ಹೆಸರಘಟ್ಟ ಹೋಬಳಿ ಬಿಜೆಪಿ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ : 

ಯಲಹಂಕ : ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿಯ ‘ಕೇಸರಿ ವನ’ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಸರಘಟ್ಟ ಹೋಬಳಿ ಬಿಜೆಪಿ ನೂತನ ಪದಾಧಿಕಾರಿಗಳಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಪಕ್ಷದ ಹುದ್ದೆಯ ಪ್ರಮಾಣಪತ್ರ ವಿತರಿಸಿದರು.

ನಂತರ ಮಾತನಾಡಿದ ಅವರು ಬಿಜೆಪಿ ಪಕ್ಷದ ಸಂಘಟನೆಯನ್ನು ಹೆಚ್ಚು ಬಲಪಡಿಸುವ ದಿಸೆಯಲ್ಲಿ ಹೆಸರಘಟ್ಟ ಹೋಬಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ್ದು, ನೂತನ ಪದಾಧಿಕಾರಿಗಳಿಗೆ ಇಂದು ಹುದ್ದೆಯ ಪ್ರಮಾಣಪತ್ರ ವಿತರಿಸಲಾಗಿದೆ. ಪಕ್ಷದ ಹುದ್ದೆಯ ಜವಾಬ್ದಾರಿ ಪಡೆದಿರುವ ನೂತನ ಪದಾಧಿಕಾರಿಗಳು ಪಕ್ಷ ಸಂಘಟನೆಯ ಮಹತ್ವದ ಗುರಿಯೊಂದಿಗೆ ಪ್ರಮಾಣಿಕವಾಗಿ ಕಾರ್ಯನಿರ್ವಹಿಸ ಬೇಕು. ಬಿಜೆಪಿ ಪಕ್ಷ ಶಿಸ್ತಿನ ಪಕ್ಷವಾಗಿದ್ದು, ಸಂಘಟನೆಯೇ ಪಕ್ಷದ ಪ್ರಮುಖ ಧ್ಯೇಯ ಮತ್ತು ಶಕ್ತಿಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನೂತನ ಪದಾಧಿಕಾರಿಗಳು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ರೈತಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಜಿ.ಜೆ.ಮೂರ್ತಿ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಹೆಸರಘಟ್ಟ ಹೋಬಳಿ ಬಿಜೆಪಿ ಅಧ್ಯಕ್ಷ ವಸಂತ್ ಅರಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಎಸ್.ಜಿ.ಪ್ರಶಾಂತ್ ರೆಡ್ಡಿ, ಕೆ.ಎಂ.ಶಿವಮಾದಪ್ಪ (ಕೆಂಪಾಪುರ), ಉಪಾಧ್ಯಕ್ಷರಾದ ಪಿ.ಕೆ.ರಾಜಣ್ಣ, ಇಟಗಲ್ ಪುರ ಮೋಹನ್, ಕುಮಾರ್, ಹರೀಶ್ ಮೈಲಪ್ಪನಹಳ್ಳಿ, ಶ್ರೀಜಿತ್, ಕಾರ್ಯದರ್ಶಿಗಳಾದ ಆರ್.ಶಿವಾನಂದ(ಹೆಸರಘಟ್ಟ ಗ್ರಾ.ಪಂ.ಮಾಜಿ ಅಧ್ಯಕ್ಷರು), ಶಶಿಕುಮಾರ್, ಹರೀಶ್, ಹನುಮಂತ ರಾಜು, ಅಶೋಕ್ ಶಿವಕೋಟೆ, ಶೇಖರ್ ಹೆಚ್.ಎಸ್., ಅರುಣ್ ಕುಮಾರ್ ಸೇರಿದಂತೆ ಇನ್ನಿತರರಿದ್ದರು.

ನೂತನ ಪದಾಧಿಕಾರಿಗಳಿಗೆ ಬಿಜೆಪಿ ಯುವ ಮುಖಂಡರಾದ ಅಲೋಕ್ ವಿಶ್ವನಾಥ್ ಅವರು ಶುಭ ಹಾರೈಸಿದರು. ಪದಾಧಿಕಾರಿಗಳು ಅಲೋಕ್ ವಿಶ್ವನಾಥ್ ಅವರನ್ನು ಸನ್ಮಾನಿಸಿ ಗೌರವಿಸಿದರು.

Leave a Reply

Your email address will not be published. Required fields are marked *