ದೇವನಹಳ್ಳಿ: ರಾಜ್ಯದ ಶ್ರೀಮಂತ ಪಂಚಾಯಿತಿ ಎಂದೇ ಪರಿಗಣಿಸಲ್ಪಡುವ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಉಮಾಮುನಿರಾಜು ಹಾಗೂ ಉಪಾಧ್ಯಕ್ಷರಾಗಿ ಮುನಿರಾಜಪ್ಪ ಅವರುಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಗುರುವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಮಾಮುನಿರಾಜು ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನಳಿನಾಮುನಿರಾಜು ಅವರುಗಳು ನಾಮಪತ್ರ ಸಲ್ಲಿಸಿದ್ದರು ಚುನಾವಣಾ ಪ್ರಕ್ರಿಯೆಯ ಕೊನೆ ಹಂತದಲ್ಲಿ ನಳಿನಾಮುನಿರಾಜು ಅವರು ನಾಮಪತ್ರವನ್ನು ವಾಪಸ್ಸು ಪಡೆದಿದ್ದರಿಂದ ಉಮಾಮುನಿರಾಜು ಅವರು ಅವಿರೋಧವಾಗಿ ಆಯ್ಕೆಗೊಂಡರು.
ಎಸ್ಸಿ ಮೀಸಲು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮುನಿರಾಜು ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವೇಣುಗೋಪಾಲ್ ಅವರುಗಳು ನಾಮಪತ್ರ ಸಲ್ಲಿಸಿದ್ದರು ಕೊನೆ ಗಳಿಗೆಯಲ್ಲಿ ವೇಣುಗೋಪಾಲ್ ಅವರು ಕೂಡ ನಾಮಪತ್ರ ವಾಪಸ್ಸು ಪಡೆದಿದ್ದರಿಂದ ಉಪಾಧ್ಯಕ್ಷರಾಗಿ ಮುನಿರಾಜಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ನೂತನ ಅಧ್ಯಕ್ಷೆ ಉಮಾಮುನಿರಾಜು ಅವರು ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುತ್ತೇವೆ ಜನರ ಆಶಯಕ್ಕೆ ತಕ್ಕಂತೆ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ನೂತನ ಉಪಾಧ್ಯಕ್ಷ ಅಣ್ಣೇಶ್ವರ ಮುನಿರಾಜು ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಹಲವು ವರ್ಷಗಳ ಸೇವೆಯನ್ನು ಗುರುತಿಸಿ ನನಗೆ ನೀಡಿದ ಅಧಿಕಾರಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಅಭಿವೃದ್ಧಿಯಲ್ಲಿ ಮಾದರಿ ಪಂಚಾಯಿತಿಯನ್ನಾಗಿಸಲು ಶ್ರಮಿಸುತ್ತೇನೆ, ರಸ್ತೆ ಚರಂಡಿ ಬೀದಿ ದೀಪ ಮುಂತಾದ ಅಭಿವೃದ್ಧಿ ಕೆಲಸಗಳಿಗೆ ಎಲ್ಲಾ ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮಿಸುವುದಾಗಿ ಭರವಸೆ ನೀಡಿದರು.

ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳ ಸ್ಥಾನಕ್ಕೆ ಆಯ್ಕೆಯಾದವರನ್ನು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಅಭಿನಂದಿಸಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರ ಏಳಿಗೆಗಾಗಿ ಕೆಲಸ ಮಾಡುತ್ತಿದೆ ನಮ್ಮ ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದವರು ಪಕ್ಷಾತೀತವಾಗಿ ಗ್ರಾಮಗಳಲ್ಲಿ ಒಳಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಗ್ರಾಮಸ್ಥರ ವಿಶ್ವಾಸಗಳಿಸಬೇಕು. ಅಧಿಕಾರ ಶಾಶ್ವತವಲ್ಲ ಅಧಿಕಾರ ಇದ್ದಂಥ ಸಂದರ್ಭದಲ್ಲಿ ಎಲ್ಲರೂ ಮೆಚ್ಚುವಂತೆ ನಡೆದುಕೊಂಡು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುವಂತೆ ನೂತನ ಆಡಳಿತ ಮಂಡಳಿಗೆ ಕಿವಿ ಮಾತು ಹೇಳಿದರು.
ಇದೇ ವೇಳೆ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಭಾವತಿ ವೇಣುಗೋಪಾಲ್ ಹಾಗೂ ಚಿಕ್ಕಸಣ್ಣೆ ಮುಕುಂದ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಜಗನ್ನಾಥ್, ಕೆಸಿ.ಮಂಜುನಾಥ್, ಎಂ. ನಾರಾಯಣಸ್ವಾಮಿ, ಯರ್ತಿಗಾನಹಳ್ಳಿ ಗೋಪಾಲ್, ಲಕ್ಷ್ಮಣ್ ಗೌಡ, ಬೈಚಾಪುರ ರಾಜಣ್ಣ, ನಜೀರ್ ಪಾಷಾ, ಬೈರದೇನಳ್ಳಿ ಜಯರಾಮೇಗೌಡ, ಕನ್ನಮಂಗಲ ಪಟಾಲಪ್ಪ, ಗೋಪಾಲಕೃಷ್ಣ, ಚಿಕ್ಕಸಣ್ಣೆ ಮುನಿಯಪ್ಪ, ನಂದಕುಮಾರ್, ದೊಡ್ಡಸಣ್ಣೆ ನಂಜೇಗೌಡ, ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಣ್ಣ, ಗೋಪಾಲ, ಮಂಜುಳ ವೆಂಕಟೇಶ್, ರುಕ್ಮಣಿಯಮ್ಮ, ಶಿಲ್ಪವೆಂಕಟೇಶ್, ಚುನಾವಣಾಧಿಕಾರಿ ನಳಿನಾಕ್ಷಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗರಾಜು ಇದ್ದರು.

ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳ ಅವಿರೋಧ ಆಯ್ಕೆ.

ದೇವನಹಳ್ಳಿ: ರಾಜ್ಯದ ಶ್ರೀಮಂತ ಪಂಚಾಯಿತಿ ಎಂದೇ ಪರಿಗಣಿಸಲ್ಪಡುವ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಉಮಾಮುನಿರಾಜು ಹಾಗೂ ಉಪಾಧ್ಯಕ್ಷರಾಗಿ ಮುನಿರಾಜಪ್ಪ ಅವರುಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಗುರುವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಮಾಮುನಿರಾಜು ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನಳಿನಾಮುನಿರಾಜು ಅವರುಗಳು ನಾಮಪತ್ರ ಸಲ್ಲಿಸಿದ್ದರು ಚುನಾವಣಾ ಪ್ರಕ್ರಿಯೆಯ ಕೊನೆ ಹಂತದಲ್ಲಿ ನಳಿನಾಮುನಿರಾಜು ಅವರು ನಾಮಪತ್ರವನ್ನು ವಾಪಸ್ಸು ಪಡೆದಿದ್ದರಿಂದ ಉಮಾಮುನಿರಾಜು ಅವರು ಅವಿರೋಧವಾಗಿ ಆಯ್ಕೆಗೊಂಡರು.
ಎಸ್ಸಿ ಮೀಸಲು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮುನಿರಾಜು ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವೇಣುಗೋಪಾಲ್ ಅವರುಗಳು ನಾಮಪತ್ರ ಸಲ್ಲಿಸಿದ್ದರು ಕೊನೆ ಗಳಿಗೆಯಲ್ಲಿ ವೇಣುಗೋಪಾಲ್ ಅವರು ಕೂಡ ನಾಮಪತ್ರ ವಾಪಸ್ಸು ಪಡೆದಿದ್ದರಿಂದ ಉಪಾಧ್ಯಕ್ಷರಾಗಿ ಮುನಿರಾಜಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ನೂತನ ಅಧ್ಯಕ್ಷೆ ಉಮಾಮುನಿರಾಜು ಅವರು ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುತ್ತೇವೆ ಜನರ ಆಶಯಕ್ಕೆ ತಕ್ಕಂತೆ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ನೂತನ ಉಪಾಧ್ಯಕ್ಷ ಅಣ್ಣೇಶ್ವರ ಮುನಿರಾಜು ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಹಲವು ವರ್ಷಗಳ ಸೇವೆಯನ್ನು ಗುರುತಿಸಿ ನನಗೆ ನೀಡಿದ ಅಧಿಕಾರಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಅಭಿವೃದ್ಧಿಯಲ್ಲಿ ಮಾದರಿ ಪಂಚಾಯಿತಿಯನ್ನಾಗಿಸಲು ಶ್ರಮಿಸುತ್ತೇನೆ, ರಸ್ತೆ ಚರಂಡಿ ಬೀದಿ ದೀಪ ಮುಂತಾದ ಅಭಿವೃದ್ಧಿ ಕೆಲಸಗಳಿಗೆ ಎಲ್ಲಾ ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮಿಸುವುದಾಗಿ ಭರವಸೆ ನೀಡಿದರು.

ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳ ಸ್ಥಾನಕ್ಕೆ ಆಯ್ಕೆಯಾದವರನ್ನು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಅಭಿನಂದಿಸಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರ ಏಳಿಗೆಗಾಗಿ ಕೆಲಸ ಮಾಡುತ್ತಿದೆ ನಮ್ಮ ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದವರು ಪಕ್ಷಾತೀತವಾಗಿ ಗ್ರಾಮಗಳಲ್ಲಿ ಒಳಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಗ್ರಾಮಸ್ಥರ ವಿಶ್ವಾಸಗಳಿಸಬೇಕು. ಅಧಿಕಾರ ಶಾಶ್ವತವಲ್ಲ ಅಧಿಕಾರ ಇದ್ದಂಥ ಸಂದರ್ಭದಲ್ಲಿ ಎಲ್ಲರೂ ಮೆಚ್ಚುವಂತೆ ನಡೆದುಕೊಂಡು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುವಂತೆ ನೂತನ ಆಡಳಿತ ಮಂಡಳಿಗೆ ಕಿವಿ ಮಾತು ಹೇಳಿದರು.
ಇದೇ ವೇಳೆ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಭಾವತಿ ವೇಣುಗೋಪಾಲ್ ಹಾಗೂ ಚಿಕ್ಕಸಣ್ಣೆ ಮುಕುಂದ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಜಗನ್ನಾಥ್, ಕೆಸಿ.ಮಂಜುನಾಥ್, ಎಂ. ನಾರಾಯಣಸ್ವಾಮಿ, ಯರ್ತಿಗಾನಹಳ್ಳಿ ಗೋಪಾಲ್, ಲಕ್ಷ್ಮಣ್ ಗೌಡ, ಬೈಚಾಪುರ ರಾಜಣ್ಣ, ನಜೀರ್ ಪಾಷಾ, ಬೈರದೇನಳ್ಳಿ ಜಯರಾಮೇಗೌಡ, ಕನ್ನಮಂಗಲ ಪಟಾಲಪ್ಪ, ಗೋಪಾಲಕೃಷ್ಣ, ಚಿಕ್ಕಸಣ್ಣೆ ಮುನಿಯಪ್ಪ, ನಂದಕುಮಾರ್, ದೊಡ್ಡಸಣ್ಣೆ ನಂಜೇಗೌಡ, ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಣ್ಣ, ಗೋಪಾಲ, ಮಂಜುಳ ವೆಂಕಟೇಶ್, ರುಕ್ಮಣಿಯಮ್ಮ, ಶಿಲ್ಪವೆಂಕಟೇಶ್, ಚುನಾವಣಾಧಿಕಾರಿ ನಳಿನಾಕ್ಷಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗರಾಜು ಇದ್ದರು.

Leave a Reply

Your email address will not be published. Required fields are marked *