ಅರಕೆರೆ ಗ್ರಾ.ಪಂ.ಸದಸ್ಯರಾಗಿ ಲಕ್ಷ್ಮಣ್ ಅವಿರೋಧ ಆಯ್ಕೆ

ಯಲಹಂಕ : ಅರಕೆರೆ ಗ್ರಾ.ಪಂ.ವ್ಯಾಪ್ತಿಯ ಶ್ಯಾನುಭೋಗನಹಳ್ಳಿಯಲ್ಲಿ ರಾಮಯ್ಯ ಎಂಬ ಗ್ರಾ.ಪಂ. ಸದಸ್ಯರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ದಿ.ರಾಮಯ್ಯ ನವರ ಮಗ ಲಕ್ಷ್ಮಣ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಗ್ರಾ.ಪಂ. ಸದಸ್ಯ ಲಕ್ಷ್ಮಣ್ ತಾನು ಗ್ರಾ.ಪಂ.ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಲು ಶಾಸಕ ಎಸ್.ಆರ್.ವಿಶ್ವನಾಥ್ ಅವರು ನೀಡಿದ ಸಹಕಾರ, ಬೆಂಬಲವನ್ನು ಸ್ಮರಿಸಿ ಅವರಿಗೆ ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡ ಎಸ್.ಎನ್. ರಾಜಣ್ಣ, ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ಜೆ.ಮೂರ್ತಿ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಗ್ರಾ.ಪಂ.ಮಾಜಿ‌ ಅಧ್ಯಕ್ಷರಾದ ಕೆ.ಆರ್.ತಿಮ್ಮೇಗೌಡ, ಎಸ್.ಜಿ. ನರಸಿಂಹಮೂರ್ತಿ(ಎಸ್.ಟಿ.ಡಿ.ಮೂರ್ತಿ), ಅರಕೆರೆ ಗ್ರಾ.ಪಂ. ಉಪಾಧ್ಯಕ್ಷ ಕೆ.ಎಂ.ಅರಸೇಗೌಡ, ಮುಖಂಡರಾದ ಮುನಿದಾಸಪ್ಪ, ನಾರಾಯಣಸ್ವಾಮಿ ಸೇರಿದಂತೆ ಗ್ರಾ.ಪಂ.ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿದ್ದರು.

Leave a Reply

Your email address will not be published. Required fields are marked *