





ರಾಜಾನುಕುಂಟೆ ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಭವಾನಿ ಶ್ರೀನಿವಾಸ್ ಅವಿರೋಧ ಆಯ್ಕೆ :
ಯಲಹಂಕ : ಕ್ಷೇತ್ರದ ರಾಜಾನುಕುಂಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಅದೇ ಗ್ರಾಮದ ಭವಾನಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷರಾಗಿದ್ದ ಚನ್ನಮ್ಮ ಅವರ ರಾಜೀನಾಮೆ ಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಭವಾನಿ ಶ್ರೀನಿವಾಸ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ನಂತರ ಮಾತನಾಡಿದ ಅವರು ‘ಅಧ್ಯಕ್ಷರ ಆಯ್ಕೆಗಾಗಿ ನನಗೆ ಸಂಪೂರ್ಣ ಬೆಂಬಲ ನೀಡಿ ಸಹಕರಿಸಿರುವ ಯಲಹಂಕ ಶಾಸಕರಾದ ಎಸ್ ಆರ್ ವಿಶ್ವನಾಥ್ ಅವರಿಗೂ, ಎಲ್ಲಾ ಸದಸ್ಯರು ಹಾಗೂ ಬಿಜೆಪಿ ಮುಖಂಡರಿಗೂ ಧನ್ಯವಾದಗಳು. ಶಾಸಕರ ಸಲಹೆ, ಮಾರ್ಗದರ್ಶನದಲ್ಲಿ ಎಲ್ಲಾ ಸದಸ್ಯರ ವಿಶ್ವಾಸದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ. ಎಸ್ ಎನ್ ರಾಜಣ್ಣ, ದಿಬ್ಬೂರು ಜಯಣ್ಣ, ಡಿ.ಜಿ.ಅಪ್ಪಯ್ಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ನರೇಂದ್ರ, ಯಲಹಂಕ ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಹೆಸರಘಟ್ಟ ಹೋಬಳಿ ಬಿಜೆಪಿ ಅಧ್ಯಕ್ಷ ವಸಂತ್ ಅರಕೆರೆ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಎಸ್.ಜಿ.ನರಸಿಂಹ ಮೂರ್ತಿ(ಎಸ್.ಟಿ.ಡಿ.ಮೂರ್ತಿ), ಚನ್ನಮ್ಮ, ಅಂಬಿಕಾ ರಾಜೇಂದ್ರ ಕುಮಾರ್, ವೀರಣ್ಣ, ಉಪಾಧ್ಯಕ್ಷ ಶಿವಕುಮಾರ್ ವಿ.,ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾ.ಪಂ.ಸದಸ್ಯರಾದ ಆರ್.ಡಿ.ರಾಜಣ್ಣ, ಆರ್.ಎಚ್.ಹನುಮೇಗೌಡ, ನಾಗೇಶ್, ಸಾದೇನಹಳ್ಳಿ ಚಿಕ್ಕಣ್ಣ, ಸುಜಾತಮ್ಮ, ಮುತ್ತುವೇಣು, ಸೌಮ್ಯ ಗೋವಿಂದರಾಜು, ಹೇಮಲತಾ ವೇಣು, ರಾಜು ಕೆ., ಬಿಜೆಪಿ ಯುವ ಮುಖಂಡ ಸಾದೇನಹಳ್ಳಿ ಪ್ರಕಾಶ್ ಗೌಡ ಸೇರಿದಂತೆ ಹಲವು ಗಣ್ಯರಿದ್ದರು.