

ಅಂಬೇಡ್ಕರ್ ಜಯಂತಿ, ಬಾಬು ಜಗಜೀವರಾಮ್ ಜಯಂತಿ ಪ್ರಯುಕ್ತ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ :
ಯಲಹಂಕ : ಯಲಹಂಕ ಕ್ಷೇತ್ರ ಬಿಜೆಪಿ ವತಿಯಿಂದ ಭಾನುವಾರ ಆಯೋಜಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಸಿಂಗನಾಯಕನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಏರ್ಪಡಿಸಿರುವ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಶಾಸಕ ಎಸ್ ಆರ್ ವಿಶ್ವನಾಥ್ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ ‘ದೇಸಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಣೆಯ ಕಾರ್ಯಕ್ರಮದ ಪ್ರಯುಕ್ತ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸಿದ್ದು, ಇದರಲ್ಲಿ 25ಕ್ಕೂ ಹೆಚ್ಚು ಬಲಿಷ್ಠ ತಂಡಗಳು ಪಾಲ್ಗೊಂಡಿವೆ, ಗೆದ್ದ ತಂಡಗಳಿಗೆ ಭಾನುವಾರ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುತ್ತದೆ, ಯಲಹಂಕ ಕ್ಷೇತ್ರ ಬಿಜೆಪಿ ವತಿಯಿಂದ ವಿಶೇಷವಾಗಿ ಗ್ರಾಮಾಂತರ ಮಂಡಲ ಎಸ್.ಸಿ.ಮೋರ್ಚಾ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್ ಎನ್ ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ, ಯಲಹಂಕ ಗ್ರಾ.ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಬಿಜೆಪಿ ಮುಖಂಡರಾದ ಎಸ್.ಆರ್.ಜನಾರ್ದನಗೌಡ, ಎಸ್.ಜಿ.ಪ್ರಶಾಂತ್ ರೆಡ್ಡಿ, ಶ್ರೀಜಿತ್, ಮಾದಪ್ಪನಹಳ್ಳಿ ವಿಜಯಕುಮಾರ್, ಎನ್.ಡಿ.ಜಗದೀಶ್, ಆವಲಹಳ್ಳಿ ಕಿರಣ್, ಮಂಜುನಾಥ್, ನಂಜೇಗೌಡ, ಎಸ್.ಸಿ.ಮೋರ್ಚಾ ಪದಾಧಿಕಾರಿಗಳಾದ ಬಿ.ಶ್ರೀನಿವಾಸಯ್ಯ, ಮುನಿದಾಸಪ್ಪ, ಲಿಂಗನಹಳ್ಳಿ ವೆಂಕಟೇಶ್, ಮುನಿರಾಜು, ಮಲ್ಲೇಶ್, ಮುನಿಕೃಷ್ಣ, ಈರಣ್ಣ ಜಿ.ಮೌರ್ಯ, ನಾಗೇಶ್ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳಿದ್ದರು.
ಗೆದ್ದ ತಂಡಗಳಿಗೆ ಮೂರು ಬಹುಮಾನಗಳು :
ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ಮೊದಲ ಮೂರು ತಂಡಗಳಿಗೆ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ ವಿತರಿಸಲಾಗುತ್ತಿದ್ದು, ಮೊದಲ ವಿನ್ನರ್ ತಂಡಕ್ಕೆ ಬಹುಮಾನವಾಗಿ 75 ಸಾವಿರ ರು.ನಗದು ಮತ್ತು ಟ್ರೋಫಿ, ರನ್ನರ್ ತಂಡಕ್ಕೆ ಬಹುಮಾನವಾಗಿ 40 ಸಾವಿರ ರು.ನಗದು ಮತ್ತು ಟ್ರೋಫಿ, ಮೂರನೆಯ ತಂಡಕ್ಕೆ 30 ಸಾವಿರ ರು.ನಗದು ಮತ್ತು ಟ್ರೋಫಿ ನೀಡಲಾಗುತ್ತಿದ್ದು, ಯಲಹಂಕ ಕ್ಷೇತ್ರ ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಜನಾರ್ಧನಗೌಡ ಅವರು ಮೂರೂ ಬಹುಮಾನಗಳ ಪ್ರಾಯೋಜಕರಾಗಿದ್ದಾರೆ.