






1.5 ಕೋಟಿ ರು.ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಗೆ ಎಸ್ ಆರ್ ವಿಶ್ವನಾಥ್ ಚಾಲನೆ :
ಯಲಹಂಕ : 1.5 ಕೋಟಿ ರು. ಅಂದಾಜು ವೆಚ್ಚದಲ್ಲಿ ಯಲಹಂಕ ನಗರ ವ್ಯಾಪ್ತಿಯ ಅಟ್ಟೂರು ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ‘ಸುಮಾರು 1.5 ಕೋಟಿ ರು.ವೆಚ್ಚದಲ್ಲಿ ಅಟ್ಟೂರು ಕೆರೆ ಅಭಿವೃದ್ಧಿಗೆ ಇಂದು ಚಾಲನೆ ನೀಡಲಾಗಿದೆ. ಯಲಹಂಕ ಕೆರೆ ಅಭಿವೃದ್ಧಿಗೂ 3 ಕೋಟಿ ರು.ಗಳ ಅನುದಾನ ದೊರೆತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಕೆರೆಗಳು ನಮ್ಮ ಜೀವನಾಡಿ ಗಳಿದ್ದಂತೆ ಅವುಗಳ ಸಕಾಲಿಕ ಅಭಿವೃದ್ಧಿ, ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು. ಯಲಹಂಕ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಹಲವು ವರ್ಷಗಳಿಂದಲೂ ಕೆರೆಗಳ ಅಭಿವೃದ್ಧಿ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಅಟ್ಟೂರು ವಾರ್ಡ್ ಬಿಜೆಪಿ ಅಧ್ಯಕ್ಷ ನಾರಾಯಣಸ್ವಾಮಿ, ಬಿಜೆಪಿ ಮುಖಂಡರಾದ ಎ.ಸಿ. ಮುನಿಕೃಷ್ಣಪ್ಪ, ಚೊಕ್ಕನಹಳ್ಳಿ ವೆಂಕಟೇಶ್, ಯಲಹಂಕ ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಪವನ್ ಕುಮಾರ್, ಅಟ್ಟೂರು ವಾರ್ಡ್ ಬಿಜೆಪಿ ಮಾಜಿ ಅಧ್ಯಕ್ಷರಾದ ನಟರಾಜ್, ರಂಗಸ್ವಾಮಿ, ನಗರ ಮಂಡಲ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಟ್ಟೂರು ವಿಶ್ವ, ಅಟ್ಟೂರು ವಾರ್ಡ್ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸುನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜಗದೀಶ್, ನಗರ ಮಂಡಲ ಎಸ್ಸಿ ಮೋರ್ಚಾ ಕಾರ್ಯದರ್ಶಿ ಗುರುಮೂರ್ತಿ, ಬಿಜೆಪಿ ಮುಖಂಡರಾದ ಪಿ.ನಾಗಪ್ಪ, ರಂಗಸ್ವಾಮಿ(ಪೇಪರ್), ರಾಮಚಂದ್ರ ಸೇರಿದಂತೆ ಹಲವು ಮುಖಂಡರಿದ್ದರು.