ಚೊಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ನಾಗೇಶ್ ಅವಿರೋಧ ಆಯ್ಕೆ :

ಯಲಹಂಕ : ಕ್ಷೇತ್ರದ ಅರಕೆರೆ ಗ್ರಾ.ಪಂ‌.ವ್ಯಾಪ್ತಿಯ ಚೊಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ರಾಧ ಎಚ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ ನಾಗೇಶ್ ಅವರನ್ನು ಶಾಸಕ ಎಸ್ ಆರ್ ವಿಶ್ವನಾಥ್ ಅವರು ಬುಧವಾರ ತಮ್ಮ ಗೃಹಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್, ಬೆಂ. ನಗರ ಜಿಲ್ಲಾ ಬಿಜೆಪಿ ಪ್ರಭಾರಿ ಎಸ್.ಎನ್.ರಾಜಣ್ಣ, ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಯಲಹಂಕ ಗ್ರಾ.ಮಂಡಲ ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್, ಬೆಂಗಳೂರು ಡೈರಿ ಮಾಜಿ ನಿರ್ದೇಶಕ ವಿಜಯಕುಮಾರ್, ಅರಕೆರೆ ಗ್ರಾ.ಪಂ‌.ಮಾಜಿ ಅಧ್ಯಕ್ಷ ಕೆ.ಆರ್.ತಿಮ್ಮೇಗೌಡ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ (ಎಸ್.ಟಿ.ಡಿ.ಮೂರ್ತಿ), ಹೆಸರಘಟ್ಟ ಹೋಬಳಿ ಬಿಜೆಪಿ ಅಧ್ಯಕ್ಷ ಅರಕೆರೆ ವಸಂತ್, ಪ್ರಧಾ‌ನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ಆರ್.ಎಸ್.ಎಸ್.ಎನ್.ಬ್ಯಾಂಕ್ ನಿರ್ದೇಶಕ ತಿಮ್ಮರಾಯಿಗೌಡ,ಗ್ರಾ.ಪಂ.ಮಾಜಿ ಸದಸ್ಯ ಸಿ.ಪಿ.ಮಂಜುನಾಥ್, ಮುಖಂಡರಾದ ಚಂದ್ರಪ್ಪ, ರಮೇಶ್, ಮುದ್ದಣ್ಣ, ರಾಮಕೃಷ್ಣಪ್ಪ, ಪಟಾಲಪ್ಪ, ರೇಣುಕೇಶ್ವರ, ಸಿ.ಎನ್.ಶಿವಣ್ಣ ಸೇರಿದಂತೆ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಗ್ರಾ.ಪಂ.ಸದಸ್ಯರು ಹಾಗೂ ಚೊಕ್ಕನಹಳ್ಳಿ ಗ್ರಾಮದ ಮುಖಂಡರಿದ್ದರು.

Leave a Reply

Your email address will not be published. Required fields are marked *