ಚಿಕ್ಕಬಳ್ಳಾಪುರ ಜುಲೈ,27:
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾಲೀಕರಣ(PMFME)ಯೋಜನೆ ಯನ್ನು ಸದುಪಯೋಗ ಮಾಡಿಕೊಂಡು
ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಜಿಲ್ಲೆಯ ಜನರು ಸ್ಥಾಪಿಸಬೇಕು ಬೇಕು ಎಂದು ಕೃಷಿ ಇಲಾಖೆ ವಿಶೇಷ ಕಾರ್ಯದರ್ಶಿ ಡಾ. ಆರ್ ಮನೋಜ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ PMFME ಯೋಜನೆ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೈಯಕ್ತಿಕ ಉದ್ದಿಮೆಗಳು ಮತ್ತು ಗುಂಪುಗಳು,ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಹಾಗೂ ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.
.
18 ವರ್ಷ ಮೇಲ್ಪಟ್ಟವರು ಮತ್ತು ಯಾವುದೇ ಕನಿಷ್ಠ
ವಿದ್ಯಾರ್ಹತೆ ಇಲ್ಲದವರು,
ಇತರೇ ಸರ್ಕಾರಿ ಯೋಜನೆಗಳಲ್ಲಿ ಸಹಾಯಧನ ಸಂಪರ್ಕಿತ ಬ್ಯಾಂಕ್ ಸಾಲ ಪಡೆದಿದ್ದರೂ ಸಹ ಇದರಡಿ
ಅರ್ಹರಾಗಿರುತ್ತಾರೆ.
.
ವೈಯಕ್ತಿಕ ಉದ್ದಿಮೆಗಳಿಗೆ, ಮಾಲೀಕತ್ವದ ಸಂಸ್ಥೆಗಳಿಗೆ, ಪಾಲುದಾರಿಕೆ ಸಂಸ್ಥೆಗಳಿಗೆ, ಖಾಸಗೀ
ಸಂಸ್ಥೆಗಳಿಗೆ, ರೈತ ಉತ್ಪಾದಕ ಸಂಸ್ಥೆಗಳಿಗೆ, ಸರ್ಕಾರೇತರ ಸಂಸ್ಥೆಗಳಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಸಾಲ
ಸಂಪರ್ಕಿತ ಶೇ 35% ರಷ್ಟು ಸಹಾಯಧನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 15% ಸಹಾಯಧನ, ಗರಿಷ್ಟ ರೂ 15 ಲಕ್ಷಗಳು ಅಥವಾ ಶೇ 50% ಪಡೆಯಲು ಅವಕಾಶ ಇದೆ ಎಂದು ತಿಳಿಸಿದರು.
.
2ಪ್ರಾಥಮಿಕ ಬಂಡವಾಳ (Seed Capital),ಆಹಾರ ಸಂಸ್ಕರಣಾ ಚಟುವಟಿಕೆಗಳಲ್ಲಿ ತೊಡಗಿರುವ ಸ್ವಸಹಾಯ ಸಂಘಗಳ ಸದಸ್ಯರುಗಳಿಗೆ ದುಡಿಯುವ ಬಂಡವಾಳ ಮತ್ತು ಸಣ್ಣ ಉಪಕರಣಗಳ
ಖರೀದಿಗಾಗಿ ಪ್ರತೀ ಸದಸ್ಯರಿಗೆ ಗರಿಷ್ಟ ರೂ 40000/-
ಪ್ರತೀ ಸ್ವಸಹಾಯ ಸಂಘಕ್ಕೆ ಗರಿಷ್ಟ ರೂ 4.00 ಲಕ್ಷ ಪಡೆಯಲು ಅವಕಾಶ ವಿದೆ.ಸಾಮಾನ್ಯ ಮೂಲಭೂತ ಸೌಕರ್ಯ ಸ್ಥಾಪನೆಗೆ ಸಹಾಯಧನ
,ಸಾಮಾನ್ಯ ಮೂಲಭೂತ ಸೌಕರ್ಯ ಸೃಷ್ಟಿಗೆ ಶೇ 35% ರಷ್ಟು ಸಾಲ ಸಂಪರ್ಕಿತ ಸಹಾಯಧನ, ಗರಿಷ್ಟ ಸಹಾಯಧನ ರೂ 300 ಕೋಟಿ ಹಾಗೂ
ಗರಿಷ್ಟ ಯೋಜನಾ ವೆಚ್ಚ ರೂ 10,00 ಕೋಟಿ ಯಾಗಿರುತ್ತದೆ.
ರೈತ ಉತ್ಪಾದಕ ಸಂಸ್ಥೆಗಳು/ರೈತ ಉತ್ಪಾದಕ ಕಂಪನಿಗಳು, ಸಹಕಾರಿಗಳು, ಸ್ವಸಹಾಯ ಸಂಘಗಳು & ಅದರ ಒಕ್ಕೂಟ
ಮತ್ತು ಸರ್ಕಾರೀ ಸಂಸ್ಥೆಗಳು ಅರ್ಹ ಸಂಸ್ಥೆಗಳಾಗಿರುತ್ತವೆ.
ಅರ್ಜಿದಾರರ ಸಂಸ್ಥೆಯ ಕನಿಷ್ಟ ವಹಿವಾಟು ಮತ್ತು ಅನುಭವದ ಯಾವುದೇ ಪೂರ್ವ ಷರತ್ತುಗಳಿಲ್ಲ.
ವಿಂಗಡಣೆ, ಶ್ರೇಣೀಕರಣ, ಸಂಗ್ರಹಣೆ, ಸಾಮಾನ್ಯ ಸಂಸ್ಕರಣೆ, ಪ್ಯಾಕೇಜಿಂಗ್ ಮತ್ತು ಪ್ರಯೋಗಾಲಯ ಇತ್ಯಾದಿ ಸ್ಥಾಪಿಸಲು ಅವಕಾಶ ಇದೆ ಎಂದು ತಿಳಿಸಿದರು.
ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಸಹಾಯ
ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಚಟುವಟಿಕೆಗಳಾದ ಪ್ಯಾಕೇಜಿಂಗ್, ಜಾಹೀರಾತು, ಸಾಮಾನ್ಯ ಬಾಂಡ್ ಅಭಿವೃದ್ಧಿ, ಚಿಲ್ಲರೆ ಮಾರಾಟ ಸಂಸ್ಥೆಗಳೊಂದಿಗೆ ಒಡಂಬಡಿಕೆ ಇತ್ಯಾದಿಗಳಿಗಾಗಿ ಶೇ 50% ರಷ್ಟು ಸಹಾಯಧನವನ್ನು ಈ ಯೋಜನೆಯಡಿ ನೀಡಲಾಗುವುದು,
ಬ್ರಾಂಡಿಂಗ್ ಸಹಾಯದನ ಪಡೆಯಲು ರೈತ ಉತ್ಪಾದಕ ಸಂಸ್ಥೆಗಳು/ಕಂಪನಿಗಳು, ಸಹಕಾರಿಗಳು, ಸ್ವಸಹಾಯ ಸಂಘಗಳು, ಸಹಕಾರೀ ಸಂಸ್ಥೆಗಳು ಮತ್ತು ಕಿರು ಆಹಾರ
ಸಂಸ್ಕರಣಾ ಉದ್ದಿಮೆಗಳ ವಿಶೇಷ ಉದ್ದೇಶ ಸಂಸ್ಥೆ ಗಳು ಅರ್ಹವಾಗಿರುತ್ತವೆ ಎಂದು ಹೇಳಿದರು.
ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಸಲ್ಲಿಕೆಗಾಗಿ ಕೃಷಿ ಇಲಾಖೆಯ ಜಿಲ್ಲಾ ಮುಖ್ಯಸ್ಥರಾದ ಆಯಾ ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಿ ಅಥವಾ ಕೆಪೆಕ್ ಸಂಸ್ಥೆಯ ಯೋಜನಾ
ನಿರ್ವಹಣಾ ಘಟಕವನ್ನು ಸಂಪರ್ಕಿಸಿ
ದೂ : 9731201215/9844468648/9164024818 ಅಥವಾ
ವೆಬ್ ಸೈಟ್ ವಿಳಾಸ
https://pmfme.mofpi.gov.in/
https://kappec.karnataka.gov.in/ ವನ್ನು ಸಂಪರ್ಕ ಮಾಡಿ ಯೋಜನೆಯ ಲಾಭ ಪಡೆಯಲು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ,ಅಪರ ಜಿಲ್ಲಾಧಿಕಾರಿ ಡಾ|| ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ವಾಸುದೇವ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
ಅತ್ಮ ನಿರ್ಭರ ಭಾರತ ಅಭಿಯಾನದ ಪಿಎಂಮ್ ಯೋಜನೆಯ ಪಲಾನುಭವ ಪಡೆಯಿರಿ:ಕೃಷಿ ಇಲಾಖೆ ವಿಶೇಷ ಕಾರ್ಯದರ್ಶಿ ಡಾ. ಆರ್ ಮನೋಜ್
ಚಿಕ್ಕಬಳ್ಳಾಪುರ ಜುಲೈ,27:
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾಲೀಕರಣ(PMFME)ಯೋಜನೆ ಯನ್ನು ಸದುಪಯೋಗ ಮಾಡಿಕೊಂಡು
ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಜಿಲ್ಲೆಯ ಜನರು ಸ್ಥಾಪಿಸಬೇಕು ಬೇಕು ಎಂದು ಕೃಷಿ ಇಲಾಖೆ ವಿಶೇಷ ಕಾರ್ಯದರ್ಶಿ ಡಾ. ಆರ್ ಮನೋಜ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ PMFME ಯೋಜನೆ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೈಯಕ್ತಿಕ ಉದ್ದಿಮೆಗಳು ಮತ್ತು ಗುಂಪುಗಳು,ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಹಾಗೂ ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.
.
18 ವರ್ಷ ಮೇಲ್ಪಟ್ಟವರು ಮತ್ತು ಯಾವುದೇ ಕನಿಷ್ಠ
ವಿದ್ಯಾರ್ಹತೆ ಇಲ್ಲದವರು,
ಇತರೇ ಸರ್ಕಾರಿ ಯೋಜನೆಗಳಲ್ಲಿ ಸಹಾಯಧನ ಸಂಪರ್ಕಿತ ಬ್ಯಾಂಕ್ ಸಾಲ ಪಡೆದಿದ್ದರೂ ಸಹ ಇದರಡಿ
ಅರ್ಹರಾಗಿರುತ್ತಾರೆ.
.
ವೈಯಕ್ತಿಕ ಉದ್ದಿಮೆಗಳಿಗೆ, ಮಾಲೀಕತ್ವದ ಸಂಸ್ಥೆಗಳಿಗೆ, ಪಾಲುದಾರಿಕೆ ಸಂಸ್ಥೆಗಳಿಗೆ, ಖಾಸಗೀ
ಸಂಸ್ಥೆಗಳಿಗೆ, ರೈತ ಉತ್ಪಾದಕ ಸಂಸ್ಥೆಗಳಿಗೆ, ಸರ್ಕಾರೇತರ ಸಂಸ್ಥೆಗಳಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಸಾಲ
ಸಂಪರ್ಕಿತ ಶೇ 35% ರಷ್ಟು ಸಹಾಯಧನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 15% ಸಹಾಯಧನ, ಗರಿಷ್ಟ ರೂ 15 ಲಕ್ಷಗಳು ಅಥವಾ ಶೇ 50% ಪಡೆಯಲು ಅವಕಾಶ ಇದೆ ಎಂದು ತಿಳಿಸಿದರು.
.
2ಪ್ರಾಥಮಿಕ ಬಂಡವಾಳ (Seed Capital),ಆಹಾರ ಸಂಸ್ಕರಣಾ ಚಟುವಟಿಕೆಗಳಲ್ಲಿ ತೊಡಗಿರುವ ಸ್ವಸಹಾಯ ಸಂಘಗಳ ಸದಸ್ಯರುಗಳಿಗೆ ದುಡಿಯುವ ಬಂಡವಾಳ ಮತ್ತು ಸಣ್ಣ ಉಪಕರಣಗಳ
ಖರೀದಿಗಾಗಿ ಪ್ರತೀ ಸದಸ್ಯರಿಗೆ ಗರಿಷ್ಟ ರೂ 40000/-
ಪ್ರತೀ ಸ್ವಸಹಾಯ ಸಂಘಕ್ಕೆ ಗರಿಷ್ಟ ರೂ 4.00 ಲಕ್ಷ ಪಡೆಯಲು ಅವಕಾಶ ವಿದೆ.ಸಾಮಾನ್ಯ ಮೂಲಭೂತ ಸೌಕರ್ಯ ಸ್ಥಾಪನೆಗೆ ಸಹಾಯಧನ
,ಸಾಮಾನ್ಯ ಮೂಲಭೂತ ಸೌಕರ್ಯ ಸೃಷ್ಟಿಗೆ ಶೇ 35% ರಷ್ಟು ಸಾಲ ಸಂಪರ್ಕಿತ ಸಹಾಯಧನ, ಗರಿಷ್ಟ ಸಹಾಯಧನ ರೂ 300 ಕೋಟಿ ಹಾಗೂ
ಗರಿಷ್ಟ ಯೋಜನಾ ವೆಚ್ಚ ರೂ 10,00 ಕೋಟಿ ಯಾಗಿರುತ್ತದೆ.
ರೈತ ಉತ್ಪಾದಕ ಸಂಸ್ಥೆಗಳು/ರೈತ ಉತ್ಪಾದಕ ಕಂಪನಿಗಳು, ಸಹಕಾರಿಗಳು, ಸ್ವಸಹಾಯ ಸಂಘಗಳು & ಅದರ ಒಕ್ಕೂಟ
ಮತ್ತು ಸರ್ಕಾರೀ ಸಂಸ್ಥೆಗಳು ಅರ್ಹ ಸಂಸ್ಥೆಗಳಾಗಿರುತ್ತವೆ.
ಅರ್ಜಿದಾರರ ಸಂಸ್ಥೆಯ ಕನಿಷ್ಟ ವಹಿವಾಟು ಮತ್ತು ಅನುಭವದ ಯಾವುದೇ ಪೂರ್ವ ಷರತ್ತುಗಳಿಲ್ಲ.
ವಿಂಗಡಣೆ, ಶ್ರೇಣೀಕರಣ, ಸಂಗ್ರಹಣೆ, ಸಾಮಾನ್ಯ ಸಂಸ್ಕರಣೆ, ಪ್ಯಾಕೇಜಿಂಗ್ ಮತ್ತು ಪ್ರಯೋಗಾಲಯ ಇತ್ಯಾದಿ ಸ್ಥಾಪಿಸಲು ಅವಕಾಶ ಇದೆ ಎಂದು ತಿಳಿಸಿದರು.
ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಸಹಾಯ
ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಚಟುವಟಿಕೆಗಳಾದ ಪ್ಯಾಕೇಜಿಂಗ್, ಜಾಹೀರಾತು, ಸಾಮಾನ್ಯ ಬಾಂಡ್ ಅಭಿವೃದ್ಧಿ, ಚಿಲ್ಲರೆ ಮಾರಾಟ ಸಂಸ್ಥೆಗಳೊಂದಿಗೆ ಒಡಂಬಡಿಕೆ ಇತ್ಯಾದಿಗಳಿಗಾಗಿ ಶೇ 50% ರಷ್ಟು ಸಹಾಯಧನವನ್ನು ಈ ಯೋಜನೆಯಡಿ ನೀಡಲಾಗುವುದು,
ಬ್ರಾಂಡಿಂಗ್ ಸಹಾಯದನ ಪಡೆಯಲು ರೈತ ಉತ್ಪಾದಕ ಸಂಸ್ಥೆಗಳು/ಕಂಪನಿಗಳು, ಸಹಕಾರಿಗಳು, ಸ್ವಸಹಾಯ ಸಂಘಗಳು, ಸಹಕಾರೀ ಸಂಸ್ಥೆಗಳು ಮತ್ತು ಕಿರು ಆಹಾರ
ಸಂಸ್ಕರಣಾ ಉದ್ದಿಮೆಗಳ ವಿಶೇಷ ಉದ್ದೇಶ ಸಂಸ್ಥೆ ಗಳು ಅರ್ಹವಾಗಿರುತ್ತವೆ ಎಂದು ಹೇಳಿದರು.
ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಸಲ್ಲಿಕೆಗಾಗಿ ಕೃಷಿ ಇಲಾಖೆಯ ಜಿಲ್ಲಾ ಮುಖ್ಯಸ್ಥರಾದ ಆಯಾ ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಿ ಅಥವಾ ಕೆಪೆಕ್ ಸಂಸ್ಥೆಯ ಯೋಜನಾ
ನಿರ್ವಹಣಾ ಘಟಕವನ್ನು ಸಂಪರ್ಕಿಸಿ
ದೂ : 9731201215/9844468648/9164024818 ಅಥವಾ
ವೆಬ್ ಸೈಟ್ ವಿಳಾಸ
https://pmfme.mofpi.gov.in/
https://kappec.karnataka.gov.in/ ವನ್ನು ಸಂಪರ್ಕ ಮಾಡಿ ಯೋಜನೆಯ ಲಾಭ ಪಡೆಯಲು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ,ಅಪರ ಜಿಲ್ಲಾಧಿಕಾರಿ ಡಾ|| ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ವಾಸುದೇವ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು