ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೆರವಿನಿಂದ ಕರೆ ಹೂಳೆತ್ತುವ ಕಾಮಗಾರಿಗೆ ಚಾಲನೆ :

ಯಲಹಂಕ : ಕೆರೆಗಳ ಅಭಿವೃದ್ಧಿಯ ಮಹತ್ವಾಕಾಂಕ್ಷೆ ಯೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ‘ನಮ್ಮೂರು ನಮ್ಮ ಕೆರೆ’ ಯೋಜನೆಯ ಅಡಿಯಲ್ಲಿ ಯಲಹಂಕ ಕ್ಷೇತ್ರದ ಮಾದಪ್ಪನಹಳ್ಳಿ ಗ್ರಾಮದಲ್ಲಿ 12 ಲಕ್ಷ ರು.ವೆಚ್ಚದ ಕೆರೆ ಹೂಳೆತ್ತುವ ಕಾಮಗಾರಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಸೋಮವಾರ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಉಮರಬ್ಬಾ, ಯಲಹಂಕ ತಾಲ್ಲೂಕು ಯೋಜನಾಧಿಕಾರಿ ಸವಿತಾ ಶೆಟ್ಟಿ, ಕೃಷಿ ಅಧಿಕಾರಿ ರಾಜೇಶ್, ಸಿಂಗನಾಯಕನಹಳ್ಳಿ ಗ್ರಾ.ಪಂ‌. ಅಧ್ಯಕ್ಷೆ ಅಮರಾವತಮ್ಮ, ಹೆಸರಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಬಿ‌.ಕೃಷ್ಣಮೂರ್ತಿ, ಬೆಂಗಳೂರು ಡೈರಿ ಮಾಜಿ ನಿರ್ದೇಶಕ ವಿಜಯಕುಮಾರ್, ಗ್ರಾ.ಪಂ‌.ಸದಸ್ಯೆ ಚೈತ್ರ ಕೆಂಪೇಗೌಡ, ಮುಖಂಡರಾದ ಅನಿಲ್ ಕುಮಾರ್, ನವೀನ್ ಕುಮಾರ್, ನರಸಿಂಹಯ್ಯ, ಚೌಡಯ್ಯ, ನಾಗರಾಜು, ನಂಜೇಗೌಡ, ಶ್ರೀಧರಮೂರ್ತಿ, ಲೋಕೇಶ್, ಪದ್ಮಮ್ಮ, ಮೇಲ್ವಿಚಾರಕಿ ಜಮುನಾ ಸೇರಿದಂತೆ ಸೇವಾ ಪ್ರತಿನಿಧಿಗಳು ಹಾಗೂ ಸ್ತ್ರೀ ಶಕ್ತಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಅರಳಿಕುಂಟೆ ಕರೆ ಅಭಿವೃದ್ಧಿ ಸಮಿತಿಯ ಸದಸ್ಯರಿದ್ದರು.

Leave a Reply

Your email address will not be published. Required fields are marked *