



ಸಹಕಾರ ಸಂಘಗಳು ದೀನ-ದಲಿತರ ಬದುಕು ರೂಪಿಸುವತ್ತ ಗಮನ ಹರಿಸಲಿ : ಎಸ್.ಆರ್.ವಿಶ್ವನಾಥ್
ಯಲಹಂಕ : ಸಹಕಾರ ಸಂಘಗಳು ದೀನ-ದಲಿತರ ಬದುಕು ರೂಪಿಸುವತ್ತ ಗಮನ ಹರಿಸಿದಾಗ ಮಾತ್ರ ಸಹಕಾರ ತತ್ವದ ಧ್ಯೇಯ ಈಡೇರಿದಂತಾಗುತ್ತದೆ ಎಂದು ಶಾಸಕ ಎಸ್ ಆರ್ ವಿಶ್ವನಾಥ್ ಅಭಿಪ್ರಾಯಪಟ್ಟರು.
ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿ ಸಮೀಪದ ಕೇಸರಿವನ ದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹೆಸರಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾದಪ್ಪನಹಳ್ಳಿ ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಿ ಅಭಿನಂದಿಸಿದ ನಂತರ ಮಾತನಾಡಿದ ಅವರು ‘ಹೆಸರಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗಾಗಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಎಲ್ಲಾ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ನಂತರ ನಡೆದ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಹಿರಿಯ ಬಿಜೆಪಿ ಮುಖಂಡ ಮಾದಪ್ಪನಹಳ್ಳಿಯ ಎಂ.ಬಿ.ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿರುವುದು ಸಂತೋಷದ ಸಂಗತಿ. ನೂತನ ಅಧ್ಯಕ್ಷರು ಸುಧಾರಾಣಾತ್ಮಕ ಆಡಳಿತದ ಮೂಲಕ ಸಹಕಾರ ಸಂಘವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿ, ರೈತರು, ದೀನ-ದಲಿತರ ಪರವಾದ ಆಡಳಿತಾತ್ಮಕ ತೀರ್ಮಾನ ತೆಗೆದುಕೊಳ್ಳುವ ಮೂಲಕ ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್ ಎನ್ ರಾಜಣ್ಣ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನ ಮಲೆ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಗಳಾದ ಮಂಜುನಾಥ್, ಸೋಮ ಶೇಖರ್, ಯಲಹಂಕ ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್, ವಿ.ಪವನ್ ಕುಮಾರ್, ಗ್ರಾಮಾಂತರ ಮಂಡಲ ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್, ಜಿ.ಪಂ.ಮಾಜಿ ಸದಸ್ಯ ಡಾ.ಉದ್ದಂಡಯ್ಯ,ಕೃಷ್ಣಯ್ಯ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ. ನರಸಿಂಹಮೂರ್ತಿ (ಎಸ್.ಟಿ.ಡಿ.ಮೂರ್ತಿ), ಹೆಸರ ಘಟ್ಟ ಹೋಬಳಿ ಬಿಜೆಪಿ ಅಧ್ಯಕ್ಷ ಅರಕೆರೆ ವಸಂತ್, ಪ್ರಧಾನ ಕಾರ್ಯದರ್ಶಿ ಗಳಾದ ಎಸ್.ಜಿ.ಪ್ರಶಾಂತ್ ರೆಡ್ಡಿ, ಶಿವಮಾದು, ಶಿವಕೋಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಟಿ.ರಮೇಶ್, ಯುವ ಮೋರ್ಚಾ ಅಧ್ಯಕ್ಷರಾದ ಎಚ್. ಎಸ್.ಕಿರಣ್ ಕುಮಾರ್, ಪತಿಗೌಡ, ಸಿಂಗನಾಯ ಕನಹಳ್ಳಿ ಗ್ರಾ.ಪಂ. ಸದಸ್ಯರಾದ ಚೈತ್ರ ಕೆಂಪೇಗೌಡ, ಕೆ.ಬಾಬು, ಮಲ್ಲೇಶ್, ಮುನಿಕೃಷ್ಣ, ಎಸ್ಸಿ ಮೋರ್ಚಾ ಅಧ್ಯಕ್ಷರಾದ ಬಿ.ಶ್ರೀನಿವಾಸಯ್ಯ, ಮುರಳಿ, ಮಾಜಿ ಅಧ್ಯಕ್ಷ ವೆಂಕಟೇಶ್, ಹೆಸರಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷೆ ರತ್ನಮ್ಮ ಸೇರಿದಂತೆ ಸಂಘದ ಸದಸ್ಯರಿದ್ದರು.