ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಶಾಲಾ ಮಕ್ಕಳೊಂದಿಗೆ ಆಯೋಜಿಸಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಾಗೂ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳ ಮುಖಾಂತರ ಸಂಚರಿಸಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಸರ್ಕಾರವು ಏಕ ಬಳಕೆ ಪ್ಲಾಸ್ಟಿಕ್ ನಿಷೇದಿಸಿದೆ ಪ್ಲಾಸ್ಟಿಕ್ ಮುಕ್ತ ಮಾಡುವಲ್ಲಿ ವಿದ್ಯಾರ್ಥಿಗಳ ಮತ್ತು ಪೌರಕಾರ್ಮಿಕ ಪಾತ್ರ ಮುಖ್ಯವಾಗಿದೆ’ ಎಂದರು.
ಪ್ಲಾಸ್ಟಿಕ್ ಚೀಲಗಳು ಪರಿಸರ ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ. ಪ್ಲಾಸ್ಟಿಕ್ ಒಂದು ವಸ್ತುವಾಗಿ ಜೈವಿಕ ವಿಘಟನೀಯವಲ್ಲ ಮತ್ತು ಹೀಗಾಗಿ ಪ್ಲಾಸ್ಟಿಕ್ ಚೀಲಗಳು ನೂರಾರು ವರ್ಷಗಳ ಕಾಲ ಪರಿಸರದಲ್ಲಿ ಉಳಿದು ಅದನ್ನು ಅಪಾರವಾಗಿ ಕಲುಷಿತಗೊಳಿಸುತ್ತವೆ. ಪ್ಲಾಸ್ಟಿಕ್ ಚೀಲಗಳು ನಮ್ಮ ಗ್ರಹವನ್ನು ಸಂಪೂರ್ಣವಾಗಿ ಹಾಳು ಮಾಡುವ ಮೊದಲು ಅವುಗಳನ್ನು ನಿಷೇಧಿಸುವುದು ಬಹಳ ಅವಶ್ಯಕವಾಗಿದೆ.ಪ್ಲಾಸ್ಟಿಕ್ ಚೀಲಗಳು ಜಲಮೂಲಗಳಿಗೆ ಸೇರುವುದು ನೀರಿನ ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ. ಆದ್ದರಿಂದ ಇವುಗಳು ನಮ್ಮ ಪರಿಸರವನ್ನು ಎಲ್ಲ ರೀತಿಯಲ್ಲೂ ಹಾಳುಮಾಡುತ್ತಿವೆ ಎಂದು ಹೇಳಿದರು.
ಪುರಸಭೆಯ ಆರೋಗ್ಯ ಅಧಿಕಾರಿ ಗೋವಿಂದರಾಜು ಮಾತನಾಡಿ, ‘ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ಪಟ್ಟಣವಾಗಿಸಬೇಕು,ಪ್ರಾಣಿಗಳು ಮತ್ತು ಅನೇಕ ಜೀವಿಗಳು ತಮ್ಮ ಆಹಾರದ ಜೊತೆಗೆ ಪ್ಲಾಸ್ಟಿಕ್ ಕಣಗಳನ್ನು ಅರಿವಿಲ್ಲದೆ ಸೇವಿಸುತ್ತವೆ. ಅಕಾಲಿಕ ಪ್ರಾಣಿಗಳ ಸಾವಿಗೆ ತ್ಯಾಜ್ಯ ಪ್ಲಾಸ್ಟಿಕ್ ಚೀಲಗಳು ಪ್ರಮುಖ ಕಾರಣವೆಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಬಂಗಾರಪೇಟೆ :ಪ್ಲಾಸ್ಟಿಕ್ ಮುಕ್ತ ಪಟ್ಟಣವಾಗಿಸಲು ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ’ ಎಂದು ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಶಾಲಾ ಮಕ್ಕಳೊಂದಿಗೆ ಆಯೋಜಿಸಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಾಗೂ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳ ಮುಖಾಂತರ ಸಂಚರಿಸಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಸರ್ಕಾರವು ಏಕ ಬಳಕೆ ಪ್ಲಾಸ್ಟಿಕ್ ನಿಷೇದಿಸಿದೆ ಪ್ಲಾಸ್ಟಿಕ್ ಮುಕ್ತ ಮಾಡುವಲ್ಲಿ ವಿದ್ಯಾರ್ಥಿಗಳ ಮತ್ತು ಪೌರಕಾರ್ಮಿಕ ಪಾತ್ರ ಮುಖ್ಯವಾಗಿದೆ’ ಎಂದರು.
ಪ್ಲಾಸ್ಟಿಕ್ ಚೀಲಗಳು ಪರಿಸರ ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ. ಪ್ಲಾಸ್ಟಿಕ್ ಒಂದು ವಸ್ತುವಾಗಿ ಜೈವಿಕ ವಿಘಟನೀಯವಲ್ಲ ಮತ್ತು ಹೀಗಾಗಿ ಪ್ಲಾಸ್ಟಿಕ್ ಚೀಲಗಳು ನೂರಾರು ವರ್ಷಗಳ ಕಾಲ ಪರಿಸರದಲ್ಲಿ ಉಳಿದು ಅದನ್ನು ಅಪಾರವಾಗಿ ಕಲುಷಿತಗೊಳಿಸುತ್ತವೆ. ಪ್ಲಾಸ್ಟಿಕ್ ಚೀಲಗಳು ನಮ್ಮ ಗ್ರಹವನ್ನು ಸಂಪೂರ್ಣವಾಗಿ ಹಾಳು ಮಾಡುವ ಮೊದಲು ಅವುಗಳನ್ನು ನಿಷೇಧಿಸುವುದು ಬಹಳ ಅವಶ್ಯಕವಾಗಿದೆ.ಪ್ಲಾಸ್ಟಿಕ್ ಚೀಲಗಳು ಜಲಮೂಲಗಳಿಗೆ ಸೇರುವುದು ನೀರಿನ ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ. ಆದ್ದರಿಂದ ಇವುಗಳು ನಮ್ಮ ಪರಿಸರವನ್ನು ಎಲ್ಲ ರೀತಿಯಲ್ಲೂ ಹಾಳುಮಾಡುತ್ತಿವೆ ಎಂದು ಹೇಳಿದರು.
ಪುರಸಭೆಯ ಆರೋಗ್ಯ ಅಧಿಕಾರಿ ಗೋವಿಂದರಾಜು ಮಾತನಾಡಿ, ‘ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ಪಟ್ಟಣವಾಗಿಸಬೇಕು,ಪ್ರಾಣಿಗಳು ಮತ್ತು ಅನೇಕ ಜೀವಿಗಳು ತಮ್ಮ ಆಹಾರದ ಜೊತೆಗೆ ಪ್ಲಾಸ್ಟಿಕ್ ಕಣಗಳನ್ನು ಅರಿವಿಲ್ಲದೆ ಸೇವಿಸುತ್ತವೆ. ಅಕಾಲಿಕ ಪ್ರಾಣಿಗಳ ಸಾವಿಗೆ ತ್ಯಾಜ್ಯ ಪ್ಲಾಸ್ಟಿಕ್ ಚೀಲಗಳು ಪ್ರಮುಖ ಕಾರಣವೆಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.