ಸಚಿವ ಕೃಷ್ಣಬೈರೇಗೌಡರಿಂದ ಫಲಾನುಭವಿಗಳಿಗೆ ಮನೆಗಳ ಹಕ್ಕುಪತ್ರ ವಿತರಣೆ :
ಬ್ಯಾಟರಾಯನಪುರ : ಕ್ಷೇತ್ರದ ತಿಮ್ಮಸಂದ್ರ ಮತ್ತು ತರಹುಣಸೆ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ, 600 ಜನರಿಗೆ ಉಚಿತ ಕ್ಯಾನ್ ಗಳ ವಿತರಣೆ, ತರಹುಣಸೆ ಗ್ರಾಮದ 20ಕ್ಕೂ ಹೆಚ್ಚು ಫಲಾನುಭವಿಗಳಿಗೆ ಮನೆಗಳ ಹಕ್ಕುಪತ್ರ ವಿತರಣೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಕೃಷ್ಣಬೈರೇಗೌಡ ಬುಧವಾರ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ ‘ಮನೆ ಎಂಬುದು ಪ್ರತಿ‌ ಮನುಷ್ಯನಿಗೆ ನೆಮ್ಮದಿ ನೀಡುವ ಸ್ಥಳ, ಅದಕ್ಕೆ ಸೂಕ್ತ ದಾಖಲೆ ಇಲ್ಲದಿಧ್ದರೆ, ನೆಮ್ಮದಿ ಇರುವುದಿಲ್ಲ. ಈ ದಿಸೆಯಲ್ಲಿ ಕಳೆದ ಹಲವು ದಶಕಗಳಿಂದ ತಮ್ಮದೇ ಮನೆಯಲ್ಲಿ ಅನಧಿಕೃತವಾಗಿ ವಾಸವಿದ್ದಂತೆ ಇದ್ದ ಸುಮಾರು 20ಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಮೂಲಕ ಅವರ ನೆಮ್ಮದಿಯ ಬದುಕಿಗೆ ಸಹಕಾರ ನೀಡಲಾಗಿದೆ. ಚುನಾವಣಾ ಪೂರ್ವದಲ್ಲಿ ಹಕ್ಕುಪತ್ರ ವಿತರಿಸುವ ಭರವಸೆ ನೀಡಲಾಗಿತ್ತು, ಇಂದು ಹಕ್ಕುಪತ್ರ ವಿತರಿಸುವ ಮೂಲಕ ಆ ಭರವಸೆಯನ್ನು ಈಡೇರಿಸಲಾಗಿದೆ. ಈ ಕಾರ್ಯಕ್ಕೆ ಅಧಿಕಾರಿಗಳು ಸಹ ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಸಹಕಾರ ನೀಡಿದ್ದಾರೆ, ಹಕ್ಕುಪತ್ರ ವಿತರಣೆಯ ಈ ಶುಭ ಸಂದರ್ಭದಲ್ಲಿ ಹಕ್ಕುಪತ್ರ ಪಡೆದ ಎಲ್ಲಾ ನಾಗರೀಕರಿಗೂ ಶುಭ ಹಾರೈಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಯಲಹಂಕ ತಹಶಿಲ್ದಾರ್ ಶ್ರೇಯಸ್, ಜಿ.ಪಂ.ಮಾಜಿ ಅಧ್ಯಕ್ಷ ಕೆ.ಅಶೋಕನ್, ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ಕೆ.ಮಹೇಶ್ ಕುಮಾರ್, ಬೆಟ್ಟಹಲಸೂರು ಗ್ರಾ.ಪಂ.ಅಧ್ಯಕ್ಷೆ ಹೇಮಾವತಿ ನಾಗರಾಜ್ ಬಾಬು, ಉಪಾಧ್ಯಕ್ಷ ಬಿ.ಆರ್.ಪ್ರವೀಣ್, ಗ್ರಾ.ಪಂ. ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್, ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀರಾಮಣ್ಣ, ಬೆಟ್ಟಹಲಸೂರು ಪ್ರಾ.ಕೃ.ಪ. ಸಹಕಾರ ಸಂಘದ ಅಧ್ಯಕ್ಷ ಪಂಚಮಿ ಶ್ರೀನಿವಾಸ್,ಗ್ರಾ.ಪಂ. ಸದಸ್ಯರಾದ ಟಿ.ಎಸ್.ನವೀನ್, ಅಮರ್, ರಮ್ಯವೇಣುಗೋಪಾಲ್, ಪ್ರೇಮ ಮಂಜುನಾಥ್, ಬಾಲರಾಜ್,‌ ಕಾಂಗ್ರೆಸ್ ಮುಖಂಡರಾದ ಬಿ.ಎನ್.ನಾಗೇಶ್, ತಿರುಮಳಪ್ಪ, ಮೈಲಾರಸ್ವಾಮಿ, ಗಡೇನಹಳ್ಳಿ ರಾಜಣ್ಣ, ಆನಂದ್, ಯುವ ಕಾಂಗ್ರೆಸ್ ಮುಖಂಡ ಅಜೆಯ್ ಸೇರಿದಂತೆ ಗ್ರಾ.ಪಂ.ಸದಸ್ಯರು ಹಾಗೂ ಗ್ರಾಮದ ಮುಖಂಡರಿದ್ದರು.

Leave a Reply

Your email address will not be published. Required fields are marked *