ದೇವನಹಳ್ಳಿ: ಆಮ್ ಆದ್ಮಿ ಪಕ್ಷದ ರಾಷ್ಟೀಯ ಅಧ್ಯಕ್ಷರು ಹಾಗೂ ದೆಹಲಿ ಮುಖ್ಯಮಂತ್ರಿ ಶ್ರೀ ಅರವಿಂದ ಕೇಜ್ರಿವಾಲ್ ರವರ ಸೂಚನೆಯಂತೆ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆರವರ ಆದೇಶದ ಮೇರೆಗೆ ಪಕ್ಷದ ಕರ್ನಾಟಕ ರಾಜ್ಯದ ನೂತನ ಅಧ್ಯಕ್ಷರಾದ ಡಾ.ಮುಖ್ಯಮಂತ್ರಿ ಚಂದ್ರುರವರು ದೇವನಹಳ್ಳಿ ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಬಿ.ಕೆ.ಶಿವಪ್ಪರವರನ್ನು ನೂತನ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಿ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿಯ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಮ್ ಆದ್ಮಿ ಪಕ್ಷದ ನೂತನ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತಾ ಹಾಗೂ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರುರವರಿಂದ ಆದೇಶ ಪತ್ರ ಸ್ವೀಕರಿಸಿ ಮಾತನಾಡಿದ ಬಿ.ಕೆ.ಶಿವಪ್ಪ ಅವರು ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಉತ್ತಮವಾದ ಆಡಳಿತ ನೀಡುತ್ತಿರುವ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಹಾಗೂ ಭಗವಂತ ಮಾನ್ ನೇತೃತ್ವದ ಸರ್ಕಾರಗಳು ಮಾಡುತ್ತಿರುವ ದಕ್ಷ, ಪ್ರಾಮಾಣಿಕ ಹಾಗೂ ಭ್ರಷ್ಠಾಚಾರ ಮುಕ್ತ ಜನ ಸಾಮಾನ್ಯರ ಪರವಾದ ಅಭಿವೃದ್ದಿ ಮಾದರಿ ಆಡಳಿತ ಕರ್ನಾಟಕಕ್ಕೂ ಬೇಕಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತದಿಂದ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಕರ್ನಾಟಕದಲ್ಲಿ ದುರಾಡಳಿತ ನಡೆಸುತ್ತಿರುವ ಸರ್ಕಾರಗಳು ಭ್ರಷ್ಟಾಚಾರದ ಕೂಪವಾಗಿದ್ದು ಅಗತ್ಯ ವಸ್ತುಗಳ ಮೇಲೆ ಅತಿ ಹೆಚ್ಚು ತೆರಿಗೆ ವಿಧಿಸುವ ಮೂಲಕ ಜನರನ್ನು ಪ್ರತಿ ನಿತ್ಯ ಶೋಷಿಸುತ್ತಿವೆ. ಜನರ ಕಲ್ಯಾಣಕ್ಕಾಗಿ ಯಾವುದೇ ಪೂರಕ ಯೋಜನೆಗಳನ್ನು ರೂಪಿಸದೇ ಜನರ ತೆರಿಗೆ ಹಣವನ್ನು ಕಮೀಷನ್ ರೂಪದಲ್ಲಿ ಲೂಟಿ ಮಾಡುತ್ತಿವೆ. ಇದರಿಂದ ಜನರ ತೆರಿಗೆ ಹಣ ಜನರ ಕಲ್ಯಾಣಕ್ಕೆ ಉಪಯೋಗವಾಗದೇ ಭ್ರಷ್ಟಾಚಾರಿಗಳ ಪಾಲಾಗುತ್ತಿದೆ. ಕ್ಯಾನ್ಸರ್ನಂತೆ ದೇಶದೆಲ್ಲೆಡೆ ಹರಡಿರುವ ಭ್ರಷ್ಟಾಚಾರವನ್ನು ತೊಡೆದು ಹಾಕಲು ಮತ್ತು ಜನರ ತೆರಿಗೆ ಹಣವನ್ನು ಜನರ ಸೇವೆಗಾಗಿ ಬಳಸಲು ಹಾಗೂ ನಾಳಿನ ನಮ್ಮ ಮತ್ತು ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿ ಪೊರಕೆ ಗುರುತಿಗೆ ಮತ ನೀಡಿದಾಗ ಮಾತ್ರ ಸಾಧ್ಯ ಎಂದರು.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮಾತನಾಡಿ ಸರ್ವಜನಾಂಗದ ಶಾಂತಿಯ ತೋಟದಂತಿರುವ ನಮ್ಮ ದೇಶದಲ್ಲಿ ಕೆಲವು ಕೊಳಕು ಮನಸ್ಸುಗಳು ಸಮಾಜದಲ್ಲಿ ದ್ವೇಷ ಅಸೂಯೆ ಕೋಮುವಾದ ತುಂಬಿ ಜನರ ನೆಮ್ಮದಿ ಹಾಳು ಮಾಡುತ್ತಿದ್ದಾರೆ. ದೇಶದಲ್ಲಿ ಮತ್ತು ಕರ್ನಾಟಕ ರಾಜ್ಯದಲ್ಲಿ ಭ್ರಷ್ಠಾಚಾರ ತುಂಬಿ ತುಳುಕುತ್ತಿದ್ದು ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಜನ ಸಾಮಾನ್ಯರು ಕಣ್ಣೀರಲ್ಲಿ ಕೈ ತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನ ಸಾಮಾನ್ಯರು ನೆಮ್ಮದಿಯಿಂದ ಬದುಕಬೇಕಾದರೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.
ಈ ಸಂಧರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತಾ,ಕರ್ನಾಟಕ ರಾಜ್ಯದ ಸಂಘಟನ ಉಸ್ತುವಾರಿ ದಾಮೋದರನ್, ನೂತನ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ,ರಾಜ್ಯ ಖಜಾಂಚಿ ಪ್ರಕಾಶ್ ನೆಡಂಗೋಡಿ,ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗಣ್ಣ ಅರ್ಜುನ್ ಹಲಗೀಗೌಡರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಬಿ.ಕೆ.ಶಿವಪ್ಪ ನೇಮಕ.
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ.
ದೇವನಹಳ್ಳಿ: ಆಮ್ ಆದ್ಮಿ ಪಕ್ಷದ ರಾಷ್ಟೀಯ ಅಧ್ಯಕ್ಷರು ಹಾಗೂ ದೆಹಲಿ ಮುಖ್ಯಮಂತ್ರಿ ಶ್ರೀ ಅರವಿಂದ ಕೇಜ್ರಿವಾಲ್ ರವರ ಸೂಚನೆಯಂತೆ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆರವರ ಆದೇಶದ ಮೇರೆಗೆ ಪಕ್ಷದ ಕರ್ನಾಟಕ ರಾಜ್ಯದ ನೂತನ ಅಧ್ಯಕ್ಷರಾದ ಡಾ.ಮುಖ್ಯಮಂತ್ರಿ ಚಂದ್ರುರವರು ದೇವನಹಳ್ಳಿ ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಬಿ.ಕೆ.ಶಿವಪ್ಪರವರನ್ನು ನೂತನ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಿ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿಯ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಮ್ ಆದ್ಮಿ ಪಕ್ಷದ ನೂತನ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತಾ ಹಾಗೂ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರುರವರಿಂದ ಆದೇಶ ಪತ್ರ ಸ್ವೀಕರಿಸಿ ಮಾತನಾಡಿದ ಬಿ.ಕೆ.ಶಿವಪ್ಪ ಅವರು ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಉತ್ತಮವಾದ ಆಡಳಿತ ನೀಡುತ್ತಿರುವ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಹಾಗೂ ಭಗವಂತ ಮಾನ್ ನೇತೃತ್ವದ ಸರ್ಕಾರಗಳು ಮಾಡುತ್ತಿರುವ ದಕ್ಷ, ಪ್ರಾಮಾಣಿಕ ಹಾಗೂ ಭ್ರಷ್ಠಾಚಾರ ಮುಕ್ತ ಜನ ಸಾಮಾನ್ಯರ ಪರವಾದ ಅಭಿವೃದ್ದಿ ಮಾದರಿ ಆಡಳಿತ ಕರ್ನಾಟಕಕ್ಕೂ ಬೇಕಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತದಿಂದ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಕರ್ನಾಟಕದಲ್ಲಿ ದುರಾಡಳಿತ ನಡೆಸುತ್ತಿರುವ ಸರ್ಕಾರಗಳು ಭ್ರಷ್ಟಾಚಾರದ ಕೂಪವಾಗಿದ್ದು ಅಗತ್ಯ ವಸ್ತುಗಳ ಮೇಲೆ ಅತಿ ಹೆಚ್ಚು ತೆರಿಗೆ ವಿಧಿಸುವ ಮೂಲಕ ಜನರನ್ನು ಪ್ರತಿ ನಿತ್ಯ ಶೋಷಿಸುತ್ತಿವೆ. ಜನರ ಕಲ್ಯಾಣಕ್ಕಾಗಿ ಯಾವುದೇ ಪೂರಕ ಯೋಜನೆಗಳನ್ನು ರೂಪಿಸದೇ ಜನರ ತೆರಿಗೆ ಹಣವನ್ನು ಕಮೀಷನ್ ರೂಪದಲ್ಲಿ ಲೂಟಿ ಮಾಡುತ್ತಿವೆ. ಇದರಿಂದ ಜನರ ತೆರಿಗೆ ಹಣ ಜನರ ಕಲ್ಯಾಣಕ್ಕೆ ಉಪಯೋಗವಾಗದೇ ಭ್ರಷ್ಟಾಚಾರಿಗಳ ಪಾಲಾಗುತ್ತಿದೆ. ಕ್ಯಾನ್ಸರ್ನಂತೆ ದೇಶದೆಲ್ಲೆಡೆ ಹರಡಿರುವ ಭ್ರಷ್ಟಾಚಾರವನ್ನು ತೊಡೆದು ಹಾಕಲು ಮತ್ತು ಜನರ ತೆರಿಗೆ ಹಣವನ್ನು ಜನರ ಸೇವೆಗಾಗಿ ಬಳಸಲು ಹಾಗೂ ನಾಳಿನ ನಮ್ಮ ಮತ್ತು ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿ ಪೊರಕೆ ಗುರುತಿಗೆ ಮತ ನೀಡಿದಾಗ ಮಾತ್ರ ಸಾಧ್ಯ ಎಂದರು.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮಾತನಾಡಿ ಸರ್ವಜನಾಂಗದ ಶಾಂತಿಯ ತೋಟದಂತಿರುವ ನಮ್ಮ ದೇಶದಲ್ಲಿ ಕೆಲವು ಕೊಳಕು ಮನಸ್ಸುಗಳು ಸಮಾಜದಲ್ಲಿ ದ್ವೇಷ ಅಸೂಯೆ ಕೋಮುವಾದ ತುಂಬಿ ಜನರ ನೆಮ್ಮದಿ ಹಾಳು ಮಾಡುತ್ತಿದ್ದಾರೆ. ದೇಶದಲ್ಲಿ ಮತ್ತು ಕರ್ನಾಟಕ ರಾಜ್ಯದಲ್ಲಿ ಭ್ರಷ್ಠಾಚಾರ ತುಂಬಿ ತುಳುಕುತ್ತಿದ್ದು ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಜನ ಸಾಮಾನ್ಯರು ಕಣ್ಣೀರಲ್ಲಿ ಕೈ ತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನ ಸಾಮಾನ್ಯರು ನೆಮ್ಮದಿಯಿಂದ ಬದುಕಬೇಕಾದರೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.
ಈ ಸಂಧರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತಾ,ಕರ್ನಾಟಕ ರಾಜ್ಯದ ಸಂಘಟನ ಉಸ್ತುವಾರಿ ದಾಮೋದರನ್, ನೂತನ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ,ರಾಜ್ಯ ಖಜಾಂಚಿ ಪ್ರಕಾಶ್ ನೆಡಂಗೋಡಿ,ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗಣ್ಣ ಅರ್ಜುನ್ ಹಲಗೀಗೌಡರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.