ದೇವನಹಳ್ಳಿ: ತಾಲೂಕು ತಹಶೀಲ್ದಾರ್ ಆಗಿ ಎಚ್ ಬಾಲಕೃಷ್ಣ ಅವರು ದೇವನಹಳ್ಳಿ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ದೇವನಹಳ್ಳಿ ತಹಶೀಲ್ದಾರ್ ಆಗಿ ಕಳೆದ ಎರಡು ವರ್ಷಗಳಿಂದ ಕರ್ತವ್ಯದಲ್ಲಿದ್ದ ಶಿವರಾಜ್ ಅವರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಛೇರಿಯಲ್ಲಿ ತಹಶಿಲ್ದಾರ್ ಆಗಿದ್ದ ಎಚ್ ಬಾಲಕೃಷ್ಣ ಅವರು ದೇವನಹಳ್ಳಿ ತಹಶಿಲ್ದಾರ್ ಆಗಿ ವರ್ಗವಣೆಯಾಗಿದ್ದಾರೆ.
ದೇವನಹಳ್ಳಿ ಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದ ಮೇಲೆ ಇಲ್ಲಿನ ಸರ್ಕಾರಿ ಜಮೀನು ಅಕ್ರಮವಾಗಿ ಭೂಗಳ್ಳರ ಪಾಲಾಗಿರುವ ಬಗ್ಗೆ ಹಲವು ಆರೋಪಗಳಿಗೆ ಈ ಹಿನ್ನೆಲೆಯಲ್ಲಿ ಸರ್ಕಾರದ ಜಮೀನುಗಳು ಕಬಳಿಕೆಯಾಗಿದ್ದರೆ ಅದರ ರಕ್ಷಣೆ ಮಾಡಲು ಕ್ರಮ ವಹಿಸುತ್ತೇನೆ. ಕಾನೂನು ನಿಯಮಗಳನ್ನು ಪಾಲಿಸುವ ಮೂಲಕ ಬಡವರ ಜಮೀನುಗಳನ್ನು ರಕ್ಷಣೆ ಮಾಡುವ ಮೂಲಕ ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ಹಿತ ಕಾಯುವ ಕೆಲಸ ಮಾಡುತ್ತೇನೆ, ನಿಯಮಗಳ ಪ್ರಕಾರ ಬಡವರಿಗೆ ಸಲ್ಲಬೇಕಾದ ಸವಲತ್ತುಗಳನ್ನು ಪಡೆಯಲು ಸಹಕರಿಸುತ್ತೇನೆ ಎಂದು ತಹಶಿಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ತಾಲೂಕು ಆಡಳಿತ ಸೌಧದ ತಮ್ಮ ಕಛೇರಿಯಲ್ಲಿ ಮಾಧ್ಯಮಗಳಿಗೆ ಎಚ್ ಬಾಲಕೃಷ್ಣ ಅವರು ಹೇಳಿಕೆ ನೀಡಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳಾದ ಗಂಗಾದರ್, ಭರತ್, ಉಷಾ, ಪಿವಿಸಿ (ಎಸ್) ತಾಲೂಕು ಅಧ್ಯಕ್ಷ ಸೋಲೂರು ನಾಗರಾಜ್, ರೈತ ಮುಖಂಡರು, ಸಾರ್ವಜನಿಕರು ತಾಲೂಕು ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.
ದೇವನಹಳ್ಳಿ ತಹಶಿಲ್ದಾರ್ ಆಗಿ ಎಚ್ ಬಾಲಕೃಷ್ಣ ಅಧಿಕಾರ ಸ್ವೀಕಾರ.
ದೇವನಹಳ್ಳಿ: ತಾಲೂಕು ತಹಶೀಲ್ದಾರ್ ಆಗಿ ಎಚ್ ಬಾಲಕೃಷ್ಣ ಅವರು ದೇವನಹಳ್ಳಿ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ದೇವನಹಳ್ಳಿ ತಹಶೀಲ್ದಾರ್ ಆಗಿ ಕಳೆದ ಎರಡು ವರ್ಷಗಳಿಂದ ಕರ್ತವ್ಯದಲ್ಲಿದ್ದ ಶಿವರಾಜ್ ಅವರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಛೇರಿಯಲ್ಲಿ ತಹಶಿಲ್ದಾರ್ ಆಗಿದ್ದ ಎಚ್ ಬಾಲಕೃಷ್ಣ ಅವರು ದೇವನಹಳ್ಳಿ ತಹಶಿಲ್ದಾರ್ ಆಗಿ ವರ್ಗವಣೆಯಾಗಿದ್ದಾರೆ.
ದೇವನಹಳ್ಳಿ ಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದ ಮೇಲೆ ಇಲ್ಲಿನ ಸರ್ಕಾರಿ ಜಮೀನು ಅಕ್ರಮವಾಗಿ ಭೂಗಳ್ಳರ ಪಾಲಾಗಿರುವ ಬಗ್ಗೆ ಹಲವು ಆರೋಪಗಳಿಗೆ ಈ ಹಿನ್ನೆಲೆಯಲ್ಲಿ ಸರ್ಕಾರದ ಜಮೀನುಗಳು ಕಬಳಿಕೆಯಾಗಿದ್ದರೆ ಅದರ ರಕ್ಷಣೆ ಮಾಡಲು ಕ್ರಮ ವಹಿಸುತ್ತೇನೆ. ಕಾನೂನು ನಿಯಮಗಳನ್ನು ಪಾಲಿಸುವ ಮೂಲಕ ಬಡವರ ಜಮೀನುಗಳನ್ನು ರಕ್ಷಣೆ ಮಾಡುವ ಮೂಲಕ ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ಹಿತ ಕಾಯುವ ಕೆಲಸ ಮಾಡುತ್ತೇನೆ, ನಿಯಮಗಳ ಪ್ರಕಾರ ಬಡವರಿಗೆ ಸಲ್ಲಬೇಕಾದ ಸವಲತ್ತುಗಳನ್ನು ಪಡೆಯಲು ಸಹಕರಿಸುತ್ತೇನೆ ಎಂದು ತಹಶಿಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ತಾಲೂಕು ಆಡಳಿತ ಸೌಧದ ತಮ್ಮ ಕಛೇರಿಯಲ್ಲಿ ಮಾಧ್ಯಮಗಳಿಗೆ ಎಚ್ ಬಾಲಕೃಷ್ಣ ಅವರು ಹೇಳಿಕೆ ನೀಡಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳಾದ ಗಂಗಾದರ್, ಭರತ್, ಉಷಾ, ಪಿವಿಸಿ (ಎಸ್) ತಾಲೂಕು ಅಧ್ಯಕ್ಷ ಸೋಲೂರು ನಾಗರಾಜ್, ರೈತ ಮುಖಂಡರು, ಸಾರ್ವಜನಿಕರು ತಾಲೂಕು ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.