ಮಹಿಳೆ ಮತ್ತು ಮಕ್ಕಳ ಆರೋಗ್ಯದ ಚಿಕಿತ್ಸೆಯನ್ನು ಸೇವೆ ಎಂಬಂತೆ ವೈದ್ಯರು ಮಾಡಬೇಕು: ಮಾಜಿ ಸಚಿವ ಅರವಿಂದ ಲಿಂಬಾವಳಿ

ಬೆಂಗಳೂರು, 29 ನವೆಂಬರ್ 2024:
ಮಹಿಳೆ ಮತ್ತು ಮಕ್ಕಳ ಆರೋಗ್ಯದ ಚಿಕಿತ್ಸೆ ನೀಡುವ ಆಸ್ಪತ್ರೆಗಳು ಮತ್ತು ವೈದ್ಯರು ಅದನ್ನು ಸೇವಾ ಮನೋಭಾವದಿಂದ ಮಾಡಬೇಕು ಎಂದು ಕರ್ನಾಟಕದ ಮಾಜಿ ಆರೋಗ್ಯ ಸಚಿವರಾದ ಅರವಿಂದ ಲಿಂಬಾವಳಿ ಹೇಳಿದರು.

ಅವರು ಇಂದು ನಗರದಲ್ಲಿ ಮಾರತ್ತಹಳ್ಳಿಯ ಮಾ ಕಾವೇರಿ ಆಸ್ಪತ್ರೆ, ಮಹಿಳೆ ಮತ್ತು ಮಕ್ಕಳ ಆರೋಗ್ಯಕ್ಕೆ ಮುಂಚೂಣಿಯಾದ ಚಿಕಿತ್ಸೆ ನೀಡಲು ವಿಶೇಷವಾಗಿ ಆರಂಭಗೊಂಡ ಹೊಸ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಕಾವೇರಿ ಆಸ್ಪತ್ರೆಯ ಸಂಸ್ಥೆಯ ನೂತನ ಘಟಕವಾದ ಈ ಮಾ ಕಾವೇರಿ ಆಸ್ಪತ್ರೆ ತಾಯಿ ಮತ್ತು ಮಕ್ಕಳ ಚಿಕಿತ್ಸೆಗೆ ಸಂಪೂರ್ಣವಾಗಿ ಸಮರ್ಪಿತವಾಗಿದೆ. 30 ಹಾಸಿಗೆ ಸಾಮರ್ಥ್ಯ ಹೊಂದಿರುವ ಈ ಆಸ್ಪತ್ರೆಯಲ್ಲಿ, ರೋಬೊಟಿಕ್ ತಂತ್ರಜ್ಞಾನದೊಂದಿಗೆ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಮತ್ತು ತಪಾಸಣೆಗಳನ್ನು ನುರಿತ ತಜ್ಞ ವೈದ್ಯರ ತಂಡ ನಡೆಸಲಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ವಿಜಯ್ ಬಾಸ್ಕರನ್ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ:
ಶೃತಿ
ಸಂಪರ್ಕ ಸಂಖ್ಯೆ:7676095602

Leave a Reply

Your email address will not be published. Required fields are marked *