
ಪಂಚಾಯಿತಿ ಮುಂದೆ ಪ್ರತಿಭಟನೆಗೆ ತೀರ್ಮಾನ: ಭಾಸ್ಕರ್ ಅಂಕಾಲಮಡುಗು ಶಿವಾರೆಡ್ಡಿ
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಕಡದಮರಿ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿಯನ್ನು ಕಡೆಗಣಿಸಿರುವ ಅಧಿಕಾರಿಗಳ ಧೋರಣೆ ಖಂಡಿಸಿ ಪಂಚಾಯಿತಿ ಎದುರು ಡಿ.26 ಗುರುವಾರ ನೂರಾರು ಗ್ರಾಮಸ್ಥರೊಂದಿಗೆ ಪ್ರತಿಭಟಿಸಲಾಗುವುದು ಎಂದು ಭಾಸ್ಕರ್ ಅಂಕಾಲಮಡುಗು ಶಿವಾರೆಡ್ಡಿ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಪಂಚಾಯಿತಿಯಲ್ಲಿ ಸಣ್ಣಪುಟ್ಟ ಕೆಲಕಾರ್ಯಗಳಿಗೂ ಲಂಚ ನೀಡುವ ಪರಿಸ್ಥಿತಿಯಿದೆ. ಇಲ್ಲವಾದಲ್ಲಿ ಇಲ್ಲಸಲ್ಲದ ಸಬೂಬು ಹೇಳಿ ಕಚೇರಿಗೆ ರೈತಾಪಿ ಹಾಗೂ ಬಡವರನ್ನು ಅಲೆದಾಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.ಅಲ್ಲದೆ ಅಧಿಕಾರಿಗಳು ಕುಂಟುನೆಪ ಹೇಳಿ ಕಚೇರಿಗೆ ಆಗಮಿಸದೆ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಕೆಲಸಕಾರ್ಯ ನಿರ್ಲಕ್ಷಿಸಿ ಮನಸೋಇಚ್ಛೆ ವರ್ತಿಸುತ್ತಿದ್ದಾರೆ.
ಸರ್ಕಾರಿ ಜಮೀನು ಭೂಗಳ್ಳರ ಪಾಲಾಗುತ್ತಿದ್ದರೂ ಅಧಿಕಾರಿಗಳು ಜಾಣಕುರುಡರಂತೆ ವರ್ತಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪಂಚಾಯಿತಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.