






ಯಲಹಂಕ : ಕ್ಷೇತ್ರದ ಆವಲಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಗಂಗೆ ಕಾಮಗಾರಿ, ರಾಜಾನುಕುಂಟೆ ಗ್ರಾಮದಲ್ಲಿ 50 ಲಕ್ಷ ರು.ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಮತ್ತು ಹೆಸರಘಟ್ಟದಲ್ಲಿ 50 ಲಕ್ಷ ರು.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ 1 ಕೋಟಿ ರು.ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ನಂತರ ಅವರು ಮಾತನಾಡಿ ‘ಅಭಿವೃದ್ಧಿಯೇ ಮೂಲ ಎಂಬ ಆಶಯದೊಂದಿಗೆ ಅನುದಾನದ ಕೊರತೆಯ ನಡುವೆಯೂ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಟಿತವಾಗದಂತೆ ಶ್ರಮಿಸಲಾಗುತ್ತಿದೆ. ಇಂದು ಕ್ಷೇತ್ರದ ಆವಲಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಗಂಗೆ ಪೈಪ್ ಲೈನ್ ಅಳವಡಿಕೆ ಕಾಮಗಾರಿ, ರಾಜಾನುಕುಂಟೆ ಗ್ರಾಮದ ಪಾರ್ವತಿಪುರದ ಶನೈಶ್ವರ ದೇವಾಲಯ ರಸ್ತೆಯಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ, ಹೆಸರಘಟ್ಟದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಯ ಅಗತ್ಯತೆ ನೋಡಿಕೊಂಡು ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
ಮೇ 3ರಂದು ಯಲಹಂಕ ಮಿನಿ ವಿಧಾನಸೌಧದ ಮುಂದೆ ನಿರ್ಮಾಣಗೊಂಡಿರುವ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮವಿದ್ದು, ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತಿಮೆ ಅನಾವರಣಗೊಳಿಸ ಲಿದ್ದಾರೆ. ಮಹತ್ವದ ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಕಂದಾಯ ಸಚಿವ ಕೃಷ್ಣಬೈರೇಗೌಡ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವು ಗಣ್ಯಮಾನ್ಯರು, ಅಂಬೇಡ್ಕರ್ ವಿಚಾರವಾದಿಗಳು, ಸುತ್ತಮುತ್ತಲಿನ ಭಾಗದ ದಲಿತ ಪರ ಚಳುವಳಿಗಾರರು, ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ, ಕಾರ್ಯಕ್ರಮದಲ್ಲಿ ಯಲಹಂಕ ಕ್ಷೇತ್ರದ ಮುಖಂಡರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್ ಎನ್ ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಎನ್.ಡಿ.ಜಗದೀಶ್, ರಾಜಾನುಕುಂಟೆ ಗ್ರಾ.ಪಂ.ಅಧ್ಯಕ್ಷೆ ಭವಾನಿ ಶ್ರೀನಿವಾಸ್, ಮಾಜಿ ಅಧ್ಯಕ್ಷರಾದ ಎಸ್.ಜಿ.ನರಸಿಂಹ ಮೂರ್ತಿ(ಎಸ್.ಟಿ.ಡಿ.ಮೂರ್ತಿ), ವೀರಣ್ಣ ರಿಗ್ಲೆ, ಆರ್.ಎನ್. ಶ್ರೀನಿವಾಸ್, ಬಿಜೆಪಿ ಮುಖಂಡ ರಾದ ಎಸ್.ಆರ್.ಜನಾರ್ದನಗೌಡ, ಎಸ್.ಜಿ.ಪ್ರಶಾಂತ್ ರೆಡ್ಡಿ, ಕಾಕೋಳು ಮುನೇಶ್, ಅಪ್ಪಣ್ಣಗೌಡ, ರಾಜೇಂದ್ರ ಕುಮಾರ್, ಕೊಲುವರಾಯನಹಳ್ಳಿ ಮಂಜುನಾಥ್, ಗ್ರಾ.ಪಂ.ಸದಸ್ಯರಾದ ಸಾದೇನಹಳ್ಳಿ ಚಿಕ್ಕಣ್ಣ, ಆರ್.ಡಿ.ರಾಜಣ್ಣ, ವೆಂಕಟೇಶ್, ರಘು ವಿ., ಹನುಮೇಗೌಡ, ಯುವ ಮುಖಂಡರಾದ ಸಾದೇನಹಳ್ಳಿ ಪ್ರಕಾಶ್ ಗೌಡ, ಅವಿನಾಶ್, ಪಿಡಿಓ ನಾಗರಾಜ್ ಸೇರಿದಂತೆ ಇನ್ನಿತರರಿದ್ದರು.