






ಚೌಡೇಶ್ವರಿ ವಾರ್ಡ್, ಕೆಂಪೇಗೌಡ ವಾರ್ಡ್ ಬಿಜೆಪಿ ಮುಖಂಡರಿಂದ ಡಾ.ವಾಣಿಶ್ರೀ ವಿಶ್ವನಾಥ್ ರವರಿಗೆ ಜನ್ಮದಿನದ ಶುಭ ಹಾರೈಕೆ :
ಯಲಹಂಕ : ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರು, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಡಾ.ವಾಣಿಶ್ರೀ ವಿಶ್ವನಾಥ್ ಅವರ ಜನ್ಮದಿನದ ಪ್ರಯುಕ್ತ ಯಲಹಂಕ ನಗರ ವ್ಯಾಪ್ತಿಯ ಚೌಡೇಶ್ವರಿ ವಾರ್ಡ್-2 ಮತ್ತು ಕೆಂಪೇಗೌಡ ವಾರ್ಡ್-1ರ ಬಿಜೆಪಿ ಮುಖಂಡರು, ಕಾರ್ಯಕರ್ತರು ಚೌಡೇಶ್ವರಿ ವಾರ್ಡ್ ಬಿಜೆಪಿ ಅಧ್ಯಕ್ಷ ವಿ.ವಿ.ರಾಮಮೂರ್ತಿ ಮತ್ತು ಕೆಂಪೇಗೌಡ ವಾರ್ಡ್ ಬಿಜೆಪಿ ಅಧ್ಯಕ್ಷ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ಡಾ.ವಾಣಿಶ್ರೀ ವಿಶ್ವನಾಥ್ ಅವರಿಗೆ ಗೌರವ ಸನ್ಮಾನ ನೀಡಿ ಜನ್ಮದಿನದ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಯಲಹಂಕ ಶಾಸಕರು, ಬಿಡಿಎ ಮಾಜಿ ಅಧ್ಯಕ್ಷರಾದ ಎಸ್.ಆರ್. ವಿಶ್ವನಾಥ್, ಯಲಹಂಕ ನಗರ ಮಂಡಲ ಬಿಜೆಪಿ ಪ್ರಭಾರ ಅಧ್ಯಕ್ಷ ಮುರಾರಿರಾಮು, ಪ್ರಧಾನ ಕಾರ್ಯದರ್ಶಿ ಗಳಾದ ವಿ.ಪವನ್ ಕುಮಾರ್, ಈಶ್ವರ್, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರಮಾ ಮುನಿರಾಜು, ಚೌಡೇಶ್ವರಿ ವಾರ್ಡ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾರಾಯಣ ಪೈ, ಸಾಮಾಜಿಕ ಜಾಲ ತಾಣ ವಿಭಾಗದ ದಾಮೋದರ್ ಸೇರಿದಂತೆ ಚೌಡೇಶ್ವರಿ ವಾರ್ಡ್-2 ಮತ್ತು ಕೆಂಪೇಗೌಡ ವಾರ್ಡ್-1ರ ವ್ಯಾಪ್ತಿಯ ಬೂತ್ ಅಧ್ಯಕ್ಷರು, ಪ್ರಭಾರಿಗಳು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿದ್ದು, ಡಾ.ವಾಣಿಶ್ರೀ ವಿಶ್ವನಾಥ್ ಅವರಿಗೆ ಜನ್ಮದಿನದ ಶುಭ ಹಾರೈಸಿದರು.