




ಕೆ.ಬಾಬು ಜನ್ಮದಿನ : ಶಾಸಕರಿಂದ ಶುಭ ಹಾರೈಕೆ
ಯಲಹಂಕ : ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳು, ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಾಬು ಅವರ ಹುಟ್ಟು ಹಬ್ಬದ ಪ್ರಯುಕ್ತ ಶಾಸಕರ ಗೃಹ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಕೆ.ಬಾಬು ಅವರಿಗೆ ಕೇಕ್ ತಿನ್ನಿಸಿ, ಸನ್ಮಾನಿಸಿ, ಜನ್ಮದಿನದ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಎಸ್.ಎನ್.ರಾಜಣ್ಣ, ದಿಬ್ಬೂರು ಜಯಣ್ಣ, ಆವಲಹಳ್ಳಿ ಕೇಶವಮೂರ್ತಿ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಹೆಸರಘಟ್ಟ ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ(ಎಸ್.ಟಿ.ಡಿ.ಮೂರ್ತಿ), ಬಿಜೆಪಿ ಮುಖಂಡರಾದ ಶಿವಾನಂದ್, ಗೋವಿಂದರಾಜು, ಯುವ ಮೋರ್ಚಾ ಅಧ್ಯಕ್ಷ ಎಚ್.ಎಸ್.ಕಿರಣ್, ಬಿಜೆಪಿ ಯುವ ಮುಖಂಡ ಪ್ರಕಾಶ್ ಗೌಡ, ಮಂಜುನಾಥ್ ಸೇರಿದಂತೆ ಇನ್ನಿತರರಿದ್ದರು.