ಇ- ಖಾತೆಗೆ ಸಂಬಂಧಿಸಿದ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲಾಗುವುದು : ಡಿ.ಸಿ ಜಿ.ಜಗದೀಶ

ಬೆಂಗಳೂರು ನಗರ ಜಿಲ್ಲೆ, ದಿನಾಂಕ:- 09-01-2025 : ಇ-ಖಾತೆ ಇಲ್ಲದೇ ಅಸ್ತಿ ನೋಂದಣಿಗೆ ಸಮಸ್ಯೆಗಳು ಎದುರಾಗುತ್ತಿದ್ದು, ಈ ಕುರಿತು ಸಾರ್ವಜನಿಕರಿಂದ ಹಲವಾರು ದೂರುಗಳು ಕೇಳಿ ಬರುತ್ತಿದ್ದು, ಈ ಕುರಿತು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರು ಹೇಳಿದರು.

ಇಂದು ಬೆಂಗಳೂರು ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ ಇಲಾಖೆ ಹಾಗೂ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಇರುವಂತಹ ಬಡಾವಣೆ ಹಾಗೂ ಅಭಿವೃದ್ಧಿಗೊಳ್ಳುತ್ತಿರುವ ಬಡಾವಣೆಗಳಿಗೆ ಸಂಬಂಧಿಸಿದಂತೆ ನೋಂದಣಿ ರೂಪುರೇಷ ನಿರ್ಮಿಸಿರುವ ಬಗ್ಗೆ ಹಾಗೂ ಅಧಿಕೃತ ಬಡಾವಣೆಗಳು ಇ-ಖಾತೆ ಪಡೆಯುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇ-ಖಾತೆ ಇಲ್ಲದೇ ನೋಂದಣಿ ಪ್ರಕ್ರಿಯೆ ಸಾಧ್ಯವಿಲ್ಲದ ಕಾರಣ ಸಾರ್ವಜನಿಕರ ಆಸ್ತಿ ನೋಂದಣಿಗೆ ಸಮಸ್ಯೆಯಾಗುತ್ತಿರುವ ಕುರಿತು ದೂರುಗಳು ಬರುತ್ತಿದ್ದು, ಬೆಂಗಳೂರಿನ ಜನರು ತಮ್ಮ ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಎದುರಿಸುತ್ತಿರುವ ತೊಂದರೆಗಳಿಗೆ ಪರಿಹಾರ ಹುಡುಕುವ ಪ್ರಯತ್ನದಲ್ಲಿ ಈ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು, ಬಿಲ್ಡರ್ಗಳು ಹಾಗೂ ಡೆವಲರಪ್ಸ್ ತಮ್ಮ ಸಮಸ್ಯೆಗಳನ್ನು ವ್ಯಕ್ತಪಡಿಸಿ ಬಗೆ ಹರಿಸಿಕೊಳ್ಳಬಹುದು ಎಂದು ಹೇಳಿದರು.

ಸಾರ್ವಜನಿಕರು, ಬಿಲ್ಡರ್ಗಳು ಹಾಗೂ ಡೆವಲರಪ್ಸ್ ಗಳ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಹಾಗೂ ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಧಿಕಾರಿಗಳಾದ ಕೆ.ಎಸ್ ಲತಾಕುಮಾರಿ, ಬಿಲ್ಡಾರ್ಗಳು, ಡೆವಲಪರ್ಗಳು, ಸಾರ್ವಜನಿಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ


Public power

R Hanumanthu

Kogilu layout Yelahanka

9845085793.   7349337989

Leave a Reply

Your email address will not be published. Required fields are marked *