





ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಶಾಸಕ ಎಸ್ ಆರ್ ವಿಶ್ವನಾಥ್ :
ಯಲಹಂಕ : ಕ್ಷೇತ್ರದ ರಾಜಾನುಕುಂಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದ ಭವಾನಿ ಶ್ರೀನಿವಾಸ್ ಅವರನ್ನು ಶಾಸಕ ಎಸ್ ಆರ್ ವಿಶ್ವನಾಥ್ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷೆ ಡಾ.ವಾಣಿಶ್ರೀ ವಿಶ್ವನಾಥ್, ಹಿರಿಯ ಬಿಜೆಪಿ ಮುಖಂಡರಾದ. ಎಸ್ ಎನ್ ರಾಜಣ್ಣ, ದಿಬ್ಬೂರು ಜಯಣ್ಣ, ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಯಲಹಂಕ ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಹೆಸರಘಟ್ಟ ಹೋಬಳಿ ಬಿಜೆಪಿ ಉಪಾಧ್ಯಕ್ಷ ಇಟಗಲ್ ಪುರ ಮೋಹನ್, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಎಸ್.ಜಿ.ನರಸಿಂಹ ಮೂರ್ತಿ(ಎಸ್.ಟಿ.ಡಿ.ಮೂರ್ತಿ), ಚನ್ನಮ್ಮ, ಅಂಬಿಕಾ ರಾಜೇಂದ್ರ ಕುಮಾರ್, ತಾ.ಪಂ.ಮಾಜಿ ಅಧ್ಯಕ್ಷ ಮುನಿದಾಸಪ್ಪ, ಟಿ.ಪಿ.ಪ್ರಕಾಶ್, ಸಿ.ಎಲ್.ಎನ್. ಗೌಡ, ಗ್ರಾ.ಮಂಡಲ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಜಗದೀಶ್, ಗ್ರಾ.ಪಂ.ಸದಸ್ಯರಾದ ಆರ್.ಡಿ. ರಾಜಣ್ಣ, ಆರ್.ಎಚ್. ಹನುಮೇಗೌಡ, ನಾಗೇಶ್, ಸಾದೇನಹಳ್ಳಿ ಚಿಕ್ಕಣ್ಣ, ವೆಂಕಟೇಶ್, ಸುಜಾತಮ್ಮ, ಮುತ್ತುವೇಣು, ಸೌಮ್ಯ ಗೋವಿಂದರಾಜು, ಹೇಮಲತಾ ವೇಣು, ರಾಜು ಕೆ., ಬಿಜೆಪಿ ಯುವ ಮುಖಂಡ ಸಾದೇನಹಳ್ಳಿ ಪ್ರಕಾಶ್ ಗೌಡ ಸೇರಿದಂತೆ ಹಲವು ಗಣ್ಯರಿದ್ದರು.