ಸಮಾಜ ಅಭಿವೃದ್ಧಿ ಕಾರ್ಯಗಳ ಭಾಗವಾಗಿ ಮೈಸೂರಿನಲ್ಲಿ ನೀರಿನ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್

ಮೈಸೂರು, ಫೆಬ್ರವರಿ 28, 2025 – ಸಮಾಜಕ್ಕೆ ಒಳಿತು ಮಾಡಬೇಕು ಎಂಬ ಉದ್ದೇಶದಿಂದ ಹಲವಾರು ಸಮಾಜಾಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಮೈಸೂರು ಜಿಲ್ಲೆಯಲ್ಲಿ ನೀರಿನ ಶುದ್ಧೀಕರಣ ಘಟಕಗಳನ್ನು ಉದ್ಘಾಟಿಸಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಟಿಕೆಎಂನ ಮುಖ್ಯ ಸಂವಹನ ಅಧಿಕಾರಿ, ಹಿರಿಯ ಉಪಾಧ್ಯಕ್ಷ ಮತ್ತು ರಾಜ್ಯ ವ್ಯವಹಾರಗಳ ಮುಖ್ಯಸ್ಥರಾದ ಶ್ರೀ ಸುದೀಪ್ ದಳವಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸುರಕ್ಷಿತ ಮತ್ತು ಶುದ್ಧ ಕುಡಿಯುವ ನೀರನ್ನು ಒದಗಿಸುವ ಮೂಲಕ ಸಾರ್ವಜನಿಕರು ಉತ್ತಮ ಆರೋಗ್ಯ ಹೊಂದುವಂತೆ ಮಾಡುವ ಮತ್ತು ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟುವ ಉದ್ದೇಶ ಹೊಂದಿರುವ ಟಿಕೆಎಂ 2024-25ನೇ ಆರ್ಥಿಕ ವರ್ಷದಲ್ಲಿ ಮೈಸೂರು ಜಿಲ್ಲೆಯಲ್ಲಿ ಅತ್ಯಾಧುನಿಕ ನೀರಿನ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದೆ. ಈ ಘಟಕಗಳಿಂದ 3,98,870ಕ್ಕೂ ಹೆಚ್ಚು ಜನರು ಪ್ರಯೋಜನ ಪಡೆಯುತ್ತಿದ್ದಾರೆ.

ಪ್ರತೀ ಘಟಕವು ಆರು ಹಂತಗಳ ಅತ್ಯಾಧುನಿಕ ಶುದ್ಧೀಕರಣ ಪ್ರಕ್ರಿಯೆಯನ್ನು ಹೊಂದಿದ್ದು, ಟೋಟಲ್ ಡಿಸ್ಸಾಲ್ವ್ ಡ್ ಸಾಲಿಡ್ಸ್ (ಟಿಡಿಎಸ್) ಗಳಂತಹ ಪ್ಯಾರಾಮೀಟರ್ ಗಳನ್ನು ಗಮನಿಸುವ ರಿಯಲ್ ಟೈಮ್ ವಾಟರ್ ಮಾನಿಟರಿಂಗ್ ಸಿಸ್ಟಮ್ ಅನ್ನು ಹೊಂದಿದೆ. ಈ ಘಟಕಗಳು ಹೆಚ್ಚು ಟಿಡಿಎಸ್ ಹೊಂದಿದ್ದು ಕಲುಷಿತಗೊಂಡಿರುವ ನೀರಿನ ಸಮಸ್ಯೆ ಎದುರಿಸುತ್ತಿರುವ ಜನರಿಗೆ ಶುದ್ಧ ನೀರನ್ನು ಒದಗಿಸುತ್ತದೆ. ಇದರ ಜೊತೆಗೆ ಈ ಘಟಕಗಳು ನಿರರ್ಗಳವಾಗಿ ನೀರಿನ ಸರಬರಾಜು ಸಾಧ್ಯವಾಗುವಂತೆ ಮಾಡಲು ಸೌರ ಶಕ್ತಿ, ವಿದ್ಯುತ್ ಬ್ಯಾಕಪ್ ಹೊಂದಿದೆ ಮತ್ತು ಅತ್ಯುತ್ತಮ ತ್ಯಾಜ್ಯ ನೀರಿನ ನಿರ್ವಹಣಾ ವ್ಯವಸ್ಥೆಯನ್ನು ಕೂಡ ಹೊಂದಿದೆ. ಈ ಘಟಕಗಳು ಕಡಿಮೆ ವಿದ್ಯುತ್ ಬಳಕೆ ಮಾಡುತ್ತಲೇ ಸಮರ್ಪಕವಾಗಿ ಶುದ್ಧ ನೀರನ್ನು ಒದಗಿಸುತ್ತವೆ. ಈ ಯೋಜನೆಯ ಮೂಲಕ ಪ್ರತೀ ಗಂಟೆಗೆ ಒಟ್ಟು 7500 ಲೀಟರ್ ನೀರನ್ನು ಶುದ್ಧೀಕರಣಗೊಳಿಸುವ ಸಾಮರ್ಥ್ಯವನ್ನು ಹೊಂದಿದ್ದು, ಜನರ ಅಗತ್ಯಗಳನ್ನು ಪೂರೈಸಲು ಈ ಘಟಕಗಳನ್ನು ಸ್ಥಾಪಿಸಲಾಗಿದೆ.

ಸ್ಥಳೀಯ ಗ್ರಾಮ ಪಂಚಾಯತ್‌ ಗಳು ಮತ್ತು ಜನ ಸಮುದಾಯದೊಂದಿಗೆ ಸಹಕಾರ ತತ್ವದಲ್ಲಿ ಟಿಕೆಎಂ ಈ ಯೋಜನೆಯನ್ನು ಕಾರ್ಯಗತಗೊಳಿಸಿದ್ದು, ಸ್ಥಳೀಯರಲ್ಲಿ ಮಾಲೀಕತ್ವ ಮತ್ತು ಜವಾಬ್ದಾರಿ ಪ್ರಜ್ಞೆಯನ್ನು ಬಿತ್ತುವಲ್ಲಿ ಯಶಸ್ವಿಯಾಗಿದೆ. ಇದು ಈ ಯೋಜನೆಯ ಪರಿಣಾಮವನ್ನು ತೀವ್ರಗೊಳಿಸಲಿದೆ ಮತ್ತು ಸುಸ್ಥಿರತೆ, ಉತ್ತಮ ಸ್ವಚ್ಛತಾ ಅಭ್ಯಾಸ ರೂಢಿಸಿಕೊಳ್ಳಲು ಪ್ರೇರೇಪಿಸಲಿದೆ. ಈ ಮೂಲಕ ಜನ ಸಮುದಾಯ ಆರೋಗ್ಯವಾಗಿರುವಂತೆ ನೋಡಿಕೊಳ್ಳಲಾಗುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ನ ಮುಖ್ಯ ಸಂವಹನ ಅಧಿಕಾರಿ, ಹಿರಿಯ ಉಪಾಧ್ಯಕ್ಷ ಮತ್ತು ರಾಜ್ಯ ವ್ಯವಹಾರಗಳ ಮುಖ್ಯಸ್ಥರಾದ ಶ್ರೀ ಸುದೀಪ್ ದಳವಿ ಅವರು, “ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಸಂಸ್ಥೆಯು ಸಮಾಜ ಅಭಿವೃದ್ಧಿ ಕಾರ್ಯಗಳನ್ನು ನಡೆಸುವುದನ್ನು ಎಂದಿಗೂ ತಪ್ಪುವುದಿಲ್ಲ. ಈ ನೀರಿನ ಶುದ್ಧೀಕರಣ ಘಟಕಗಳ ಸ್ಥಾಪನೆಯು ನಾವು ಕಾರ್ಯ ನಿರ್ವಹಿಸುವ ಪ್ರದೇಶದ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವ ನಮ್ಮ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ಈ ಯೋಜನೆಯು ಸುಸ್ಥಿರತೆ, ಸಾರ್ವಜನಿಕ ಆರೋಗ್ಯ ಮತ್ತು ಜನರ ಒಟ್ಟು ಯೋಗಕ್ಷೇಮ ಹೆಚ್ಚಿಸುವ ನಮ್ಮ ಬದ್ಧತೆಯನ್ನು ಸಾರುತ್ತದೆ. ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ಗಳ ಸಹಭಾಗಿತ್ವದಲ್ಲಿ ಶುದ್ಧ ನೀರು ಒದಗಿಸುವ ಈ ಯೋಜನೆ ಕಾರ್ಯಗತಗೊಳಿಸಿರುವುದ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ ಆರೋಗ್ಯಕರ ಮತ್ತು ಸುಸ್ಥಿರ ಭವಿಷ್ಯವನ್ನು ನಿರ್ಮಿಸುವ ಉದ್ದೇಶದಿಂದ ನಮ್ಮ ಸಮಾಜಾಭಿವೃದ್ಧಿ ಯೋಜನೆಗಳನ್ನು ಮುಂದುವರಿಸುತ್ತೇವೆ” ಎಂದರು.

ಸುಸ್ಥಿರತೆ ಮತ್ತು ದೀರ್ಘಾವಧಿಯ ಪರಿಣಾಮ ಉಂಟು ಮಾಡುವ ನಮ್ಮ ಅಚಲ ಬದ್ಧತೆಗೆ ಪೂರಕವಾಗಿರುವ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಕಾರ್ಯಕ್ರಮಗಳು ಟಿಕೆಎಂನ ಫಿಲಾಸಫಿಯಲ್ಲಿ ಗಟ್ಟಿಯಾಗಿ ಬೇರೂರಿದೆ. ನಮ್ಮ ಉದ್ಯೋಗಿಗಳು ಶಿಕ್ಷಣ, ಪರಿಸರ, ಆರೋಗ್ಯ ಮತ್ತು ಸ್ವಚ್ಛತೆ, ರಸ್ತೆ ಸುರಕ್ಷತೆ ಮತ್ತು ಕೌಶಲ್ಯ ಅಭಿವೃದ್ಧಿ ಎಂಬ ಐದು ಪ್ರಮುಖ ವಿಭಾಗಳಲ್ಲಿ ಸಕ್ರಿಯವಾಗಿ ಯೋಜನೆಗಳನ್ನು ನಡೆಸುತ್ತಾರೆ. ಸಮುದಾಯದ ಅಗತ್ಯಗಳು ಮತ್ತು ರಾಷ್ಟ್ರೀಯ ಆದ್ಯತೆಗಳೊಂದಿಗೆ ನಮ್ಮ ಸಿಎಸ್ಆರ್ ಯೋಜನೆಗಳನ್ನು ಸಂಯೋಜಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುವ ಅರ್ಥಪೂರ್ಣ ಕೆಲಸ ಮಾಡಲು ನಾವು ಶ್ರಮಿಸುತ್ತೇವೆ.

Leave a Reply

Your email address will not be published. Required fields are marked *