ವಿಜಯಪುರ: ಜು.30:ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ ಶಿಂಧೆ ಅವರು ಆಲಮೇಲ ತಾಲೂಕಿನಾದ್ಯಂತ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.
ಗುರುವಾರ ಆಲಮೇಲ ತಾಲೂಕಿನ ಕೊರಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದರಿ ಗ್ರಾಮದಲ್ಲಿ ನಿರ್ಮಾಣವಾದ ಅಂಗವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಪಿಓಪಿ ಸೇರಿದಂತೆ ಬಾಕಿಯಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಹಾಗೂ ಅಂಗನವಾಡಿ ಮುಂದೆ ಖಾಲಿಯಿರುವ ಸ್ಥಳದಲ್ಲಿ ಫೇವರ್ಸ್, ಆಟದ ಮೈದಾನ, ಜಾರು ಬಂಡೆಯಂತಹ ಮಕ್ಕಳಿಗೆ ಅನುಕೂಲಕರವಾದ ಆಟಿಗೆಗಳನ್ನು ಅಳವಡಿಸಿ,ಸಸಿಗಳನ್ನು ನೆಟ್ಟು ಮಕ್ಕಳ ಸ್ನೇಹಿ ಅಂಗನವಾಡಿಯನ್ನಾಗಿಸಲು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಪಿಆರ್‍ಇಡಿ ಅಭಿಯಂತರ ಜಿ.ವಾಯ್. ಮುರಾಳ ಅವರಿಗೆ ಸೂಚಿಸಿದರು.
ಗ್ರಾಮದಲ್ಲಿರುವ ಅರೋಗ್ಯ ಉಪ ಕೇಂದ್ರಕ್ಕೆ ಭೇಟಿ ನೀಡಿ, ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿದರು. ಸಿಬ್ಬಂಧಿಗಳು ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಕ್ತ ಕ್ರಮ ಕೈಗೊಳ್ಳಲು ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ನೂತನವಾಗಿ ನಿರ್ಮಾಣ ಮಾಡಲಾದ ಸಿಂದಗಿ- ಗಣಿಹಾರ್ ಡಾಂಬರ್ ರಸ್ತೆಯ ಅಳತೆ ಮತ್ತು ಗುಣಮಟ್ಟ ಪರಿಶೀಲಿನೆ ನಡೆಸಿ, ಗ್ರಾಮೀಣ ಭಾಗದಲ್ಲಿ ಜನರಿಗೆ ಅನುಕೂಲಕರವಾಗುವಂತೆ ಉತ್ತಮ ಗುಣ್ಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಆಲಮೇಲ್ ಪಟ್ಟಣದಲ್ಲಿರುವ ಸಮುದಾಯ ಅರೋಗ್ಯ ಕೇಂದ್ರ, ರಕ್ತ ತಪಾಸಣಾ ಕೇಂದ್ರ, ಆರ್‍ಎನ್‍ಟಿಸಿಪಿ, ನೇತ್ರ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ, ಆರೋಗ್ಯ ಕೇಂದ್ರದಲ್ಲಿ ಸಿಗುವ ವಿವಿಧ ಸೌಲಭ್ಯಗಳ ಕುರಿತು ವೈಧ್ಯರಿಂದ ಮಾಹಿತಿ ಪಡೆದರು. ನಂತರ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಮಂಜೂರಾದ ಹುದ್ದೆಗಳ ಎದುರಾಗಿ ಖಾಲಿಯಿರುವ ಹುದ್ದೆಗಳ ಮಾಹಿತಿ ಪಡೆದ ಅವರು, ಆಸ್ಪತ್ರೆಗೆ ಬರುವ ಸೌಜನ್ಯವಾಗಿ ವರ್ತಿಸುವಂತೆ ಸೂಚನೆ ನಿಡಿದರು. ನಂತರ ಸೊನ್ನ ಬ್ಯಾರೆಜ ಗೆ ಭೇಟಿ ನೀಡಿ ನೀರಿನ ಮಟ್ಟ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಣ್ಣ ಆಶಾಪುರ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಾಬು ರಾಠೋಡ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಆರ್.ಸ್ವಾಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ್ ಜಿಗಳೂರ, ಜಿಲ್ಲಾ ಪಂಚಾಯತಿಯ ಅರುಣಕುಮಾರ ದಳವಾಯಿ, ಪೃಥ್ವಿರಾಜ್ ಪಾಟೀಲ್, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಲಮೇಲ ತಾಲೂಕಿನ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ಅಗತ್ಯ ಸೂಚನೆ ನಿಡಿದ ಸಿಇಓ

ವಿಜಯಪುರ: ಜು.30:ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ ಶಿಂಧೆ ಅವರು ಆಲಮೇಲ ತಾಲೂಕಿನಾದ್ಯಂತ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.
ಗುರುವಾರ ಆಲಮೇಲ ತಾಲೂಕಿನ ಕೊರಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದರಿ ಗ್ರಾಮದಲ್ಲಿ ನಿರ್ಮಾಣವಾದ ಅಂಗವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಪಿಓಪಿ ಸೇರಿದಂತೆ ಬಾಕಿಯಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಹಾಗೂ ಅಂಗನವಾಡಿ ಮುಂದೆ ಖಾಲಿಯಿರುವ ಸ್ಥಳದಲ್ಲಿ ಫೇವರ್ಸ್, ಆಟದ ಮೈದಾನ, ಜಾರು ಬಂಡೆಯಂತಹ ಮಕ್ಕಳಿಗೆ ಅನುಕೂಲಕರವಾದ ಆಟಿಗೆಗಳನ್ನು ಅಳವಡಿಸಿ,ಸಸಿಗಳನ್ನು ನೆಟ್ಟು ಮಕ್ಕಳ ಸ್ನೇಹಿ ಅಂಗನವಾಡಿಯನ್ನಾಗಿಸಲು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಪಿಆರ್‍ಇಡಿ ಅಭಿಯಂತರ ಜಿ.ವಾಯ್. ಮುರಾಳ ಅವರಿಗೆ ಸೂಚಿಸಿದರು.
ಗ್ರಾಮದಲ್ಲಿರುವ ಅರೋಗ್ಯ ಉಪ ಕೇಂದ್ರಕ್ಕೆ ಭೇಟಿ ನೀಡಿ, ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿದರು. ಸಿಬ್ಬಂಧಿಗಳು ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಕ್ತ ಕ್ರಮ ಕೈಗೊಳ್ಳಲು ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ನೂತನವಾಗಿ ನಿರ್ಮಾಣ ಮಾಡಲಾದ ಸಿಂದಗಿ- ಗಣಿಹಾರ್ ಡಾಂಬರ್ ರಸ್ತೆಯ ಅಳತೆ ಮತ್ತು ಗುಣಮಟ್ಟ ಪರಿಶೀಲಿನೆ ನಡೆಸಿ, ಗ್ರಾಮೀಣ ಭಾಗದಲ್ಲಿ ಜನರಿಗೆ ಅನುಕೂಲಕರವಾಗುವಂತೆ ಉತ್ತಮ ಗುಣ್ಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಆಲಮೇಲ್ ಪಟ್ಟಣದಲ್ಲಿರುವ ಸಮುದಾಯ ಅರೋಗ್ಯ ಕೇಂದ್ರ, ರಕ್ತ ತಪಾಸಣಾ ಕೇಂದ್ರ, ಆರ್‍ಎನ್‍ಟಿಸಿಪಿ, ನೇತ್ರ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ, ಆರೋಗ್ಯ ಕೇಂದ್ರದಲ್ಲಿ ಸಿಗುವ ವಿವಿಧ ಸೌಲಭ್ಯಗಳ ಕುರಿತು ವೈಧ್ಯರಿಂದ ಮಾಹಿತಿ ಪಡೆದರು. ನಂತರ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಮಂಜೂರಾದ ಹುದ್ದೆಗಳ ಎದುರಾಗಿ ಖಾಲಿಯಿರುವ ಹುದ್ದೆಗಳ ಮಾಹಿತಿ ಪಡೆದ ಅವರು, ಆಸ್ಪತ್ರೆಗೆ ಬರುವ ಸೌಜನ್ಯವಾಗಿ ವರ್ತಿಸುವಂತೆ ಸೂಚನೆ ನಿಡಿದರು. ನಂತರ ಸೊನ್ನ ಬ್ಯಾರೆಜ ಗೆ ಭೇಟಿ ನೀಡಿ ನೀರಿನ ಮಟ್ಟ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಣ್ಣ ಆಶಾಪುರ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಾಬು ರಾಠೋಡ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಆರ್.ಸ್ವಾಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ್ ಜಿಗಳೂರ, ಜಿಲ್ಲಾ ಪಂಚಾಯತಿಯ ಅರುಣಕುಮಾರ ದಳವಾಯಿ, ಪೃಥ್ವಿರಾಜ್ ಪಾಟೀಲ್, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *