ಮಹಾ ಶಿವರಾತ್ರಿ ಪ್ರಯುಕ್ತ ಆವಲಹಳ್ಳಿಯ ಶ್ರೀ ವಿಶ್ವನಾಥೇಶ್ವರ ಸ್ವಾಮಿ ದೇಗುಲದಲ್ಲಿ ಲಕ್ಷ ದೀಪೋತ್ಸವ :

ಯಲಹಂಕ : ಮಹಾ ಶಿವರಾತ್ರಿ ಪ್ರಯುಕ್ತ ಯಲಹಂಕ ಕ್ಷೇತ್ರದ ಆವಲಹಳ್ಳಿಯ ಶ್ರೀ ವಿಶ್ವನಾಥೇಶ್ವರ ಸ್ವಾಮಿ ದೇಗುಲದಲ್ಲಿ ಗ್ರಾಮಸ್ಥರ ವತಿಯಿಂದ ವಿಜೃಂಭಣೆಯ ಲಕ್ಷ ದೀಪೋತ್ಸವ ನೆರವೇರಿಸಲಾಯಿತು.

ಮಹಾ ಶಿವರಾತ್ರಿ ಪ್ರಯುಕ್ತ ಬುಧವಾರ ಬೆಳಿಗ್ಗೆ 8 ಗಂಟೆಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ವಿಶೇಷ ಪೂಜೆ, ಬೆ.10.30ಕ್ಕೆ ಮಹಾ ಮಂಗಳಾರತಿ ಮುಂತಾದ ದೈವ ಸೇವಾ ಕಾರ್ಯಗಳು ನೆರವೇರಿದವು.

ಸಂಜೆ 7 ಗಂಟೆ ಶ್ರೀ ವಿಶ್ವನಾಥೇಶ್ವರ ಸ್ವಾಮಿಗೆ ವೈಭವದ ಲಕ್ಷ ದೀಪೋತ್ಸವ ನೆರವೇರಿಸಲಾಯಿತು. ಲಕ್ಷ ದೀಪೋತ್ಸವದ ಈ ವಿಶೇಷ ಕಾರ್ಯಕ್ರಮದಲ್ಲಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷೆ ಡಾ.ವಾಣಿಶ್ರೀ ವಿಶ್ವನಾಥ್ ದಂಪತಿಗಳು ಪಾಲ್ಗೊಂಡು ಭಕ್ತಿಯಿಂದ ನಮಿಸಿ, ಸ್ವಾಮಿಯ ಕೃಪೆಗೆ ಪಾತ್ರರಾದರು. ಲಕ್ಷ ದೀಪೋತ್ಸವದ ಅಂಗವಾಗಿ ತೀರ್ಥ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಈ ದೈವ ಕಾರ್ಯದಲ್ಲಿ ಆವಲಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಹಸ್ರಾರು ಮಂದಿ ಭಕ್ರರು ಪಾಲ್ಗೊಂಡು, ಶ್ರೀ ವಿಶ್ವನಾಥೇಶ್ವರ ಸ್ವಾಮಿಯ ದರ್ಶನ ಪಡೆದರು.

ಮಹಾ ಶಿವರಾತ್ರಿ ಪ್ರಯುಕ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೂರಾರು ಸ್ವಯಂ ಸೇವಕರು ಗ್ರಾಮದಲ್ಲಿ ಪಥ ಸಂಚಲನ ನಡೆಸಿದರು.

ವಿವಿಧ ಜಾನಪದ ಕಲಾ ತಂಡಗಳ ಕಲಾ ಪ್ರದರ್ಶನದ ನಡುವೆ ಮಹಾ ಶಿವರಾತ್ರಿ ಅತ್ಯಂತ ವಿಜೃಂಭಣೆಗೆ ಸಾಕ್ಷಿಯಾಯಿತು.

ಇದೇ ಸಂದರ್ಭದಲ್ಲಿ ದೀಪೋತ್ಸವ ಸಮಿತಿಯ ಮುಖ್ಯ ಸಂಚಾಲಕ ಕಿರಣ್ ಕುಮಾರ್, ಹಿರಿಯ ಬಿಜೆಪಿ ಮುಖಂಡರಾದ ಆವಲಹಳ್ಳಿ ಕೇಶವಮೂರ್ತಿ, ಮಧುಸೂದನ್, ಗ್ರಾ.ಪಂ. ಸದಸ್ಯರಾದ ಜಿ.ಸಿ‌.ಮಂಜುನಾಥ್, ನಂಜೇಗೌಡ, ಗಿರೀಶ್, ಆರ್ ಎಸ್ ಎಸ್ ಎನ್ ಬ್ಯಾಂಕ್ ನಿರ್ದೇಶಕ ತಿಮ್ಮರಾಯಿಗೌಡ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡು, ಸ್ವಾಮಿಯ ಕೃಪೆಗೆ ಪಾತ್ರರಾದರು.

Leave a Reply

Your email address will not be published. Required fields are marked *