ಅಧಿವೇಶನದಲ್ಲಿ ಗಮನ ಸೆಳೆದಿದ್ದ ಸ್ಪೀಕರ್:-
ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನಡೆಸುತ್ತಿರುವ ಉಚಿತ ವೈದ್ಯಕೀಯ ಕಾಲೇಜಿನ ಸೀಟು ಹಂಚಿಕೆ ಸಂಬಂದ ರಾಜ್ಯ ಸರ್ಕಾರ ಇನ್ನೂ ಅನುಮತಿ ನೀಡದ ಬಗ್ಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಪ್ರಸ್ತಾಪಿಸಿ ಅಧಿವೇಶನದಲ್ಲಿ ಗಮನ ಸೆಳೆದಿದ್ದರು.ನಂತರ ಮಾತನಾಡಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಉಚಿತ ವೈದ್ಯಕೀಯ ಕಾಲೇಜು ತೆರೆದು ಉತ್ತಮವಾಗಿ ಕೆಲಸ ಮಾಡುತ್ತಿದೆ. ಕೂಡಲೇ ಈ ಸಂಬಂದ ಕ್ರಮ ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವರಿಗೆ ಸೂಚಿಸಿಲಾಗುಹುದು ಎಂದರು. ಮತ್ತು ಸಂಸ್ಥೆಯ ಕಾರ್ಯಗಳನ್ನು ಯು.ಟಿ.ಖಾದರ್ ಶ್ಲಾಘಿಸಿದರು.
ಚಿಕ್ಕಬಳ್ಳಾಪುರ:ರಾಜ್ಯ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿ ಸದ್ಗುರು ಮಧುಸೂಧನ್ ಸಾಯಿ ಅವರ ಅರ್ಶೀವಾದ ಪಡೆದರು.
ಸತ್ಯಸಾಯಿ ಗ್ರಾಮಕ್ಕೆ ಆಗಮಿಸಿದ ಖಾದರ್,ಸದ್ಗುರು ಮಧುಸೂಧನ್ ಸಾಯಿ ರವರ ಅರ್ಶೀವಾದ ಪಡೆದು ಬಳಿಕ ಸತ್ಯಸಾಯಿ ಗ್ರಾಮದಲ್ಲಿರುವ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನಡೆಸುತ್ತಿರುವ ಉಚಿತ ವೈದ್ಯಕೀಯ ಆಸ್ಪತ್ರೆ, ಗೋಶಾಲೆ, ಸಮಾಗಮ ಕ್ರೀಡಾಂಗಣವನ್ನು ವೀಕ್ಷಿಸಿದರು.
ಈ ವೇಳೆ ಯು.ಟಿ.ಖಾದರ್
ಮಾತನಾಡಿ ಪ್ರೀತಿ, ಸೇವೆಯ ಮೂಲಕ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಅನೇಕ ಕಾರ್ಯಕ್ರಮಗಳ ಮೂಲಕ ಮಾನವೀಯ ಕೆಲಸವನ್ನು ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಮಾಡುತ್ತಿದೆಯೆಂದು ಶ್ಲಾಸಿದರು. ಮಕ್ಕಳಿಗೆ ವಿತರಿಸುತ್ತಿರುವ ಪೌಷ್ಠಿಕ ಪೌಡರ್ ಸಾಯಿಶ್ಯೂರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ನ ಪ್ರಧಾನ ಸಾರ್ವಜನಿಕ ಸಂಪರ್ಕ ಅಧಿಕಾರಿ ಗೋವಿಂದರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.
ಅಧಿವೇಶನದಲ್ಲಿ ಗಮನ ಸೆಳೆದಿದ್ದ ಸ್ಪೀಕರ್:-
ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನಡೆಸುತ್ತಿರುವ ಉಚಿತ ವೈದ್ಯಕೀಯ ಕಾಲೇಜಿನ ಸೀಟು ಹಂಚಿಕೆ ಸಂಬಂದ ರಾಜ್ಯ ಸರ್ಕಾರ ಇನ್ನೂ ಅನುಮತಿ ನೀಡದ ಬಗ್ಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಪ್ರಸ್ತಾಪಿಸಿ ಅಧಿವೇಶನದಲ್ಲಿ ಗಮನ ಸೆಳೆದಿದ್ದರು.ನಂತರ ಮಾತನಾಡಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಉಚಿತ ವೈದ್ಯಕೀಯ ಕಾಲೇಜು ತೆರೆದು ಉತ್ತಮವಾಗಿ ಕೆಲಸ ಮಾಡುತ್ತಿದೆ. ಕೂಡಲೇ ಈ ಸಂಬಂದ ಕ್ರಮ ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವರಿಗೆ ಸೂಚಿಸಿಲಾಗುಹುದು ಎಂದರು. ಮತ್ತು ಸಂಸ್ಥೆಯ ಕಾರ್ಯಗಳನ್ನು ಯು.ಟಿ.ಖಾದರ್ ಶ್ಲಾಘಿಸಿದರು.