ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ.ಶಿವಕುಮಾರ್ ಅವಿರೋಧ ಆಯ್ಕೆ :

ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಿ.ಶಿವಕುಮಾರ್, ಉಪಾಧ್ಯಕ್ಷರಾಗಿ, ಮುನಿರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರತಿಸ್ಪರ್ಧಿಯಾಗಿ ಯಾರೂ ಸ್ಪರ್ಧಿಸದ ಕಾರಣದಿಂದಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಗೆಲುವು ಸಾಧಿಸಿದ್ದ ಜಿ.ಶಿವಕುಮಾರ್ ಅಧ್ಯಕ್ಷರಾಗಿ ಮತ್ತು ಮುನಿರತ್ನಮ್ಮ ಉಪಾಧ್ಯಕ್ಷರಾಗಿ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗಾಗಿ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎಲ್ಲಾ 12 ಜನರ ತಂಡ ಭರ್ಜರಿ ಗೆಲುವು ದಾಖಲಿಸುವ ಮೂಲಕ ಹೊಸದೊಂದು ಮೈಲಿಗಲ್ಲು ಸಾಧಿಸಿತ್ತು ಎಂಬುದು ಗಮನಾರ್ಹ ಸಂಗತಿ.

ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ಹಲವು ಕಾಂಗ್ರೆಸ್ ಮುಖಂಡರು ಮತ್ತು ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಜಿ.ಪಂ‌.ಮಾಜಿ ಅಧ್ಯಕ್ಷ ಕೆ.ಅಶೋಕನ್, ಜಿ.ಪಂ.ಮಾಜಿ ಸದಸ್ಯ ದಾನೇಗೌಡ, ತಾ.ಪಂ.ಮಾಜಿ ಸದಸ್ಯ ಎಸ್.ಉದಯಶಂಕರ್, ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ಕೆ.ಮಹೇಶ್ ಕುಮಾರ್, ಉಪಾಧ್ಯಕ್ಷ ಜೈಕುಮಾರ್, ದೊಡ್ಡಜಾಲ ಗ್ರಾ.ಪಂ.ಅಧ್ಯಕ್ಷ ಆರ್.ಬೈರೇಗೌಡ, ಮೀನುಕುಂಟೆ ಗ್ರಾ.ಪಂ.ಅಧ್ಯಕ್ಷ ವಸಂತ್, ಕಾಂಗ್ರೆಸ್ ಮುಖಂಡರಾದ ಮೈಲನಹಳ್ಳಿ ರಾಜಕುಮಾರ್, ಅಪ್ಪಾಜಿ, ಟಿ.ಪಿ.ಸತೀಶ್, ಶೆಟ್ಟಿಗೆರೆ ಚೇತನ್ ಕುಮಾರ್, ಚನ್ನಹಳ್ಳಿ ಚಂದ್ರಣ್ಣ, ಸಿ.ಎ.ಶಿವರಾಜ್, ಹರೀಶ್, ಸಹಕಾರ ಸಂಘದ ನಿರ್ದೇಶಕರಾದ ಎಂ.ಎನ್.ಜಯಕುಮಾರ್, ಎ.ಸಿ.ಗೋವಿಂದರಾಜು, ಎಂ.ರಾಮಯ್ಯ, ಎಂ.ಆಂಜಿನಪ್ಪ, ಎನ್.ವಿಜಯಕುಮಾರ್, ಸಿ.ಎಂ.ರವಿಕುಮಾರ್, ಸಿ.ಎನ್.ತಮ್ಮೇಗೌಡ,ಡಿ.ನಾರಾಯಣಸ್ವಾಮಿ,ಬಿ.ಎಲ್.ಮಂಜುನಾಥ್, ಉಷಾ ಎ., ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರಿದ್ದರು.

Leave a Reply

Your email address will not be published. Required fields are marked *