿ.ಮುನಿಕೃಷ್ಣಪ್ಪ, ಚೌಡೇಶ್ವರಿ ವಾರ್ಡ್ ಬಿಜೆಪಿ ಅಧ್ಯಕ್ಷ ವಿ.ವಿ.ರಾಮಮೂರ್ತಿ, ಎ.ಎಸ್.ರಾಜ, ಅಟ್ಡೂರು ವಾರ್ಡ್ ಅಧ್ಯಕ್ಷ ನಾರಾಯಣಸ್ವಾಮಿ,  ಕೆಂಪೇಗೌಡ ವಾರ್ಡ್ ಅಧ್ಯಕ್ಷ ನರಸಿಂಹಮೂರ್ತಿ, ಯಲಹಂಕ ಉಪನಗರ ವಾರ್ಡ್ ಎಸ್.ರಾಜಣ್ಣ, ಯಲಹಂಕ ನಗರ ಮಂಡಲ ಒಬಿಸಿ ಮೋರ್ಚಾ ಅಧ್ಯಕ್ಷ ಮುನಿರಾಜು, ಎಸ್ಸಿ ಮೋರ್ಚಾ ಅಧ್ಯಕ್ಷ ಮುರಳಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಬೃಂದಾ ವೀರೇಶ್, ಎಸ್ಟಿ ಮೋರ್ಚಾ ಅಧ್ಯಕ್ಷ ಮೋಹನ್, ಯುವ ಮೋರ್ಚಾ ಅಧ್ಯಕ್ಷ ಎಚ್.ಎಸ್.ಕಿರಣ್, ಯುವ ಮೋರ್ಚಾ ಯಲಹಂಕ-ಹೆಸರಘಟ್ಟ ಹೋಬಳಿ ಅಧ್ಯಕ್ಷ ಪತಿಗೌಡ, ವಿವಿಧ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು ಸೇರಿದಂತೆ ಹಲವು ಬಿಜೆಪಿ ಮುಖಂಡರಿದ್ದರು.

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ

Public power

R Hanumanthu

Kogilu layout Yelahanka

9845085793

7349337989

Leave a Reply

Your email address will not be published. Required fields are marked *