
ಹಿರಿಯ ಬಿಜೆಪಿ ಮುಖಂಡ ಸಿ.ಚಂದ್ರಶೇಖರ್ ನಿಧನ :
ಯಲಹಂಕ : ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು, ಹಿರಿಯ ಬಿಜೆಪಿ ಮುಖಂಡರಾದ ಸಿ.ಚಂದ್ರಶೇಖರ್(59) ಬುಧವಾರ ಬೆಳಿಗ್ಗೆ ನಿಧನರಾಗಿದ್ದು, ತಂದೆ, ಪತ್ನಿ, ಇಬ್ಬರು ಮಕ್ಕಳು ಮತ್ತು ತಮ್ಮನನ್ನು ಅಗಲಿದ್ದಾರೆ.
ಕಳೆದ ಕೆಲವು ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಚಂದ್ರಶೇಖರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾದರು. ಮೃತರ ಅಂತಿಮ ಸಂಸ್ಕಾರವನ್ನು ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ನೆರವೇರಿಸಲಾಗಿದೆ.
ಚಂದ್ರಶೇಖರ್ ಅವರ ನಿಧನಕ್ಕೆ ಶಾಸಕ ಎಸ್ ಆರ್ ವಿಶ್ವನಾಥ್, ಡಾ.ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ಹಿರಿಯ ಬಿಜೆಪಿ ಮುಖಂಡರಾದ ಎಸ್ ಎನ್ ರಾಜಣ್ಣ, ದಿಬ್ಬೂರು ಜಯಣ್ಣ, ಡಿ.ಜಿ.ಅಪ್ಪಯ್ಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಜಿಲ್ಲಾಧ್ಯಕ್ಷ ಜಿ.ಜೆ.ಮೂರ್ತಿ, ಗ್ರಾ.ಮಂಡಲ ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್, ನಗರ ಮಂಡಲ ಬಿಜೆಪಿ ಅಧ್ಯಕ್ಷ ಎಂ.ಸತೀಶ್, ಪ್ರಭಾರ ಅಧ್ಯಕ್ಷ ಮುರಾರಿರಾಮು, ಪ್ರಧಾನ ಕಾರ್ಯದರ್ಶಿಗಳಾದ ವಿ.ಪವನ್, ಈಶ್ವರ್, ಸಿಂಗನಾಯಕನಹಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷ ಟಿ.ಮುನಿರೆಡ್ಡಿ, ಹೆಸರಘಟ್ಟ ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ(ಎಸ್.ಟಿ.ಡಿ.ಮೂರ್ತಿ) ಗ್ರಾ.ಪಂ.ಸದಸ್ಯ ರಾದ ಪದ್ಮಶ್ರೀ ನಾಗರಾಜ್ ರೆಡ್ಡಿ, ಶಾಂತಲಾ ರಾಜಣ್ಣ, ಮಲ್ಲೇಶ್, ಜೀವಿತಾ ಮುನಿಕೃಷ್ಣ, ಕೆ.ಬಾಬು, ಬಿಜೆಪಿ ಮುಖಂಡರಾದ ಇಟಗಲ್ ಪುರ ಮೋಹನ್, ಸೋಮಶೇಖರ್, ತಿಮ್ಮಾರೆಡ್ಡಿ ಸೇರಿದಂತೆ ಅಪಾರ ಸಂಖ್ಯೆಯ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.
ಸಿ.ಚಂದ್ರಶೇಖರ್ ಅವರು 2 ಬಾರಿ ಸಿಂಗನಾಯಕನಹಳ್ಳಿ ಗ್ರಾ.ಪಂ.ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಹಾಲಿ ಸದಸ್ಯರಾಗಿದ್ದರು. ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಬಡವರ ಬಂಧು ಎಂದೇ ಹೆಸರಾಗಿದ್ದ ಶ್ರೀಯುತರು ಗ್ರಾಮದ ಪೂಜಮ್ಮದೇವಿ ದೇವಾಲಯ ವನ್ನು ನಿರ್ಮಿಸಿ ಕೊಟ್ಟಿದ್ದರು. ಹಲವು ವರ್ಷಗಳಿಂದ ಪ್ರತಿ ಯುಗಾದಿ ಹಬ್ಬಕ್ಕೆ ಗ್ರಾಮದ ಬಡವರಿಗೆ ದಿನಸಿ ಪದಾರ್ಥಗಳ ಕಿಟ್ ನೀಡುವ ಮೂಲಕ ಬಡವರಿಗೆ ನೆರವಾಗುತ್ತಾ ಬಂದಿದ್ದರು. ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ಬಡವರಿಗೆ ಉಚಿತ ನಿವೇಶನ ಕೊಡಿಸುವ ನಿಟ್ಟಿನಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಅವರಿಗೆ ಸಲಹೆ ನೀಡಿ, ಬಡವರಿಗೆ ನಿವೇಶನ ನೀಡುವಲ್ಲಿ ಶ್ರಮಿಸಿದ್ದರು.