

ಬ್ಯಾಟರಾಯನಪುರ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮತ್ತು ಅಬಕಾರಿ ಸುಂಕ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬ್ಯಾಟರಾಯನಪುರ ಕ್ಷೇತ್ರದ ಎಸ್ಟೀಮ್ ಮಾಲ್ ಮುಂದೆ ಪ್ರತಿಭಟನೆ ನಡೆಸಿದರು.
ಬೆಳಿಗ್ಗೆ 10 ಗಂಟೆಗೆ ಎಸ್ಟೀಮ್ ಮಾಲ್ ಬಳಿ ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು ಉತ್ತರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೌಡ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ, ಅಬಕಾರಿ ಸುಂಕ ಏರಿಕೆ ಸೇರಿದಂತೆ ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಜನರ ಮೇಲೆ ಅನಗತ್ಯ ಬೆಲೆ ಏರಿಕೆಯ ಹೊರೆ ಏರಿದ್ದು, ಇದರಿಂದ ಜನಸಾಮಾನ್ಯರ ಬದುಕು ನಿರ್ವಹಣೆ ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಪ್ರತಿಭಟನೆಯಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೌಡ, ಉಪಾಧ್ಯಕ್ಷ ಪ್ರದೀಪ್, ಪ್ರಧಾನ ಕಾರ್ಯದರ್ಶಿ ರಂಜಿತ್, ರಾಜ್ಯ ಉಪಾಧ್ಯಕ್ಷೆ ದಿವ್ಯ ಆರ್.ಕೆ., ಯುವ ಕಾಂಗ್ರೆಸ್ ಮುಖಂಡರಾದ ಅಭಿ಼ಷೇಕ್, ಸಂತೋಷ್ ರಾಜನ್, ಕಿರಣ್, ಅಕ್ಷಯ್, ರವಿಶಂಕರ್, ಶಿವಕುಮಾರ್ ಸಿ.ಎ., ಪ್ರದೀಪ್(ಮುತ್ತು), ತಿಮ್ಮರಾಜು ಸೇರಿದಂತೆ ಇನ್ನಿತರರಿದ್ದರು.