







ಇಟಗಲ್ ಪುರ, ಶ್ಯಾನುಭೋಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ :
ಶಾಸಕ ಎಸ್ ಆರ್ ವಿಶ್ವನಾಥ್ ಅವರಿಂದ ನೂತನ ಅಧ್ಯಕ್ಷರಿಗೆ ಸನ್ಮಾನ :
ಯಲಹಂಕ : ಕ್ಷೇತ್ರದ ರಾಜಾನುಕುಂಟೆ ಗ್ರಾ.ಪಂ. ವ್ಯಾಪ್ತಿಯ ಇಟಗಲ್ ಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಮೋಹನ್ ಕುಮಾರ್ ಉಪಾಧ್ಯಕ್ಷರಾಗಿ ಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಗೆಯೇ ಅರಕೆರೆ ಗ್ರಾ.ಪಂ. ವ್ಯಾಪ್ತಿಯ ಶ್ಯಾನುಭೋಗನಹಳ್ಖಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಚಿಕ್ಕೇಗೌಡರು, ಉಪಾಧ್ಯಕ್ಷರಾಗಿ ನಾಗವೇಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾದ ಎಂ.ಮೋಹನ್ ಕುಮಾರ್ (ಇಟಗಲ್ ಪುರ), ಚಿಕ್ಕೇಗೌಡರು (ಶ್ಯಾನುಭೋಗನಹಳ್ಳಿ), ಉಪಾಧ್ಯಕ್ಷರಾದ ಆಂಜಿನಪ್ಪ, ನಾಗವೇಣಿ ಅವರನ್ನು ಶಾಸಕ ಎಸ್ ಆರ್ ವಿಶ್ವನಾಥ್ ಅವರು ತಮ್ಮ ಗೃಹಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಬೆಂ. ನಗರ ಜಿಲ್ಲಾ ಬಿಜೆಪಿ ಪ್ರಭಾರಿ ಎಸ್.ಎನ್.ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಹೆಸರಘಟ್ಟ ಹೋಬಳಿ ಬಿಜೆಪಿ ಅಧ್ಯಕ್ಷ ವಸಂತ್ ಅರಕೆರೆ, ಪ್ರಧಾನ ಕಾರ್ಯದರ್ಶಿಗಳಾಧ ಎಸ್.ಜಿ.ಪ್ರಶಾಂತ್ ರೆಡ್ಡಿ, ಕೆಂಪಾಪುರ ಶಿವಮಾದಪ್ಪ, ಸಿಂಗನಾಯಕನಹಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷ ಟಿ.ಮುನಿರೆಡ್ಡಿ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ(ಎಸ್.ಟಿ.ಡಿ.ಮೂರ್ತಿ), ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಕಾರ್ಯದರ್ಶಿಗಳು, ನೂತನ ಅಧ್ಯಕ್ಷ ಚಿಕ್ಕೇಗೌಡರ ಪುತ್ರರಾದ ಶ್ಯಾನುಭೋಗನಹಳ್ಳಿ ನವೀನ್, ಗ್ರಾಮಾಂತರ ಮಂಡಲ ಬಿಜೆಪಿ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಜಗದೀಶ್, ಶ್ಯಾನುಭೋಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಾದ ಆಂಜಿನಪ್ಪ, ನಂಜುಂಡಪ್ಪ, ಮಂಜುನಾಥ್, ವೆಂಕಟೇಶ್, ಸುಮಿತ್ರ, ಕೃಷ್ಣಪ್ಪ, ಗಜೇಂದ್ರ, ಮಾಜಿ ಅಧ್ಯಕ್ಷ ಲಿಂಗರಾಜಪ್ಪ, ಮುಖಂಡರಾದ. ಶಿವಾನಂದ್, ಎಸ್ ಆರ್ ರಾಜಣ್ಣ, ರವಿ, ಸೊಣ್ಣೇನಹಳ್ಳಿ ಕೆಂಪೇಗೌಡ, ಮಧುಸೂದನ್ ಸೇರಿದಂತೆ ಇಟಗಲ್ ಪುರ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರು ಹಾಗೂ ಗ್ರಾಮದ ಮುಖಂಡರಿದ್ದು, ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭ ಹಾರೈಸಿದರು.