ಬಸವ ಜಯಂತಿ ಶುಭದಿನದಂದು ಬಸವೇಶ್ವರ ಸ್ವಾಮಿ ದೇವಾಲಯ ಉದ್ಘಾಟನೆ :

ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ತರಹುಣಸೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಬಸವೇಶ್ವರ ಸ್ವಾಮಿ, ಮಹದೇಶ್ವರ ಸ್ವಾಮಿ, ಗಣಪತಿ ಮತ್ತು ನಾಗದೇವತೆ ದೇವಾಲಯಗಳನ್ನು ಬಸವ ಜಯಂತಿಯ ಶುಭ ದಿನವಾದ ಬುಧವಾರ ಉದ್ಘಾಟಿಸಲಾಯಿತು.

ವಿವಿಧ ದೇವರುಗಳ ಪ್ರತಿಷ್ಠಾಪನೆಯ ಈ ಮಹತ್ವದ ದೈವ ಕಾರ್ಯದ ದಿವ್ಯ ಸಾನಿದ್ಯವನ್ನು ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಮತ್ತು ತುಮಕೂರು ಶ್ರೀ ಸಿದ್ಧಗಂಗಾ ಮಹಾಸಂಸ್ಥಾನ‌ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಶಾಸಕ ಎಸ್ ಆರ್ ವಿಶ್ವನಾಥ್, ಬೆಂ.ನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ನಾರಾಯಣ್ ಪಾಲ್ಗೊಂಡು ದೈವ ಕೃಪೆಗೆ ಪಾತ್ರರಾದರು. ಇದೇ ವೇಳೆ ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಪಿ.ಪ್ರಕಾಶ್, ಕಾರ್ಯದರ್ಶಿ ನಾಗರಾಜರಾವ್, ಖಜಾಂಚಿ ಶ್ರೀರಾಮ್, ಬೆಟ್ಟಹಲಸೂರು ಗ್ರಾ.ಪಂ.ಅಧ್ಯಕ್ಷೆ ಹೇಮಾವತಿ ನಾಗರಾಜ್ ಬಾಬು, ಜಿ.ಪಂ.ಮಾಜಿ ಸದಸ್ಯ ವೆಂಕಟೇಶ್ ಸೇರಿದಂತೆ ಬೆಟ್ಟಹಲಸೂರು ಗ್ರಾ.ಪಂ. ಸದಸ್ಯರು, ತರಹುಣಸೆ ಗ್ರಾಮಸ್ಥರು, ಸುತ್ತಮುತ್ತಲಿನ ಗ್ರಾಮಗಳ ಮುಖಂಡರಿದ್ದು, ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನೆರವೇರಿಸಿದರು.

ಪ್ರತಿಷ್ಠಾಪನಾ ಮಹೋತ್ಸವದ ಪ್ರಯುಕ್ತ ಹೋಮ, ಹವನಾದಿ ದೈವ ಕಾರ್ಯಗಳನ್ನು ನೆರವೇರಿಸ ಲಾಯಿತು. ಆಗಮಿಸಿದ್ದ ಭಕ್ತರಿಗೆ ತೀರ್ಥ, ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ಏರ್ಪಡಿಸ ಲಾಗಿತ್ತು. ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ಗ್ರಾಮವನ್ನು ತಳಿರು, ತೋರಣಗಳಿಂದ ಸಿಂಗರಿಸಿ, ಝಗಮಗಿಸುವ ವಿದ್ಯುತ್ ದೀಪಗಳಿಂದ ಆಲಂಕರಿಸಲಾಗಿತ್ತು.

Leave a Reply

Your email address will not be published. Required fields are marked *