ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ರವರ ಜಯಂತಿ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ :

ಶಾಸಕ ಎಸ್ ಆರ್ ವಿಶ್ವನಾಥ್ ಅವರಿಂದ ಕ್ರೀಡಾ ಕೂಟ ಉದ್ಘಾಟನೆ :

ಯಲಹಂಕ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ರೂವಾರಿ, ಬಾಬು ಜಗಜೀವನ್ ರಾಮ್ ರವರ ಜಯಂತಿ ಪ್ರಯುಕ್ತ ಯಲಹಂಕ ನಗರ ಮಂಡಲ ಬಿಜೆಪಿ ಎಸ್.ಸಿ.ಮೋರ್ಚಾ ವತಿಯಿಂದ ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಅಂಬೇಡ್ಕರ್ ಪ್ರೀಮಿಯರ್ ಲೀಗ್'(APL), ‘ಬಾಬು ಜಗಜೀವನ್ ರಾಮ್ ಕಪ್‌’ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕ ಎಸ್ ಆರ್ ವಿಶ್ವನಾಥ್ ಶನಿವಾರ ಉದ್ಘಾಟಿಸಿದರು.

ನಂತರ ಅವರು ಮಾತನಾಡಿ ‘ಯುವಕರಲ್ಲಿನ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.ಪಂದ್ಯಾವಳಿಯಲ್ಲಿ ಯಲಹಂಕ ನಗರ ಮಂಡಲ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು,ಮುಖಂಡರನ್ನು ಒಳಗೊಂಡಿರುವ ಒಟ್ಟು 12 ತಂಡಗಳಿದ್ದು, ಬಹುತೇಕ ತಂಡಗಳು ವೀರ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಹೊಂದಿರುವುದು ವಿಶೇಷತೆಯಾಗಿದೆ. ಜೂನ್ 1ರಂದು ಯಲಹಂಕ ಉಪನಗರ 4ನೇ ಹಂತದಲ್ಲಿರುವ ನಿಸರ್ಗ ಮೈದಾನದ ‘ಶ್ರೀ. ಶಿವಕುಮಾರ ಸ್ವಾಮೀಜಿ’ ವೇದಿಕೆಯಲ್ಲಿ ನಡೆಯಲಿರುವ ಅಂಬೇಡ್ಕರ್ ಜಯಂತಿ ಮತ್ತು ಬಾಬು ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದೆ.

ಪಂದ್ಯಾವಳಿಯಲ್ಲಿ ಗೆಲ್ಲುವ ತಂಡಗಳಿಗೆ ಮೊದಲ ಬಹುಮಾನವಾಗಿ 50 ಸಾವಿರ ನಗದು ಬಹುಮಾನ ಮತ್ತು ಟ್ರೋಫಿ, ಎರಡನೆಯ ಬಹುಮಾನವಾಗಿ 25 ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ನೀಡಿ ಗೌರವಿಸಲಾಗುವುದು ಎಂದ ಶಾಸಕರು ಇತ್ತೀಚೆಗೆ ಯಲಹಂಕ ಗ್ರಾಮಾಂತರ ಮಂಡಲದ ವತಿಯಿಂದ ಇದೇ ರೀತಿ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಯನ್ನು ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು, ಕಬಡ್ಡಿ ಪಂದ್ಯಾವಳಿ ಅತ್ಯಂತ ಯಶಸ್ವಿಯಾಗಿ ನೆರವೇರಿತು ಎಂದರು.

ಇದೇ ಸಂದರ್ಭದಲ್ಲಿ ಯಲಹಂಕ ನಗರ ಮಂಡಲ ಬಿಜೆಪಿ ಪ್ರಭಾರ ಅಧ್ಯಕ್ಷ ಮುರಾರಿರಾಮು, ಪ್ರಧಾನ ಕಾರ್ಯದರ್ಶಿಗಳಾದ ವಿ.ಪವನ್ ಕುಮಾರ್, ಈಶ್ವರ್, ಯಲಹಂಕ ನಗರ ಮಂಡಲ ಎಸ್.ಸಿ.ಮೋರ್ಚಾ ಅಧ್ಯಕ್ಷ ಕೆ.ಎಂ.ಮುರಳಿ, ಪ್ರಧಾನ ಕಾರ್ಯದರ್ಶಿಗಳಾದ ಅಟ್ಟೂರು ವಿಶ್ವ, ಪುಟ್ಟೇನಹಳ್ಳಿ ಮುನಿರಾಜು, ಉಪಾಧ್ಯಕ್ಷ ಅನಂತಪುರ ಸುರೇಶ್, ಕೋಶಾಧ್ಯಕ್ಷ ಶಿವಕುಮಾರ್, ಹಿರಿಯ ಬಿಜೆಪಿ ಮುಖಂಡರಾದ ಡಾ.ಶಶಿಕುಮಾರ್, ಎಂ.ಮುನಿರಾಜು, ರಮೇಶ್, ಎಸ್.ಸೋಮಶೇಖರ್, ಚಂದ್ರಣ್ಣ, ಚೌಡೇಶ್ವರಿ ವಾರ್ಡ್ ಬಿಜೆಪಿ ಅಧ್ಯಕ್ಷ ವಿ‌.ವಿ.ರಾಮಮೂರ್ತಿ, ಅಟ್ಟೂರು ವಾರ್ಡ್ ಅಧ್ಯಕ್ಷ ನಾರಾಯಣ ಸ್ವಾಮಿ, ವಾರ್ಡ್ 1ರ ಎಸ್ಸಿ ಮೋರ್ಚಾ ಅಧ್ಯಕ್ಷ ಶಿವಕುಮಾರ್, ವಾರ್ಡ್ 2ರ ಅಧ್ಯಕ್ಷ ನಾಗರಾಜ್, ವಾರ್ಡ್ 3ರ ಅಧ್ಯಕ್ಷ ಸುನಿಲ್ ಕುಮಾರ್, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಎಚ್.ಎಸ್. ಕಿರಣ್, ಮಹಿಳಾ ಮೋರ್ಚಾದ ಬೃಂದಾ ವೀರೇಶ್, ಗೌರಿ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *