ಚಿಕ್ಕಬಳ್ಳಾಪುರ : ನೂತನ ಶಾಸಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಂತೆ ಪ್ರತಿ ವರ್ಷ ವರಮಹಾಲಕ್ಷಿ ಹಬ್ಬಕ್ಕೆ ಕ್ಷೇತ್ರದ ಪ್ರತಿಯೊಂದು ಮನೆಗೆ ಹರಿಸಿಣ ಕುಂಕುಮ ಬಳೆ ಸಹಿತ ಸೀರೆಯನ್ನು ವರಮಹಾಲಕ್ಷಿ ಹಬ್ಬಕ್ಕೆ ಉಡುಗೊರೆಯಾಗಿ ವಿತರಣೆ ಮಾಡುವ ಮೂಲಕ ನುಡಿದಂತೆ ನಡೆದ ಶಾಸಕ ಎನಿಸಿಕೊಂಡಿದ್ದಾರೆ.
ಪ್ರದೀಫ್ ಈಶ್ವರ್ ಶಾಸಕರಾದ ಮೇಲೆ ಹೆಣ್ಣು ಮಕ್ಕಳಿಗೆ ಹಬ್ಬದ ಹುಡುಗೊರೆಯಾಗಿ ಪ್ರತಿವರ್ಷ ವರಮಹಾಲಕ್ಷ್ಮಿಗೆ ಸೀರೆ ಫಲತಾಂಬೂಲ ನೀಡುವುದಾಗಿ ಘೋಷಿಸಿದ್ದರು ಅವರ ಕೊಟ್ಟ ಮಾತಿನಂತೆ ಇಂದಿನಿಂದ ಮನೆ ಮನೆಗೂ ಸೀರೆ ಹಂಚುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಶ್ರೀ ಲಕ್ಷಿ ವೆಂಕಟೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಸೀರೆ ವಿತರಣೆ ಪ್ರಾರಂಬಿಸಿದ್ದಾರೆ
ಈ ವೇಳೆ ಮಾತನಾಡಿದ ಕೆ.ಎಲ್.ಶ್ರೀನಿವಾಸ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಲು ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದ ಪ್ರದೀಪ್ ಈಶ್ವರ್ ಶ್ರೀಲಕ್ಷಿವೆಂಕಟೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದ್ದರು.
ಚುನಾವಣೆಯಲ್ಲಿ ಯಾರೂ ಊಹಿಸದ ರೀತಿಯಲ್ಲಿ ಗೆಲುವು ಸಾಧಿಸಿದ ಸಂದರ್ಭದಲ್ಲಿ ಮಾತನಾಡುತ್ತಾ ಕ್ಷೇತ್ರದ ಅಭಿವೃದ್ದಿಯ ತಮ್ಮ ಕನಸುಗಳನ್ನು ಹಂಚಿಕೊಂಡಿದ್ದರು. ಶಾಸಕತ್ವದ ೫ ವರ್ಷಗಳ ಕಾಲ ಪ್ರತಿ ವರಮಹಾಲಕ್ಷಿ ಹಬ್ಬಕ್ಕೆ ಕ್ಷೇತ್ರದ ಪ್ರತಿ ಮನೆಗೆ ಭಾಗೀನ ಕೊಡುವ ವಾಗ್ದಾನ ನೀಡಿದ್ದರು.
ಇಂದು ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸೀರೆ ವಿತರಣೆಗೆ ಚಾಲನೆ ನೀಡಲಾಗಿದೆ. ನಗರವೂ ಸೇರಿ ಹಬ್ಬದ ಹೊತ್ತಿಗೆ ಕ್ಷೇತ್ರದ ಪ್ರತಿಯೊಂದು ಊರಿನ ಮನೆ ಮನೆಗೂ ಸೀರೆ ಬಳೆ ವಿತರಣೆ ಆಗಲಿದೆ.ಇದರಲ್ಲಿ ಯಾವುದೇ ರಾಜಕೀಯದ ಉದ್ದೇಶ ಇಲ್ಲ. ಏಕೆಂದರೆ ಭಾರತೀಯ ಸಂಸ್ಕೃತಿ ಸಂಸ್ಕಾರದಲ್ಲಿ ಹಬ್ಬಗಳಿಗೆ ಬಾಗೀನ ಕೊಡುವ ಪದ್ದತಿ ರೂಢಿಯಲ್ಲಿದೆ.ಈಸತ್ಸಂಪ್ರದಾಯವನ್ನು ಶಾಸಕರು ಮುಂದುವರೆಸಿಕೊoಡು ಹೋಗುವ ಮನಸ್ಸು ಮಾಡಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ,ರಘು, ಡ್ಯಾನ್ಸ್ ಶ್ರೀನಿವಾಸ್,ಪ್ರೆಸ್ ಸೂರಿ,
ಯಾಲವಹಳ್ಳಿ ಜನಾರ್ಧನ,
ಸುಧಾವೆಂಕಟೇಶ್,ಡೈರಿ ಗೋಪಿ, ಲಕ್ಷಣ್, ಜಯರಾಮ್,ವೆಂಕಟ್, ಪರಿಶ್ರಮ ಅಕಾಡೆಮಿ ಸಿಬ್ಬಂದಿ ಇದ್ದರು.

ವರಮಹಾಲಕ್ಷಿ ಹಬ್ಬಕ್ಕೆ ಸೀರೆ ವಿತರಿಸಿದ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ : ನೂತನ ಶಾಸಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಂತೆ ಪ್ರತಿ ವರ್ಷ ವರಮಹಾಲಕ್ಷಿ ಹಬ್ಬಕ್ಕೆ ಕ್ಷೇತ್ರದ ಪ್ರತಿಯೊಂದು ಮನೆಗೆ ಹರಿಸಿಣ ಕುಂಕುಮ ಬಳೆ ಸಹಿತ ಸೀರೆಯನ್ನು ವರಮಹಾಲಕ್ಷಿ ಹಬ್ಬಕ್ಕೆ ಉಡುಗೊರೆಯಾಗಿ ವಿತರಣೆ ಮಾಡುವ ಮೂಲಕ ನುಡಿದಂತೆ ನಡೆದ ಶಾಸಕ ಎನಿಸಿಕೊಂಡಿದ್ದಾರೆ.
ಪ್ರದೀಫ್ ಈಶ್ವರ್ ಶಾಸಕರಾದ ಮೇಲೆ ಹೆಣ್ಣು ಮಕ್ಕಳಿಗೆ ಹಬ್ಬದ ಹುಡುಗೊರೆಯಾಗಿ ಪ್ರತಿವರ್ಷ ವರಮಹಾಲಕ್ಷ್ಮಿಗೆ ಸೀರೆ ಫಲತಾಂಬೂಲ ನೀಡುವುದಾಗಿ ಘೋಷಿಸಿದ್ದರು ಅವರ ಕೊಟ್ಟ ಮಾತಿನಂತೆ ಇಂದಿನಿಂದ ಮನೆ ಮನೆಗೂ ಸೀರೆ ಹಂಚುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಶ್ರೀ ಲಕ್ಷಿ ವೆಂಕಟೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಸೀರೆ ವಿತರಣೆ ಪ್ರಾರಂಬಿಸಿದ್ದಾರೆ
ಈ ವೇಳೆ ಮಾತನಾಡಿದ ಕೆ.ಎಲ್.ಶ್ರೀನಿವಾಸ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಲು ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದ ಪ್ರದೀಪ್ ಈಶ್ವರ್ ಶ್ರೀಲಕ್ಷಿವೆಂಕಟೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದ್ದರು.
ಚುನಾವಣೆಯಲ್ಲಿ ಯಾರೂ ಊಹಿಸದ ರೀತಿಯಲ್ಲಿ ಗೆಲುವು ಸಾಧಿಸಿದ ಸಂದರ್ಭದಲ್ಲಿ ಮಾತನಾಡುತ್ತಾ ಕ್ಷೇತ್ರದ ಅಭಿವೃದ್ದಿಯ ತಮ್ಮ ಕನಸುಗಳನ್ನು ಹಂಚಿಕೊಂಡಿದ್ದರು. ಶಾಸಕತ್ವದ ೫ ವರ್ಷಗಳ ಕಾಲ ಪ್ರತಿ ವರಮಹಾಲಕ್ಷಿ ಹಬ್ಬಕ್ಕೆ ಕ್ಷೇತ್ರದ ಪ್ರತಿ ಮನೆಗೆ ಭಾಗೀನ ಕೊಡುವ ವಾಗ್ದಾನ ನೀಡಿದ್ದರು.
ಇಂದು ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸೀರೆ ವಿತರಣೆಗೆ ಚಾಲನೆ ನೀಡಲಾಗಿದೆ. ನಗರವೂ ಸೇರಿ ಹಬ್ಬದ ಹೊತ್ತಿಗೆ ಕ್ಷೇತ್ರದ ಪ್ರತಿಯೊಂದು ಊರಿನ ಮನೆ ಮನೆಗೂ ಸೀರೆ ಬಳೆ ವಿತರಣೆ ಆಗಲಿದೆ.ಇದರಲ್ಲಿ ಯಾವುದೇ ರಾಜಕೀಯದ ಉದ್ದೇಶ ಇಲ್ಲ. ಏಕೆಂದರೆ ಭಾರತೀಯ ಸಂಸ್ಕೃತಿ ಸಂಸ್ಕಾರದಲ್ಲಿ ಹಬ್ಬಗಳಿಗೆ ಬಾಗೀನ ಕೊಡುವ ಪದ್ದತಿ ರೂಢಿಯಲ್ಲಿದೆ.ಈಸತ್ಸಂಪ್ರದಾಯವನ್ನು ಶಾಸಕರು ಮುಂದುವರೆಸಿಕೊoಡು ಹೋಗುವ ಮನಸ್ಸು ಮಾಡಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ,ರಘು, ಡ್ಯಾನ್ಸ್ ಶ್ರೀನಿವಾಸ್,ಪ್ರೆಸ್ ಸೂರಿ,
ಯಾಲವಹಳ್ಳಿ ಜನಾರ್ಧನ,
ಸುಧಾವೆಂಕಟೇಶ್,ಡೈರಿ ಗೋಪಿ, ಲಕ್ಷಣ್, ಜಯರಾಮ್,ವೆಂಕಟ್, ಪರಿಶ್ರಮ ಅಕಾಡೆಮಿ ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *