ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಕೊರಳೂರು ಗ್ರಾಮದ ಎನ್ಎಚ್-207 ರಸ್ತೆಯಲ್ಲಿ ಬ್ರಿಡ್ಜ್ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸುವ ವಿಚಾರ ಮತ್ತು ಕ್ಷೇತ್ರದಲ್ಲಿನ ವಿವಿಧ ರಸ್ತೆಗಳ ಅಭಿವೃದ್ದಿ ವಿಚಾರವಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿರವರನ್ನು ರಾಜ್ಯ ಲೋಕಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರೊಂದಿಗೆ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡರವರು ಭೇಟಿ ಮಾಡಿ ಚರ್ಚಿಸಿದರು.