



















ಬಿಜೆಪಿ ಪಕ್ಷ ಸಂಘಟನೆಯಲ್ಲಿ ಹೊಸ ಮೈಲಿಗಲ್ಲು : 518 ಪದಾಧಿಕಾರಿಗಳ ನೇಮಕ :
ನೂತನ ಪದಾಧಿಕಾರಿಗಳಿಗೆ ಶಾಸಕ ವಿಶ್ವನಾಥ್ ರವರಿಂದ ಮಾರ್ಗದರ್ಶಿ ಸಲಹೆ :
ಯಲಹಂಕ : ಯಲಹಂಕ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಸಂಘಟನೆಯನ್ನು ಹೆಚ್ಚು ಸುಭದ್ರಗೊಳಿಸುವ ನಿಟ್ಟಿನಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹೊಸದೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಯಲಹಂಕ ನಗರ ಮಂಡಲ ಸೇರಿದಂತೆ ವಿವಿಧ ಮೋರ್ಚಾಗಳು, ಪ್ರಕೋಷ್ಠಗಳು ಹಾಗೂ ಬೂತ್ ಗಳಿಗೆ 518 ಹೊಸ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಪಕ್ಷ ಸಂಘಟನೆಯನ್ನು ಹೆಚ್ಚು ಚುರುಕುಗೊಳಿಸಿದ್ದು, ಸೋಮವಾರ ಯಲಹಂಕ ಉಪನಗರದ 4ನೇ ಹಂತದ ಖಾಸಗಿ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ದಲ್ಲಿ ‘ಸಂವಿಧಾನ ಸನ್ಮಾನ ಅಭಿಯಾನ’ಕ್ಕೆ ಶಾಸಕ ಎಸ್ ಆರ್ ವಿಶ್ವನಾಥ್ ಚಾಲನೆ ನೀಡದರು.
ಇದೇ ವೇಳೆ ಯಲಹಂಕ ನಗರ ಮಂಡಲ ಬಿಜೆಪಿ ನೂತನ ಪದಾಧಿಕಾರಿಗಳು, ವಿವಿಧ ಮೋರ್ಚಾಗಳು, ಪ್ರಕೋಷ್ಠಗಳ ಪದಾಧಿಕಾರಿಗಳಿಗೆ ಶಾಸಕ ವಿಶ್ವನಾಥ್ ಪಕ್ಷ ಸಂಘಟನೆ, ತತ್ವ-ಸಿದ್ಧಾಂತ, ಶಿಸ್ತು-ಸಂಯಮ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾರ್ಗದರ್ಶಿ ಸಲಹೆ, ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಎಸ್ ಎನ್ ರಾಜಣ್ಣ, ದಿಬ್ಬೂರು ಜಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಯಲಹಂಕ ನಗರ ಮಂಡಲ ಬಿಜೆಪಿ ಪ್ರಭಾರ ಅಧ್ಯಕ್ಷ ಮುರಾರಿರಾಮು, ಪ್ರಧಾನ ಕಾರ್ಯದರ್ಶಿಗಳಾದ ವಿ.ಪವನ್ ಕುಮಾರ್, ಈಶ್ವರ್, ಖಜಾಂಚಿ ಎ.ಸಿ.ಮುನಿಕೃಷ್ಣಪ್ಪ, ನಗರ ಮಂಡಲ ಓಬಿಸಿ ಮೋರ್ಚಾ ಅಧ್ಯಕ್ಷ ಮುನಿರಾಜು, ಎಸ್ ಸಿ ಮೋರ್ಚಾ ಅಧ್ಯಕ್ಷ ಮುರಳಿ, ಎಸ್.ಟಿ.ಮೋರ್ಚಾ ಅಧ್ಯಕ್ಷ ಮೋಹನ್, ಮಹಿಳಾ ಮೋರ್ಚಾ ಅಧ್ಯಕ್ಷೆ ಬೃಂದಾವೀರೇಶ್, ಯುವ ಮೋರ್ಚಾ ಅಧ್ಯಕ್ಷ ಎಚ್ ಎಸ್ ಕಿರಣ್, ಕೆಂಪೇಗೌಡ ವಾರ್ಡ್ 1ರ ಅಧ್ಯಕ್ಷ ನರಸಿಂಹಮೂರ್ತಿ, ಚೌಡೇಶ್ವರಿ ವಾರ್ಡ್ 2ರ ಅಧ್ಯಕ್ಷ ವಿ.ವಿ.ರಾಮಮೂರ್ತಿ, ಅಟ್ಟೂರು ವಾರ್ಡ್ 3ರ ಅಧ್ಯಕ್ಷ ನಾರಾಯಣಸ್ವಾಮಿ, ಯಲಹಂಕ ಉಪನಗರ ವಾರ್ಡ್ 4ರ ಅಧ್ಯಕ್ಷ ಎಸ್ ರಾಜಣ್ಣ, ಸೇರಿದಂತೆ ವಿವಿಧ ಮೋರ್ಚಾಗಳು, ಪ್ರಕೋಷ್ಠಗಳ ಪದಾಧಿಕಾರಿಗಳು, ವಿವಿಧ ಬೂತ್ ಗಳ ಸಂಚಾಲಕರು, ಸಹ ಸಂಚಾಲಕರಿದ್ದರು.